Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ರಶ್ಯ-ಉಕ್ರೇನ್ ಸ್ನೇಹದ ಸಂಕೇತವಾಗಿದ್ದ...

ರಶ್ಯ-ಉಕ್ರೇನ್ ಸ್ನೇಹದ ಸಂಕೇತವಾಗಿದ್ದ ಸೋವಿಯತ್ ಯುಗದ ಪ್ರತಿಮೆ ನಾಶ

ವಾರ್ತಾಭಾರತಿವಾರ್ತಾಭಾರತಿ27 April 2022 10:53 PM IST
share
ರಶ್ಯ-ಉಕ್ರೇನ್ ಸ್ನೇಹದ ಸಂಕೇತವಾಗಿದ್ದ ಸೋವಿಯತ್ ಯುಗದ ಪ್ರತಿಮೆ ನಾಶ

ಕೀವ್, ಎ.27: ಈ ಹಿಂದೆ ಉಕ್ರೇನ್ ಮತ್ತು ರಶ್ಯ ನಡುವಿನ ಸ್ನೇಹದ ಸಂಕೇತವಾಗಿ, ಕೀವ್‌ ನಲ್ಲಿ ಸ್ಥಾಪಿಸಲಾಗಿದ್ದ ಸೋವಿಯತ್ ಒಕ್ಕೂಟ ಯುಗದ ಬೃಹತ್ ಪ್ರತಿಮೆಯನ್ನು ನೆಲಸಮಗೊಳಿಸಲಾಗಿದೆ ಎಂದು ಅಧಿಕಾರಿಗಳನ್ನು ಉಲ್ಲೇಖಿಸಿ ಬಿಬಿಸಿ ವರದಿ ಮಾಡಿದೆ.

 ‌ಕೀವ್ ಮಧ್ಯಭಾಗದಲ್ಲಿರುವ ಬೃಹತ್ ಪ್ರತಿಮೆಯನ್ನು ತೆರವುಗೊಳಿಸುವಂತೆ ಆದೇಶಿಸಿರುವ ನಗರದ ಮೇಯರ್ ವಿಟಾಲಿ ಕ್ಲಿಶ್ಕೊ, ರಶ್ಯವು ಉಕ್ರೇನ್ ನ ಮಿಲಿಯಾಂತರ ಜನರ ಜೀವನ ಮತ್ತು ಯುರೋಪ್ ಶಾಂತಿಯನ್ನು ಹಾಳುಗೆಡವಿದೆ ಎಂದಿದ್ದಾರೆ.
 
27 ಅಡಿ ಎತ್ತರದ ಕಂಚಿನ ಈ ಪ್ರತಿಮೆಯಲ್ಲಿ ಸ್ಥಂಭದ ಮೇಲೆ ಉಕ್ರೇನ್ ಮತ್ತು ರಶ್ಯದ ಕಾರ್ಮಿಕರು ಒಟ್ಟಿಗೆ ಕೆಲಸ ಮಾಡುವುದನ್ನು ಚಿತ್ರಿಸಲಾಗಿದ್ದು ಎರಡೂ ದೇಶಗಳ ನಡುವಿನ ಸ್ನೇಹದ ಸಂಕೇತವಾಗಿತ್ತು. 1982ರಲ್ಲಿ ಸೋವಿಯತ್ ಒಕ್ಕೂಟದ 60ನೇ ವರ್ಷಾಚರಣೆಯ ಸಂದರ್ಭದಲ್ಲಿ ಸ್ಥಾಪಿಸಲಾದ ಈ ಪ್ರತಿಮೆಯು ಬೃಹತ್ ತಾಮ್ರದ ಕಮಾನಿನ ಕೆಳಗೆ ಇದ್ದು ಇದನ್ನು ಜನರ ಸ್ನೇಹದ ಕಮಾನು ಎಂದು ಕರೆಯಲಾಗುತ್ತಿದೆ.
    
ನಮ್ಮ ದೇಶವನ್ನು ಮತ್ತು ಇಲ್ಲಿನ ಜನರ ಶಾಂತಿಯನ್ನು ನಾಶಗೊಳಿಸುವ ರಶ್ಯದ ಬರ್ಬರ ಬಯಕೆಯನ್ನು ಖಂಡಿಸಿ ಈ ಪ್ರತಿಮೆ ತೆರವುಗೊಳಿಸಲು ನಿರ್ಧರಿಸಲಾಗಿದೆ. ಈ ಸಂದರ್ಭದಲ್ಲಿ ಈ ಪ್ರತಿಮೆಗೆ ಅರ್ಥ ಉಳಿದಿಲ್ಲ. ಪ್ರತಿಮೆಯನ್ನು ತೆರವುಗೊಳಿಸುವ ಕೆಲಸಕ್ಕೆ ಕೆಲ ದಿನಗಳ ಹಿಂದೆ ಚಾಲನೆ ನೀಡಿದ್ದು ಮಂಗಳವಾರ ಸಂಪೂರ್ಣ ಕೆಳಗುರುಳಿಸಲಾಗಿದೆ ಎಂದು ವಿಟಾಲಿ ಕ್ಲಿಶ್ಕೊ ಹೇಳಿದ್ದಾರೆ. ಈಗ ಪ್ರತಿಮೆಯ ಮೇಲಿದ್ದ ಬೃಹತ್ ಕಮಾನಿಗೆ ಉಕ್ರೇನ್ ಧ್ವಜದ ಬಣ್ಣ ಬಳಿದು ‘ಉಕ್ರೇನ್ ಜನರ ಸ್ವಾತಂತ್ರ್ಯದ ಕಮಾನು’ ಎಂದು ಮರು ನಾಮಕರಣಗೊಳಿಸಲಾಗುವುದು ಎಂದವರು ಹೇಳಿದ್ದಾರೆ.
 
ನೆಲಕ್ಕುರುಳಿದ ಪ್ರತಿಮೆಯ ವೀಡಿಯೊ ಶೇರ್ ಮಾಡಿರುವ ಇಂಟರ್ನೆಟ್ ಬಳಕೆದಾರರು ‘ಈಗ ಇದು ಉಭಯ ದೇಶಗಳ ನಡುವಿನ ವಾಸ್ತವಿಕ ಸ್ನೇಹವನ್ನು ಸಂಕೇತಿಸುತ್ತದೆ’ ಎಂದು ವ್ಯಂಗ್ಯವಾಗಿ ಟ್ವೀಟ್ ಮಾಡಿದ್ದಾರೆ.

A 40 year old Ukraine-Russian friendship monument has been pulled down in Kyiv. People cheered as the soviet-era bronze statue came crashing down. pic.twitter.com/F9qK23avjq

— SBS News (@SBSNews) April 27, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X