Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪ್ರಧಾನಿಯ ಕುರಿತು ‘ಜುಮ್ಲಾ’ ಪದದ ಬಳಕೆ...

ಪ್ರಧಾನಿಯ ಕುರಿತು ‘ಜುಮ್ಲಾ’ ಪದದ ಬಳಕೆ ಸೂಕ್ತವೇ ಎಂದು ಪ್ರಶ್ನಿಸಿದ ದಿಲ್ಲಿ ಹೈಕೋರ್ಟ್

ಉಮರ್ ಖಾಲಿದ್ ಜಾಮೀನು ಅರ್ಜಿ ವಿಚಾರಣೆ

ವಾರ್ತಾಭಾರತಿವಾರ್ತಾಭಾರತಿ27 April 2022 4:32 PM IST
share
ಪ್ರಧಾನಿಯ ಕುರಿತು ‘ಜುಮ್ಲಾ’ ಪದದ ಬಳಕೆ ಸೂಕ್ತವೇ ಎಂದು ಪ್ರಶ್ನಿಸಿದ ದಿಲ್ಲಿ ಹೈಕೋರ್ಟ್

ಹೊಸದಿಲ್ಲಿ,ಎ.27: ದೇಶದ ಪ್ರಧಾನಿಯವರ ಕುರಿತು ಮಾತನಾಡುವಾಗ ‘ಜುಮ್ಲಾ ( ಸುಳ್ಳು ಭರವಸೆ)’ ಪದದ ಬಳಕೆಯು ಸೂಕ್ತವೇ ಎಂದು ಬುಧವಾರ ಪ್ರಶ್ನಿಸಿದ ದಿಲ್ಲಿ ಉಚ್ಚ ನ್ಯಾಯಾಲಯವು,ಸರಕಾರವನ್ನು ಟೀಕಿಸುವಾಗ ಲಕ್ಷ್ಮಣ ರೇಖೆಯೊಂದಿರಬೇಕು ಎಂದು ಹೇಳಿತು.

ಬಂಧನದಲ್ಲಿರುವ ಜೆಎನ್ಯುದ ಮಾಜಿ ವಿದ್ಯಾರ್ಥಿ ನಾಯಕ ಹಾಗೂ ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಸಲ್ಲಿಸಿರುವ ಜಾಮೀನು ಅರ್ಜಿಯ ವಿಚಾರಣೆಯನ್ನು ನಡೆಸುತ್ತಿರುವ ಉಚ್ಚ ನ್ಯಾಯಾಲಯವು ಅವರ ಭಾಷಣದ ಧ್ವನಿಮುದ್ರಿಕೆಯನ್ನು ಆಲಿಸುತ್ತಿದ್ದಾಗ ಈ ಅಭಿಪ್ರಾಯವನ್ನು ವ್ಯಕ್ತಪಡಿಸಿತು.
 
ಈಶಾನ್ಯ ದಿಲ್ಲಿಯಲ್ಲಿ ಸಂಭವಿಸಿದ್ದ ಕೋಮು ಗಲಭೆಗಳಿಗೆ ಕೆಲವು ದಿನಗಳ ಮುನ್ನ 2020 ಫೆಬ್ರವರಿಯಲ್ಲಿ ಅಮರಾವತಿಯಲ್ಲಿ ಬಹಿರಂಗ ಭಾಷಣವನ್ನು ಮಾಡಿದ್ದ ಸಂದರ್ಭದಲ್ಲಿ ಖಾಲಿದ್ ‘ಜುಮ್ಲಾ’ ಪದವನ್ನು ಬಳಸಿದ್ದರು.

ಬುಧವಾರ ಭಾಷಣವನ್ನು ನ್ಯಾಯಾಲಯದಲ್ಲಿ ಕೇಳಿಸಿದ ಬಳಿಕ ಪೀಠದ ನೇತೃತ್ವ ವಹಿಸಿದ್ದ ನ್ಯಾ.ರಜನೀಶ ಭಟ್ನಾಗರ್,ಅವರು ಭಾಷಣದಲ್ಲಿ ಪ್ರಧಾನಿಯವರ ಕುರಿತು ಅದೇನು ಹೇಳುತ್ತಿದ್ದಾರೆ? ಏನೋ ‘ಚಂಗಾ ’ ಎಂಬ ಶಬ್ದ,ಬಳಿಕ ಭಾರತದ ಪ್ರಧಾನಿಯ ಕುರಿತು ಈ ‘ಜುಮ್ಲಾ’ ಪದ ಬಳಸಿದ್ದಾರೆ. ಇದು ಸೂಕ್ತವೇ ಎಂದು ಪ್ರಶ್ನಿಸಿದರು.

ಸಿಎಎ ವಿರುದ್ಧ ಪ್ರತಿಭಟನೆ ಸಂದರ್ಭದಲ್ಲಿ ಈ ಭಾಷಣವನ್ನು ಮಾಡಲಾಗಿತ್ತು ಎಂದು ತಿಳಿಸಿದ ಖಾಲಿದ್ ಪರ ವಕೀಲ ತ್ರಿದೀಪ ಪಾಯಸ್ ಅವರು,‘ಸರಕಾರದ ವಿರುದ್ಧ ಬಳಸಲಾದ ಪದಗಳು ಕಾನೂನುಬಾಹಿರ ಚಟುವಟಿಕೆಗಳ (ತಡೆ) ಕಾಯ್ದೆ (ಯುಎಪಿಎ)ಯಡಿ ಅಪರಾಧವಾಗುವುದಿಲ್ಲ. ಸರಕಾರದ ವಿರುದ್ಧ ಟೀಕೆಯು ಅಪರಾಧವಾಗಲು ಸಾಧ್ಯವಿಲ್ಲ. ಸರಕಾರದ ವಿರುದ್ಧ ಮಾತನಾಡಿದ ವ್ಯಕ್ತಿಗೆ ಯುಎಪಿಎ ಅಡಿ ಆರೋಪದೊಂದಿಗೆ 583 ದಿನಗಳ ಜೈಲುವಾಸವನ್ನು ಕಲ್ಪಿಸಲೂ ಆಗುವುದಿಲ್ಲ. ನಾವು ಅಷ್ಟೊಂದು ಅಸಹಿಷ್ಣುಗಳಾಗಬಾರದು. ಇಷ್ಟು ಅಸಹಿಷ್ಣುತೆ ಇದ್ದರೆ ಜನರು ಮಾತನಾಡಲೂ ಸಾಧ್ಯವಾಗುವುದಿಲ್ಲ. ಖಾಲಿದ್ ವಿರುದ್ಧ ದಾಖಲಾಗಿರುವ ಪ್ರಕರಣವು ವಾಕ್ಸ್ವಾತಂತ್ರದ ವಿರುದ್ಧ ಅಸಹಿಷ್ಣುತೆಯ ಫಲಶ್ರುತಿಯಾಗಿದೆ ’ಎಂದರು.

‘ಚಂಗಾ’ ಶಬ್ದದ ಬಳಕೆ ಕುರಿತಂತೆ ಪಾಯಸ್,ಅದೊಂದು ವಿಡಂಬನೆಯಾಗಿದೆ. ಬಹುಶಃ ಪ್ರಧಾನಿಯವರು ಭಾಷಣವೊಂದರಲ್ಲಿ ‘ಸಬ್ ಚಂಗಾ ಸಿ(ಎಲ್ಲ ಚೆನ್ನಾಗಿದೆ)’ಎನ್ನುವುದನ್ನು ಬಳಸಿದ್ದಿರಬೇಕು ಎಂದರು. ಖಾಲಿದ್ ಭಾಷಣವು ಸಿಎಎ ವಿರೋಧಿ ಆಂದೋಲನ ಕುರಿತು ಮತ್ತು ಸರಕಾರದ ವಿರುದ್ಧವಾಗಿತ್ತು,ಹಿಂಸೆಗೆ ಕರೆ ನೀಡಿರಲಿಲ್ಲ ಎಂದೂ ಪಾಯಸ್ ನ್ಯಾಯಾಲಯಕ್ಕೆ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X