Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ದಲಿತ ಹೋರಾಟಗಾರ ಹಾರೋಹಳ್ಳಿ ರವೀಂದ್ರಗೆ...

ದಲಿತ ಹೋರಾಟಗಾರ ಹಾರೋಹಳ್ಳಿ ರವೀಂದ್ರಗೆ ಜಾಮೀನು

ವಾರ್ತಾಭಾರತಿವಾರ್ತಾಭಾರತಿ30 April 2022 8:30 PM IST
share
ದಲಿತ ಹೋರಾಟಗಾರ ಹಾರೋಹಳ್ಳಿ ರವೀಂದ್ರಗೆ ಜಾಮೀನು

ಮೈಸೂರು,ಎ.30: ದಲಿತ ಹೋರಾಟಗಾರ ಹಾಗೂ ಬರಹಗಾರ ಹಾರೋಹಳ್ಳಿ ರವೀಂದ್ರ ಅವರಿಗೆ ಬೆಳಗಾವಿ ಚಿಲ್ಲೆಯ ಕಾಗವಾಡ ಜೆಎಂಎಫ್‍ಸಿ ನ್ಯಾಯಾಲಯ ಜಾಮೀನು ನೀಡಿದೆ.

ಸಾಮಾಜಿಕ ಜಾಲತಾಣದಲ್ಲಿ ವಿವಾದಾತ್ಮಕ ಪೋಸ್ಟ್ ಹಾಕಿದ್ದರು ಎಂಬ ಆರೋಪದ ಮೇಲೆ ಅವರ ವಿರುದ್ಧ ಪ್ರಕರಣ ದಾಖಲಾಗಿತ್ತು. ಇದರ ಹಿನ್ನಲೆಯಲ್ಲಿ ಅವರನ್ನು ಎಪ್ರಿಲ್ 29ರ ಶುಕ್ರವಾರ ಅವರ ನಿವಾಸ ಮೈಸೂರಿನ ವರುಣಾ ಬಳಿಯ ಹಾರೋಹಳ್ಳಿಯಲ್ಲಿ ಬೆಳಗಾವಿ ಪೊಲೀಸರು ಬಂಧಿಸಿ ಕರೆದೊಯ್ದಿದ್ದರು.

ಇಂದು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿತ್ತು. ರವೀಂದ್ರ ಅವರ ಪರ ವಕೀಲ ಶಂಕರ್ ಲೈನದಾರ ನನ್ನ ಕಕ್ಷಿದಾರರಿಗೆ ಪೊಲೀಸರು ಲಿಖಿತವಾಗಿ ಯಾವುದೇ ಸಮನ್ಸ್ ಆಗಲಿ ವಾರೆಂಟ್ ಆಗಲಿ ನೀಡಿಲ್ಲ. ಏಕಾಏಕಿ ಅವರನ್ನು ಬಂಧಿಸಿದ್ದಾರೆ. ಇದರಿಂದ ಅವರ ಮೇಲೆ ಸಮಾಜದಲ್ಲಿ ತಪ್ಪು ಸಂದೇಶ ರವಾನೆಯಾಗಲಿದೆ. ಹಾಗಾಗಿ ಅವರಿಗೆ ಜಾಮೀನು ನೀಡಬೇಕು ಎಂದು ವಾದ ಮಂಡಿಸಿದರು.

ಇದರನ್ನು ಪುರಸ್ಕರಿಸಿದ ನ್ಯಾಯಾಧೀಶರು ತಕ್ಷಣ  ಹಾರೋಹಳ್ಳಿ ರವೀಂದ್ರ ಅವರಿಗೆ ಜಾಮೀನು ಮಂಜೂರು ಮಾಡಿದರು. ಪ್ರಕರಣಕ್ಕೆ ಸಂಬಂಧಿಸಿದಂತೆ ನೀವು ನ್ಯಾಯಾಲಯದ ಕಲಾಪಕ್ಕೆ ಹಾಜರಾಗಬೇಕು ಮತ್ತು ಪೊಲೀಸ್ ಅಧಿಕಾರಿಗಳ ವಿಚಾರಣೆಗೆ ಸ್ಪಂಧಿಸಬೇಕು ಎಂಬ ಷರತ್ತು ವಿಧಿಸಿ ಜಾಮೀನು ನೀಡಿದ್ದಾರೆ ಎಂದು ಹಾರೋಹಳ್ಳೀ ರವೀಂದ್ರ ಅವರ ಪರ ವಕೀಲ ಶಂಕರ್ ಲೈನದಾರ ತಿಳಿಸಿದರು.

ಬರಹಗಾರ ಹಾರೋಹಳ್ಳಿ ರವೀಂದ್ರ ಸಾಮಾಜಿಕ ಜಾಲತಾಣದಲ್ಲಿ  2017 ರಲ್ಲಿ ವಿವಾದಾತ್ಮಕ ಪೋಸ್ಟ್ ಹಾಕಿದ್ದರು ಎಂಬ ಕಾರಣಕ್ಕೆ ಅವರ ಮೇಲೆ ಚಿಕ್ಕೋಡಿ ಪೊಲೀಸ್ ಠಾಣೆಯಲ್ಲಿ  ಎಫ್.ಐ.ಆರ್. ದಾಖಲಾಗಿತ್ತು. 2020 ರಲ್ಲಿ ಅವರ ಮೇಲೆ ಚಾರ್ಜ್ ಶೀಟ್‍ಅನ್ನು ಹಾಕಲಾಗಿತ್ತು. ಆದರೆ ಅವರು ನ್ಯಾಯಾಲಯಕ್ಕೆ ಹಾಜರಾಗದ ಹಿನ್ನಲೆಯಲ್ಲಿ ವಾರೆಂಟ್ ಜಾರಿಯಾದ ಹಿನ್ನಲೆಯಲ್ಲಿ ಅವರನ್ನು ಎಪ್ರಿಲ್ 29 ರ ಶುಕ್ರವಾರ ಬಂಧಿಸಲಾಗಿತ್ತು. ಆದರೆ ರವೀಂದ್ರ ಅವರಿಗೆ ಇದೂವರೆಗೂ ಯಾವುದೇ ಲಿಖಿತ ಸಮನ್ಸ್ ಆಗಲಿ ವಾರೆಂಟ್ ಆಗಲಿ ಜಾರಿಯಾಗಿರಲಿಲ್ಲ ಎಂದು ತಿಳಿದು ಬಂದಿದೆ.

ನನ್ನ ಬಂಧನದಿಂದ ಧೃತಿಗೆಡುವ ಪ್ರಶ್ನೆಯೇ ಇಲ್ಲ: ನಾನು ಸತ್ಯದ ಪರ ಸದಾ ಹೋರಾಟ ಮಾಡುತ್ತೇನೆ. ನನ್ನನ್ನು ಷಡ್ಯತ್ರರದಿಂದ ಪೊಲೀಸರು ಬಂಧಿಸಿದ್ದಾರೆ. ಇದರಿಂದ ಧೃತಿ ಗೆಡುವ ಪ್ರಶ್ನೆಯೇ ಇಲ್ಲ, ನಾನು ಓರ್ವ ದಲಿತ ಎಂಬ ಕಾರಣಕ್ಕೆ ನನ್ನನ್ನು ಹತ್ತಿಕ್ಕುವ ಕೆಲಸವನ್ನು ಮಾಡಲಾಗುತ್ತಿದೆ. ಆದರೆ ನಾನು ಇದ್ಯಾವುದಕ್ಕೂ ಹೆದರುವುದಿಲ್ಲ. ನನ್ನ ಹೋರಾಟ ಮತ್ತು ಬರವಣಿಗೆಯನ್ನು ಮುಂದುವರೆಸುತ್ತೇನೆ ಎಂದು “ವಾರ್ತಾಭಾರತಿ” ಗೆ ದೂರವಾಣಿ ಮೂಲಕ ಮಾತನಾಡಿ ತಿಳಿಸಿದರು.

ನನ್ನ ವಿರುದ್ಧ ಎಫ್.ಐ.ಆರ್ ದಾಖಲು ಮಾಡಿದ ಮೇಲೆ ಒಮ್ಮೆಯಾದರೂ ಪೊಲೀಸರು ವಿಚಾರಣೆಗೆ ನನ್ನನ್ನು ಕರೆಸಬೇಕಿತ್ತು. ಆದರೆ ಅದ್ಯಾವುದನ್ನು ಮಾಡದೆ ಚಾರ್ಚ್ ಶೀಟ್ ಮಾಡಿದ್ದಾರೆ. ಇದರಿಂದ ನ್ಯಾಯಾಲಯಕ್ಕೆ ಹಾಜರಾಗಲಿಲ್ಲ ಎಂದು ವಾರೆಂಟ್ ಜಾರಿಯಾಗಿದೆ. ನನಗೆ ಇದೂ ವರೆಗೂ ಲಿಖಿತವಾಗಿ ಯಾವುದೇ ಸಮನ್ಸ್ ಆಗಲಿ ವಾರೆಂಟ್ ಆಗಲಿ ಸಿಕ್ಕಿಲ್ಲ. ಈ ಸಂದರ್ಭದಲ್ಲಿ ನನ್ನನ್ನು ಬಂಧಿಸಿರುವುದು ಮನಸ್ಸಿಗೆ ನೋವುಂಟು ಮಾಡಿದೆ ಎಂದು ಹೇಳಿದರು.

ದಲಿತರು ಅಲ್ಪಸಂಖ್ಯಾತರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದರೆ ಪ್ರಕರಣ ದಾಖಲಿಸುತ್ತಾರೆ. ಅದೆ ಮೇಲ್ವರ್ಗದ ಜನ ಬಾಯಿಗೆ ಬಂದಹಾಗೆ ಪೋಸ್ಟ್ ಹಾಕುತ್ತಾರೆ ಅವರ ಮೇಲೆ ಪ್ರಕರಣವನ್ನೇ ದಾಖಲಿಸುವುದಿಲ್ಲ, ಒಂದು ವೇಳೆ ಪ್ರಕರಣ ದಾಖಲಿಸಿದರೂ ಬಿ ರಿಪೋರ್ಟ್ ಹಾಕಿ ಪ್ರಕರಣವನ್ನೇ ಮುಕ್ತಾಯಗೊಳಿಸುತ್ತಾರೆ. ಅದೇ ದಲಿತರು ಅಲ್ಪಂಖ್ಯಾತರಾದರೆ ಪ್ರಕರಣವನ್ನು ಮುಂದುವರೆಸುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದೆಲ್ಲ ಒಂದು ರೀತಿಯಲ್ಲಿ ನಮ್ಮಂತವರನ್ನು ನ್ಯಾಯಾಲಯಕ್ಕೆ ಅಲೆಸಿ ಹಿಂಸೆ ನೀಡಬೇಕು ಎಂಬುದೇ ಇವರ  ಉದ್ದೇಶವಾಗಿದೆ. ನನ್ನ ಬಂಧನದಿಂದ ನನಗೆ ಆರ್ಥಿಕವಾಗಿ ಮತ್ತು ಮಾನಸಿಕವಾಗಿ ನಷ್ಟವಾಗಿದೆ ಎಂದು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X