Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಬೆಳ್ತಂಗಡಿ; ಆದಿವಾಸಿ ಮಹಿಳೆಗೆ ಹಲ್ಲೆ,...

ಬೆಳ್ತಂಗಡಿ; ಆದಿವಾಸಿ ಮಹಿಳೆಗೆ ಹಲ್ಲೆ, ಮಾನಹಾನಿ ಪ್ರಕರಣ: ದುಷ್ಕರ್ಮಿಗಳ ಬಂಧನಕ್ಕೆ ಒತ್ತಾಯಿಸಿ ಧರಣಿ

ವಾರ್ತಾಭಾರತಿವಾರ್ತಾಭಾರತಿ27 April 2022 8:41 PM IST
share
ಬೆಳ್ತಂಗಡಿ; ಆದಿವಾಸಿ ಮಹಿಳೆಗೆ ಹಲ್ಲೆ, ಮಾನಹಾನಿ ಪ್ರಕರಣ: ದುಷ್ಕರ್ಮಿಗಳ ಬಂಧನಕ್ಕೆ ಒತ್ತಾಯಿಸಿ ಧರಣಿ

ಬೆಳ್ತಂಗಡಿ: ತಾಲೂಕು ಇಂದು ಇಲ್ಲಿಯ ಶಾಸಕರ ದೆಸೆಯಿಂದ ಅರಾಜಕತೆಯಿಂದ ಕುಸಿಯುವಂತಾಗಿದೆ, ನೈತಿಕತೆಯೇ ಇಲ್ಲದಂತಹ ವಾತಾವರಣ ನಿರ್ಮಾಣವಾಗಿದೆ. ಇದರಿಂದ ಓರ್ವ ಹಿಂದೂ ಮಹಿಳೆ ತನ್ನ ಮಾನವನ್ನು ನಡು ಬೀದಿಯಲ್ಲಿ ಕಳಕೊಳ್ಳುವಂತಹ ವಾತಾವರಣ ಸೃಷ್ಟಿಯಾಗಿದೆ ಎಂದು ಬೆಳ್ತಂಗಡಿ ಮಾಜಿ ಶಾಸಕ ಕೆ.ವಸಂತ ಬಂಗೇರ ಅವರು ಹೇಳಿದ್ದಾರೆ.

ಅವರು ಇಂದು ಬೆಳ್ತಂಗಡಿ ಮಿನಿ ವಿಧಾನ ಸೌದ ಎದುರು ಉಜಿರೆಯಲ್ಲಿ ಆದಿವಾಸಿ ಮಹಿಳೆ ಮೇಲೆ ನಡೆದ ದೌರ್ಜನ್ಯ ಪ್ರಕರಣ ಖಂಡಿಸಿ, ಹಾಗೂ ಆರೋಪಿಗಳ ಬಂದನಕ್ಕೆ ಆಗ್ರಹಿಸಿ ಜನವಾದಿ ಮಹಿಳಾ ಸಂಘಟನೆ, ದಲಿತ ಹಕ್ಕು ರಕ್ಷಣಾ ಸಮಿತಿ ಮತ್ತು ಆದಿವಾಸಿ ಹಕ್ಕು ರಕ್ಷಣಾ ಸಮಿತಿ ನೇತೃತ್ವದಲ್ಲಿ ನಡೆದ ದರಣಿಯನ್ನುದ್ದೇಶಿಸಿ ಮಾತಾಡಿದರು.

ಶಾಸಕರು ತಪ್ಪಿ ನಡೆಯುತ್ತಿದ್ದರೆ ಅವರ ಬೆಂಬಲಿಗರೂ ಅದೇ ದಾರಿ ಹಿಡಿಯುತ್ತಿದ್ದಾರೆ. ಉಜಿರೆಯ ನಡು ರಸ್ತೆಯಲ್ಲಿ ಓರ್ವ ಯುವತಿಯನ್ನು ಬಟ್ಟೆ ಹರಿದು ದೌರ್ಜನ್ಯ ಮಾಡಿದ ಆರೋಪಿಗಳನ್ನ ಬಂಧಿಸಲೂ ಶಾಸಕರ ಅನುಮತಿ ಬೇಕೇ ಎಂದು ಪೋಲೀಸರನ್ನು ಅವರು ಪ್ರಶ್ನಿಸಿದರು.

ಹೋರಾಟಗಾರರನ್ನುದ್ದೇಶಿಸಿ ಮಾತಾಡಿದ ಕಾರ್ಮಿಕ ನಾಯಕ ಬಿ.ಎಂ.ಭಟ್ ಅವರು ಈ ಬೆತ್ತಲೆ ಪ್ರಕರಣದಿಂದ ಹಿಂದೂ ರಕ್ಷಕರೆಂದು ಬೊಗಳೆ ಬಿಡುವ ಆರ್.ಎಸ್.ಎಸ್, ಸಂಘ ಪರಿವಾರ ನಿಜವಾಗಿ ಹಿಂದು ಧರ್ಮದ ನಾಶಕರು ಎಂಬ ಸತ್ಯ ನಮಗೆ ಅರಿವಾಗುವಂತಾಯಿತು. ಬಿಜೆಪಿ ಹಿಂದುಗಳೆಂದರೆ ಮಹಿಳೆಯರ ಮೇಲೆ ದೌರ್ಜನ್ಯ ಮಾಡುವ ಧರ್ಮ, ಬಡ ದಿನೇಶ ನಂತವರ ಕೊಲೆ ಮಾಡುವ ಧರ್ಮ ಎಂಬುದು ಸಾಬೀತಾಗಿದೆ ಎಂದ ಅವರು ನಿಜವಾದ ಹಿಂದು ಧರ್ಮಿಗರು ಇಂತಹ ಮಾನಗೇಡಿ ಕೆಲಸ ಮಾಡುವುದಿಲ್ಲ ಎಂದರು. 

ದುಷ್ಕರ್ಮಿಗಳ ಬಂಧನ ಆಗುವ ತನಕ ನಮ್ಮ ಹೋರಾಟ ನಿಲ್ಲದು ಎಂದರು. ಮುಸ್ಲಿಂರ ತಲೆಯಿಂದ ಬಟ್ಟೆ ತೆಗೆಸಿದ ಬಿಜೆಪಿಗರು ಹಿಂದುಗಳ ಮೈಮೇಲೇ ಬಟ್ಟೆ ಇರಬಾರದೆನ್ನುವವರೆಂಬುದು ಉಜಿರೆ ಪ್ರಕರಣ ಸಾಬೀತು ಮಾಡಿದೆ ಎಂದರು.

ಈ ಸಂದರ್ಭ ಮಾತಾಡಿದ ಈಶ್ವರಿ ಪದ್ಮುಂಜ ಅವರು ಹಿಂದು ಧರ್ಮದ ಮಹಿಳೆಯ ರಕ್ಷಣೆಗೆ ಧರ್ಮ ರಕ್ಷಣೆಯವರು ಎಲ್ಲಿದ್ದಾರೆ ? ನಮ್ಮ ಶಾಸಕರಾದ ಹರೀಶ್ ಪೂಂಜರು ಕನಿಷ್ಟ ಒಂದು ಸಾಂತ್ವಾನವನ್ನೂ ಹೇಳದಷ್ಟು ಆರೋಪಿಗಳ ಪರ ನಿಂತಿರುವುದು ಖಂಡನೀಯ ಎಂದರು.

ಕಾರ್ಮಿಕ ಮುಖಂರಾದ ಎಲ್ ಮಂಜುನಾಥ್, ದಮ್ಮಾನಂದ, ಡಿ.ಎಸ್.ಎಸ್. ಮುಖಂಡ ನೇಮಿರಾಜ್ ಕಿಲ್ಲೂರು ಮೊದಲಾದವರು ಮಾತಾಡಿದರು.

ಸಂಜೆ ಹೋರಾಟದ ಸ್ಥಳಕ್ಕೆ ಆಗಮಿಸಿದ ಠಾಣಾಧಿಕಾರಿಯವರು ಶನಿವಾರದ ಒಳಗೆ ಆರೋಪಿಗಳ ಬಂಧಿಸುವ ಭರವಸೆ ನೀಡಿದ ಬಳಿಕ ಅನಿರ್ಧಿಷ್ಟ ಹೊರಾಟವನ್ನು ಶನಿವಾರದವರೆಗೆ ಮುಂದೂಡಿ ಆರೋಪಿಗಳ ಬಂಧನವಾಗದಿದ್ದಲ್ಲಿ ಮೇ  2 ರಂದು ದರಣಿ ಸತ್ಯಾಗ್ರಹವನ್ನು ಮುಂದುವರಿಸುವುದಾಗಿ ಪ್ರಕಟಿಸಿ ಹೋರಾಟವನ್ನು ತಾತ್ಕಾಲಿಕವಾಗಿ ಹಿಂಪಡೆಯಲಾಯಿತು.

ಜನವಾದಿ ಮಹಿಳಾ ಸಂಘಟನೆಯ ಮುಖಂಡರಾದ ಕಿರಣ ಪ್ರಭಾ  ಸ್ವಾಗತಿಸಿ ಪ್ರಸ್ತಾವನೆ ಮಾಡಿದರು. ಹೋರಾಟದ ನೇತೃತ್ವದಲ್ಲಿ ಜಯರಾಮ ಮಯ್ಯ, ಸಂಜೀವ ನಾಯ್ಕ, ನೆಬಿಸಾ, ಕುಮಾರಿ, ಶ್ಯಾಮರಾಜ್, ಡೊಂಬಯ ಗೌಡ ಜಯಶ್ರೀ, ಭವ್ಯ, ರಾಮಚಂದ್ರ, ಅಶ್ವಿತ ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X