Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದ್ವೇಷ ಭಾಷಣದ ವಿರುದ್ಧ ಸುಪ್ರೀಂ ಕೋರ್ಟ್...

ದ್ವೇಷ ಭಾಷಣದ ವಿರುದ್ಧ ಸುಪ್ರೀಂ ಕೋರ್ಟ್ ಎಚ್ಚರಿಕೆ : ರೂರ್ಕಿ 'ಧರ್ಮ ಸಂಸದ್'ಗೆ ಅನುಮತಿ ನಿರಾಕರಣೆ

ವಾರ್ತಾಭಾರತಿವಾರ್ತಾಭಾರತಿ27 April 2022 12:43 PM IST
share
ದ್ವೇಷ ಭಾಷಣದ ವಿರುದ್ಧ ಸುಪ್ರೀಂ ಕೋರ್ಟ್ ಎಚ್ಚರಿಕೆ : ರೂರ್ಕಿ ಧರ್ಮ ಸಂಸದ್ಗೆ ಅನುಮತಿ ನಿರಾಕರಣೆ

ಹೊಸದಿಲ್ಲಿ: ಉತ್ತರಾಖಂಡ ರಾಜ್ಯದ ರೂರ್ಕಿ ನಗರದಲ್ಲಿ ಬುಧವಾರ ನಿಗದಿಯಾಗಿರುವ "ಧರ್ಮ ಸಂಸದ್" ಅಥವಾ ಧಾರ್ಮಿಕ ಸಮಾವೇಶಕ್ಕೆ ಹರಿದ್ವಾರ ಜಿಲ್ಲಾಡಳಿತವು  ಮಂಗಳವಾರ ಅನುಮತಿ ನಿರಾಕರಿಸಿದೆ ಎಂದು ‘ದಿ ಇಂಡಿಯನ್ ಎಕ್ಸ್‌ಪ್ರೆಸ್’  ವರದಿ ಮಾಡಿದೆ.

ರೂರ್ಕಿ ಬಳಿಯ ದಾದಾ ಜಲಾಲ್‌ಪುರ್ ಗ್ರಾಮದ ಐದು ಕಿಲೋಮೀಟರ್ ವ್ಯಾಪ್ತಿಯೊಳಗೆ ಐದಕ್ಕಿಂತ ಹೆಚ್ಚು ಜನರು ಸೇರುವುದನ್ನು ಜಿಲ್ಲಾಡಳಿತವು ನಿಷೇಧಿಸಿದೆ.

ಯಾರಿಗೂ ಅನುಮತಿ ನೀಡದ ಕಾರಣ ಮಹಾಪಂಚಾಯತ್ ತಡೆಯಲು ಭಾರೀ ಪೊಲೀಸ್ ಪಡೆಯನ್ನು ನಿಯೋಜಿಸಲಾಗಿದೆ. ಯಾರಾದರೂ  ಕಾರ್ಯಕ್ರಮವನ್ನು ಆಯೋಜಿಸಲು ಪ್ರಯತ್ನಿಸಿದರೆ ಅದನ್ನು ಕಾನೂನುಬಾಹಿರ ಚಟುವಟಿಕೆ ಎಂದು ಪರಿಗಣಿಸಲಾಗುತ್ತದೆ ಎನ್ನುವುದಾಗಿ  ಹರಿದ್ವಾರದ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಯೋಗೇಂದ್ರ ಸಿಂಗ್ ರಾವತ್ ತಿಳಿಸಿದ್ದಾರೆ.

ಸುಮಾರು 200 ಪೊಲೀಸ್ ಸಿಬ್ಬಂದಿ, 100 ಇನ್ಸ್‌ಪೆಕ್ಟರ್‌ಗಳು ಹಾಗೂ  ಸಬ್ ಇನ್ಸ್‌ಪೆಕ್ಟರ್‌ಗಳು ಮತ್ತು ಪ್ರಾಂತೀಯ ಸಶಸ್ತ್ರ ಕಾನ್‌ಸ್ಟಾಬ್ಯುಲರಿಯ ಐದು ಕಂಪನಿಗಳನ್ನು ಈ ಪ್ರದೇಶದಲ್ಲಿ ನಿಯೋಜಿಸಲಾಗಿದೆ ಎಂದು ರಾವತ್ ಹೇಳಿದರು.

ಧಾರ್ಮಿಕ ಕಾರ್ಯಕ್ರಮದಲ್ಲಿ ಯಾವುದೇ ದ್ವೇಷ ಭಾಷಣ ಮಾಡದಂತೆ ನೋಡಿಕೊಳ್ಳುವಂತೆ ಸುಪ್ರೀಂ ಕೋರ್ಟ್ ಉತ್ತರಾಖಂಡ ಸರಕಾರಕ್ಕೆ ಎಚ್ಚರಿಕೆ ನೀಡಿದ ಗಂಟೆಗಳ ನಂತರ ಜಿಲ್ಲಾಡಳಿತದಿಂದ ಕ್ರಮವು ಹೊರಬಿದ್ದಿದೆ.

ಡಿಸೆಂಬರ್‌ನಲ್ಲಿ  ಹರಿದ್ವಾರ ಹಾಗೂ ದಿಲ್ಲಿಯಲ್ಲಿ  ನಡೆದ ಇದೇ ರೀತಿಯ ಕಾರ್ಯಕ್ರಮಗಳಲ್ಲಿ ಮುಸ್ಲಿಮರ ವಿರುದ್ಧ ದ್ವೇಷ ಭಾಷಣದ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ "ಯಾವುದೇ ಅಹಿತಕರ ಪರಿಸ್ಥಿತಿ"ಗೆ ರಾಜ್ಯದ ಮುಖ್ಯ ಕಾರ್ಯದರ್ಶಿ ಜವಾಬ್ದಾರರಾಗಿರುತ್ತಾರೆ ಎಂದು ನ್ಯಾಯಾಲಯ ಎಚ್ಚರಿಕೆ ನೀಡಿತ್ತು.

ಜಿಲ್ಲಾಡಳಿತದ ಎಚ್ಚರಿಕೆಯ  ಹೊರತಾಗಿಯೂ ಹರಿದ್ವಾರ ಮೂಲದ ಹಿಂದುತ್ವ ನಾಯಕ ಹಾಗೂ  ಬುಧವಾರದ ಧಾರ್ಮಿಕ ಸಮಾವೇಶದ ಸಂಘಟಕರಲ್ಲಿ ಒಬ್ಬರಾದ ಆನಂದ್ ಸ್ವರೂಪ್ ತಮ್ಮ ಯೋಜನೆಯನ್ನು ಮುಂದುವರಿಸುವುದಾಗಿ 'ಇಂಡಿಯನ್ ಎಕ್ಸ್‌ಪ್ರೆಸ್‌'ಗೆ ತಿಳಿಸಿದರು. ತನ್ನ ಜೊತೆಗೆ, "ಧರ್ಮ ಸಂಸದ್" ನ ಕೋರ್ ಕಮಿಟಿ ಸದಸ್ಯರಾದ ಯತೀಂದ್ರಾನಂದ ಗಿರಿ, ಪ್ರಬೋಧಾನಂದ ಸರಸ್ವತಿ ಹಾಗೂ  ಇತರರು ಸಮಾವೇಶದ ಭಾಗವಾಗಲಿದ್ದಾರೆ ಎಂದು ಸ್ವರೂಪ್ ಹೇಳಿದರು.

ಎಪ್ರಿಲ್ 16 ರಂದು ಹನುಮ ಜಯಂತಿ ಮೆರವಣಿಗೆಯ ಸಂದರ್ಭದಲ್ಲಿ ದಾದಾ ಜಲಾಲ್‌ಪುರ ಗ್ರಾಮದಲ್ಲಿ ಭುಗಿಲೆದ್ದ ಕೋಮು ಹಿಂಸಾಚಾರದ ಪ್ರಮುಖ ದುಷ್ಕರ್ಮಿಗಳನ್ನು ಬಂಧಿಸುವಲ್ಲಿ ಪೊಲೀಸರು ವಿಫಲವಾದ ಬಗ್ಗೆ ಚರ್ಚಿಸಲು ಈ ಕಾರ್ಯಕ್ರಮವನ್ನು ಯೋಜಿಸಲಾಗಿದೆ ಎಂದು ಸ್ವರೂಪ್ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X