Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 31 ಪೈಸೆ ಸಾಲ ಬಾಕಿ ಎಂದು ಪ್ರಮಾಣಪತ್ರ...

31 ಪೈಸೆ ಸಾಲ ಬಾಕಿ ಎಂದು ಪ್ರಮಾಣಪತ್ರ ತಡೆ ಹಿಡಿದ ಎಸ್‍ಬಿಐ ಗೆ ಹೈಕೋರ್ಟ್ ತರಾಟೆ

ವಾರ್ತಾಭಾರತಿವಾರ್ತಾಭಾರತಿ28 April 2022 7:04 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
31 ಪೈಸೆ ಸಾಲ ಬಾಕಿ ಎಂದು ಪ್ರಮಾಣಪತ್ರ ತಡೆ ಹಿಡಿದ ಎಸ್‍ಬಿಐ ಗೆ ಹೈಕೋರ್ಟ್ ತರಾಟೆ

ಅಹ್ಮದಾಬಾದ್:  ಕೇವಲ 31 ಪೈಸೆ ಸಾಲ ಬಾಕಿ ಪಾವತಿಸಿಲ್ಲ ಎಂಬ ಕಾರಣಕ್ಕೆ ರೈತರೊಬ್ಬರಿಗೆ ಯಾವುದೇ ಬಾಕಿಯಿಲ್ಲ ಪ್ರಮಾಣಪತ್ರವನ್ನು ತಡೆಹಿಡಿದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(SBI)ವನ್ನು ಗುಜರಾತ್ ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. ಬೆಳೆ ಸಾಲವನ್ನು ಮರುಪಾವತಿಸಿದ ನಂತರ ಜಮೀನು ಒಪ್ಪಂದವೊಂದನ್ನು ಮಾಡಲು ರೈತರೊಬ್ಬರಿಗೆ ಈ ಪ್ರಮಾಣಪತ್ರ ಬೇಕಾಗಿತ್ತು ಎಂದು timesofindia ವರದಿ ಮಾಡಿದೆ.

ಆದರೆ ಆತ 31 ಪೈಸೆ ಸಾಲ ಬಾಕಿ ಮರುಪಾವತಿಸಿಲ್ಲದೇ ಇರುವುದರಿಂದ ಆತನ ಜಮೀನಿನ ಮೇಲಿನ ಬ್ಯಾಂಕಿನ ಹಕ್ಕು ತೆಗೆದುಹಾಕಲಾಗಿಲ್ಲ ಎಂದು ನ್ಯಾಯಾಲಯದಲ್ಲಿ ಬ್ಯಾಂಕ್ ವಾದಿಸಿತ್ತು.

ಇದು ಅತಿಯಾಯಿತು, ಇಷ್ಟು ಸಣ್ಣ ಮೊತ್ತಕ್ಕೆ ಒಂದು ಪ್ರಮಾಣಪತ್ರವನ್ನು ತಡೆಹಿಡಿಯಲಾಗಿರುವುದು ಕಿರುಕುಳವಲ್ಲದೆ ಮತ್ತಿನ್ನೇನಲ್ಲ ಎಂದು ನ್ಯಾಯಾಲಯ ಹೇಳಿದೆ.

"31 ಪೈಸೆ ಬಾಕಿ? 50 ಪೈಸೆಗಿಂತ ಕಡಿಮೆ ಇರುವ ಏನನ್ನಾದರೂ ನಿರ್ಲಕ್ಷ್ಯಿಸಬಹುದೆಂದು ನಿಮಗೆ ತಿಳಿದಿದೆಯೇ?,'' ಎಂದು ನ್ಯಾಯಾಧೀಶ ಭಾರ್ಗವ್ ಕರಿಯಾ ಪ್ರತಿಕ್ರಿಯಿಸಿದರಲ್ಲದೆ ಈ ಕುರಿತಂತೆ ಅಫಿಡವಿಟ್ ಸಲ್ಲಿಸುವಂತೆ ಬ್ಯಾಂಕಿಗೆ ಸೂಚಿಸಿ ಮುಂದಿನ ವಿಚಾರಣೆಯನ್ನು ಮೇ 2ಕ್ಕೆ ನಿಗದಿಪಡಿಸಿದ್ದಾರೆ.

ಈ ಪ್ರಕರಣದಲ್ಲಿ ರಾಕೇಶ್ ವರ್ಮ ಮತ್ತು ಮನೋಜ್ ವರ್ಮ ಎಂಬವರು ಖೋರಜ್ ಗ್ರಾಮದಲ್ಲಿ ಶಾಮ್‍ಜಿಭಾಯಿ ಪಾಶಾಭಾಯಿ ಎಂಬವರಿಂದ ಜಾಗ ಖರೀದಿಸಿದ್ದರು. ಪಾಶಾಭಾಯಿ ಕುಟುಂಬ ಈ ಹಿಂದೆ ಬೆಳೆ ಸಾಲ ಪಡೆದಿತ್ತು, ಆದರೆ ಸಾಲ ಮರುಪಾವತಿಗಿಂತ ಮುನ್ನವೇ ಜಮೀನು ಮಾರಾಟ ಮಾಡಲಾಗಿತ್ತು ಇದರಿಂದಾಗಿ ಜಮೀನಿನ ಮೇಲೆ ಬ್ಯಾಂಕ್ ಶುಲ್ಕ ವಿಧಿಸಿತ್ತು ಹಾಗೂ ಹೊಸ ಮಾಲೀಕರ ಹೆಸರುಗಳನ್ನು ಭೂ ದಾಖಲೆಗಳಲ್ಲಿ ಸೇರಿಸಲು ಸಾಧ್ಯವಾಗಲಿಲ್ಲ. ಪ್ರಮಾಣಪತ್ರ ಪಡೆಯಲು ಖರೀದಿದಾರರು ಸಂಬಂಧಿತ ಶುಲ್ಕ ಪಾವತಿಸಲು ಮುಂದೆ ಬಂದಿದ್ದರು.

ಆದರೆ ಯಾವುದೇ ಪ್ರಗತಿಯಾಗದೇ ಇದ್ದಾಗ ಅವರು 2020ರಲ್ಲಿ ಹೈಕೋರ್ಟ್ ಕದ ತಟ್ಟಿದ್ದರು. ಈ ನಡುವೆ ಸಾಲ  ಮರುಪಾವತಿಯಾದರೂ ಬ್ಯಾಂಕ್ ಪ್ರಮಾಣಪತ್ರ ನೀಡಿರದೇ ಇದ್ದುದರಿಂದ ಜಮೀನು ಹಸ್ತಾಂತರ ಸಾಧ್ಯವಾಗಿರಲಿಲ್ಲ. ಈ ಕುರಿತು ನ್ಯಾಯಾಲಯ ಪ್ರಶ್ನಿಸಿದಾಗ 31 ಪೈಸೆ ಬಾಕಿ ವಿಚಾರವನ್ನು ಬ್ಯಾಂಕ್ ಪ್ರಸ್ತಾಪಿಸಿತ್ತು ಎಂದು ವರದಿಯಾಗಿದೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X