Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೇಂದ್ರವು ಅಬಕಾರಿ ಸುಂಕ...

ಕೇಂದ್ರವು ಅಬಕಾರಿ ಸುಂಕ ಕಡಿತಗೊಳಿಸಿದ್ದರೂ ಕೆಲವು ರಾಜ್ಯಗಳು ಸ್ಥಳೀಯ ತೆರಿಗೆಗಳನ್ನು ತಗ್ಗಿಸಿಲ್ಲ: ಪ್ರಧಾನಿ

ಪೆಟ್ರೋಲ್ ಮತ್ತು ಡೀಸೆಲ್ ಬೆಲೆ

ವಾರ್ತಾಭಾರತಿವಾರ್ತಾಭಾರತಿ27 April 2022 1:36 PM IST
share
ಕೇಂದ್ರವು ಅಬಕಾರಿ ಸುಂಕ ಕಡಿತಗೊಳಿಸಿದ್ದರೂ ಕೆಲವು ರಾಜ್ಯಗಳು ಸ್ಥಳೀಯ ತೆರಿಗೆಗಳನ್ನು ತಗ್ಗಿಸಿಲ್ಲ: ಪ್ರಧಾನಿ

ಹೊಸದಿಲ್ಲಿ,ಎ.27: ಪ್ರತಿಪಕ್ಷ ಆಡಳಿತದ ರಾಜ್ಯಗಳ ವಿರುದ್ಧ ಬುಧವಾರ ದಾಳಿ ನಡೆಸಿದ ಪ್ರಧಾನಿ ನರೇಂದ್ರ ಮೋದಿಯವರು, ಕೇಂದ್ರವು ಕಳೆದ ವರ್ಷದ ನವಂಬರ್ನ ಲ್ಲಿ ಅಬಕಾರಿ ಸುಂಕವನ್ನು ಕಡಿತಗೊಳಿಸಿದ್ದರೂ ಕೆಲವು ರಾಜ್ಯಗಳು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ವ್ಯಾಟ್ ಅನ್ನು ಕಡಿಮೆ ಮಾಡಿರಲಿಲ್ಲ ಮತ್ತು ಕೇಂದ್ರದ ಕ್ರಮಗಳ ಲಾಭಗಳನ್ನು ಜನರಿಗೆ ವರ್ಗಾಯಿಸದೆ ಅವರಿಗೆ ಅನ್ಯಾಯವನ್ನು ಮಾಡಿದ್ದವು ಎಂದು ಹೇಳಿದರು.
‌
ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ದೇಶದಲ್ಲಿಯ ಕೋವಿಡ್ ಸ್ಥಿತಿಯ ಕುರಿತು ಮುಖ್ಯಮಂತ್ರಿಗಳೊಂದಿಗಿನ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಮೋದಿ,ಜಾಗತಿಕ ಸ್ಥಿತಿಯಿಂದಾಗಿ ಜನರು ಎದುರಿಸುತ್ತಿರುವ ಸವಾಲುಗಳನ್ನು ಪ್ರತ್ಯೇಕವಾಗಿ ಚರ್ಚಿಸಲು ತಾನು ಬಯಸಿದ್ದೇನೆ. ಈಗ ಉದ್ಭವಿಸಿರುವ ಯುದ್ಧದ ಸ್ಥಿತಿಯು ಪೂರೈಕೆ ಸರಪಳಿಯ ಮೇಲೆ ಪ್ರತಿಕೂಲ ಪರಿಣಾವನ್ನುಂಟು ಮಾಡಿದೆ ಮತ್ತು ಇಂತಹ ಸ್ಥಿತಿಯಲ್ಲಿ ಸವಾಲುಗಳು ದಿನೇ ದಿನೇ ಹೆಚ್ಚುತ್ತಿವೆ ಎಂದು ರಶ್ಯ-ಉಕ್ರೇನ್ ನಡುವಿನ ಸಂಘರ್ಷವನ್ನು ಪ್ರಸ್ತಾವಿಸಿ ಹೇಳಿದರು.

ಜಾಗತಿಕ ಬಿಕ್ಕಟ್ಟು ಹಲವಾರು ಸವಾಲುಗಳನ್ನು ಒಡ್ಡುತ್ತಿದೆ. ಇಂತಹ ಸ್ಥಿತಿಯಲ್ಲಿ ಕೇಂದ್ರ ಮತ್ತು ರಾಜ್ಯಗಳ ನಡುವಿನ ಸಹಕಾರಿ ಒಕ್ಕೂಟವಾದದ ಆಶಯವನ್ನು ಮತ್ತು ಸಮನ್ವಯವನ್ನು ಹೆಚ್ಚಿಸುವುದು ಅನಿವಾರ್ಯವಾಗಿದೆ ಎಂದರು.
 
ಪೆಟ್ರೋಲ್ ಮತ್ತು ಡೀಸೆಲ್ಗಳ ಅಧಿಕ ಬೆಲೆಗಳನ್ನು ಪ್ರಸ್ತಾವಿಸಿದ ಮೋದಿ,ಕಳೆದ ವರ್ಷದ ನವಂಬರ್ನಲ್ಲಿ ಜನರ ಮೇಲಿನ ಹೊರೆಯನ್ನು ತಗ್ಗಿಸಲು ಈ ಇಂಧನಗಳ ಮೇಲಿನ ಅಬಕಾರಿ ಸುಂಕವನ್ನು ಕಡಿತಗೊಳಿಸಿದ್ದ ಕೇಂದ್ರವು,ಸ್ಥಳೀಯ ತೆರಿಗೆಗಳನ್ನು ಇಳಿಸುವಂತೆ ಮತ್ತು ಜನರಿಗೆ ಲಾಭಗಳನ್ನು ವರ್ಗಾಯಿಸುವಂತೆ ರಾಜ್ಯಗಳನ್ನು ಆಗ್ರಹಿಸಿತ್ತು. ಕೆಲವು ರಾಜ್ಯಗಳು ತೆರಿಗೆಗಳನ್ನು ಇಳಿಸಿದ್ದವು,ಆದರೆ ಕೆಲವು ರಾಜ್ಯಗಳು ಜನರಿಗೆ ಯಾವುದೇ ಲಾಭವನ್ನು ನೀಡಿರಲಿಲ್ಲ. ಇದರಿಂದಾಗಿ ಈ ರಾಜ್ಯಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಅಧಿಕ ಮಟ್ಟದಲ್ಲಿಯೇ ಮುಂದುವರಿದಿವೆ. ಒಂದು ರೀತಿಯಲ್ಲಿ ಇದು ಜನರಿಗೆ ಮಾಡಿರುವ ಅನ್ಯಾಯ ಮಾತ್ರವಲ್ಲ,ಇದು ನೆರೆಯ ರಾಜ್ಯಗಳ ಮೇಲೂ ಪರಿಣಾಮವನ್ನು ಬೀರುತ್ತಿದೆ ಎಂದರು.

ಮಹಾರಾಷ್ಟ್ರ,ಪ.ಬಂಗಾಳ,ತೆಲಂಗಾಣ,ಆಂಧ್ರಪ್ರದೇಶ,ಕೇರಳ, ಜಾರ್ಖಂಡ್ ಮತ್ತು ತಮಿಳುನಾಡಿನಂತಹ ಕೆಲವು ರಾಜ್ಯಗಳು ಒಂದಲ್ಲ ಒಂದು ಕಾರಣದಿಂದ ಕೇಂದ್ರದ ಮನವಿಗೆ ಕಿವಿಗೊಟ್ಟಿರಲಿಲ್ಲ ಮತ್ತು ಈ ರಾಜ್ಯಗಳ ಜನರ ಮೇಲಿನ ಹೊರೆ ಮುಂದುವರಿದಿದೆ ಎಂದ ಮೋದಿ, ಈಗಲಾದರೂ ವ್ಯಾಟ್ ಅನ್ನು ಇಳಿಸಿ ಜನರ ಮೇಲಿನ ಹೊರೆಯನ್ನು ತಗ್ಗಿಸಿ ಎಂದು ತಾನು ಈ ರಾಜ್ಯಗಳಿಗೆ ಮನವಿ ಮಾಡಿಕೊಳ್ಳುತ್ತಿದ್ದೇನೆ ಎಂದು ಹೇಳಿದರು.
                  
ಮೋದಿ ದಾಳಿಗೆ ಕಾಂಗ್ರೆಸ್ ತಿರುಗೇಟು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ವ್ಯಾಟ್ನ್ನು ತಗ್ಗಿಸುವಂತೆ ರಾಜ್ಯಗಳಿಗೆ ಮನವಿ ಮಾಡಿಕೊಂಡಿರುವ ಮೋದಿಯವರನ್ನು ಕಾಂಗ್ರೆಸ್ ನಾಯಕರು ಟೀಕಿಸಿದ್ದಾರೆ.
 
ಕಳೆದ ವರ್ಷ ಪೆಟ್ರೋಲ್ ಮತ್ತು ಡೀಸೆಲ್ಗಳ ಬೆಲೆಗಳನ್ನು ನಿರಂತರವಾಗಿ ಹೆಚ್ಚಿಸುವ ಮೂಲಕ ಕೇಂದ್ರವು 26 ಲ.ಕೋ.ರೂ.ಗಳನ್ನು ಗಳಿಸಿದೆ. ಇದನ್ನು ರಾಜ್ಯಗಳೊಂದಿಗೆ ಹಂಚಿಕೊಳ್ಳಲಾಗಿದೆಯೇ? ನೀವು (ಮೋದಿ) ಸಕಾಲದಲ್ಲಿ ರಾಜ್ಯಗಳ ಜಿಎಸ್ಟಿ ಪಾಲನ್ನು ಪಾವತಿಸಿಲ್ಲ ಮತ್ತು ವ್ಯಾಟ್ ತಗ್ಗಿಸುವಂತೆ ಹೇಳುತ್ತಿದ್ದೀರಿ ಎಂದು ಹೇಳಿದ ಕಾಂಗ್ರೆಸ್ ನಾಯಕ ಪವನ ಖೇರಾ,ಮೋದಿ ಮೊದಲು ಅಬಕಾರಿ ಸುಂಕವನ್ನು ಇನ್ನಷ್ಟು ಕಡಿತಗೊಳಿಸಲಿ ಮತ್ತು ನಂತರ ವ್ಯಾಟ್ ಕಡಿಮೆ ಮಾಡುವಂತೆ ಇತರರಿಗೆ ಹೇಳಲಿ ಎಂದು ಆಗ್ರಹಿಸಿದರು.

ಇಂಧನ ಬೆಲೆ ಏರಿಕೆ ಕುರಿತು ತನ್ನ ಕರ್ತವ್ಯದಿಂದ ಕೇಂದ್ರವು ನುಣುಚಿಕೊಳ್ಳುತ್ತಿದೆ ಎಂದು ಹೇಳಿದ ಕಾಂಗ್ರೆಸ್ ನಾಯಕ ದೀಪೇಂದರ್ ಎಸ್.ಹೂಡಾ ಅವರು,ಬಿಜೆಪಿ ಅಧಿಕಾರದಲ್ಲಿರುವ ಹರ್ಯಾಣಾದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ಅತ್ಯಂತ ಹೆಚ್ಚಿನ ವ್ಯಾಟ್ ಹೇರಲಾಗಿದೆ. ಜಾಗತಿಕ ತೈಲ ಬೆಲೆಗಳು ಹೆಚ್ಚಿದಾಗ ಇಂಧನ ಬೆಲೆಗಳನ್ನು ಹೆಚ್ಚಿಸಲಾಗುತ್ತದೆ,ಆದರೆ ಜಾಗತಿಕವಾಗಿ ಗೋದಿಯ ಬೆಲೆಗಳಲ್ಲಿ ಏರಿಕೆಯಾದಾಗ ರೈತರು ಗೋದಿಗೆ ಹೆಚ್ಚಿನ ಕನಿಷ್ಠ ಬೆಂಬಲ ಬೆಲೆಯನ್ನು ಪಡೆಯುವುದಿಲ್ಲ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X