Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಓ ಮೆಣಸೇ
  4. ಓ ಮೆಣಸೇ...

ಓ ಮೆಣಸೇ...

ಪಿ.ಎ.ರೈಪಿ.ಎ.ರೈ2 May 2022 12:05 AM IST
share
ಓ ಮೆಣಸೇ...

ಕಾಂಗ್ರೆಸ್‌ನಲ್ಲಿ ಈಗ ಸಂಗೀತ ಕುರ್ಚಿ ಸ್ಪರ್ಧೆ ಆರಂಭಗೊಂಡಿದೆ -ನಳಿನ್ ಕುಮಾರ್ ಕಟೀಲು, ಸಂಸದ
ಬಿಜೆಪಿಯೊಳಗಿನ ಜಂಗೀ ಕುಸ್ತಿ ಸ್ಪರ್ಧೆಯ ಫಲಿತಾಂಶವೇನಾಯಿತು?


ಮಾಧ್ಯಮಗಳಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಪತ್ರಕರ್ತರ ವೈಯಕ್ತಿಕ ಅಭಿಪ್ರಾಯ ಹೇರಲು ಅವಕಾಶ ಇರಬಾರದು -ವೆಂಕಯ್ಯ ನಾಯ್ಡು, ಉಪರಾಷ್ಟ್ರಪತಿ

ಏನಿದ್ದರೂ ಆರೆಸ್ಸೆಸ್ ಅಭಿಪ್ರಾಯವನ್ನಷ್ಟೇ ಹೇರಿ ಎನ್ನುವ ಸಲಹೆ ನೀಡುತ್ತಿದ್ದಾರೆ.

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ನನ್ನ ಹೆಸರಿಡುವುದು ಬೇಡ -ಯಡಿಯೂರಪ್ಪ, ಮಾಜಿ ಸಿಎಂ
ಮಗನ ಹೆಸರಿಡುವುದಕ್ಕೆ ಶಿಫಾರಸು ಮಾಡುತ್ತಿದ್ದಾರೆಯೆ?

ಭಾರತವನ್ನು ವಿಶ್ವ ಗುರು ಮತ್ತು ಚಿನ್ನದ ಹಕ್ಕಿ ಎಂದು ಕರೆಯಲಾಗುತ್ತಿದೆ -ಥಾವರ್‌ಚಂದ್ ಗೆಹ್ಲೋಟ್, ರಾಜ್ಯಪಾಲ
ಮಠದ ಸ್ವಾಮಿಗಳು ತಮ್ಮನ್ನು ತಾವು ಜಗದ್ಗುರು ಎಂದು ಕರೆದಂತೆ.

ಹಾಗೆಯೇ ಅದಾನಿ, ಅಂಬಾನಿ ಪಾಲಿಗೆ ಭಾರತ ಚಿನ್ನದ ಹಕ್ಕಿಯೇ ಸರಿ. ಎಲ್ಲ ಪಕ್ಷಗಳಲ್ಲೂ ಹಗರಣ ಮಾಡುವವರು ಇದ್ದೇ ಇರುತ್ತಾರೆ -ಜಗದೀಶ್ ಶೆಟ್ಟರ್, ಮಾಜಿ ಸಿಎಂ
ನಿಮ್ಮದೂ ಬೇರೆ ಪಕ್ಷಗಳಿಗೆ ಭಿನ್ನ ಅಲ್ಲ ಎಂದಾಯಿತು.


ಭ್ರಷ್ಟಾಚಾರದ ವಿರುದ್ಧ ಧ್ವನಿ ಎತ್ತಿದವರನ್ನೇ ತನಿಖೆಗೆ ಒಳಪಡಿಸುವುದು 'ನಾ ಕಳ್ಳ ಪರರ ನಂಬ' ಎಂಬಂತಾಗಿದೆ -ಸಿದ್ದರಾಮಯ್ಯ, ಮಾಜಿ ಸಿಎಂ
ಭ್ರಷ್ಟಾಚಾರದ ವಿರುದ್ಧ ಧ್ವನಿಯೆತ್ತುವುದೇ ದೇಶದ್ರೋಹದ ಕೆಲಸವೆಂದು ಘೋಷಿಸಲಾಗಿದೆ.

ಮಾಜಿ ಸಿಎಂ ಸಿದ್ದರಾಮಯ್ಯ ವಿಧಾನ ಸಭೆಗೆ ಹುಣಸೂರಿನಲ್ಲಿ ಸ್ಪರ್ಧಿಸಿದರೆ ಅವರನ್ನು ಗೆಲ್ಲಿಸುತ್ತೇವೆ -ಎಚ್.ವಿಶ್ವನಾಥ್, ವಿ.ಪ. ಸದಸ್ಯ
ಕಷ್ಟವೇನೂ ಇಲ್ಲ. ನೀವು ಅವರ ಎದುರು ಸ್ಪರ್ಧಿಸಿದರೆ ಸಾಕು.

ಯುದ್ಧದಲ್ಲಿ ಗುರಿ ಸಾಧಿಸಲು ರಶ್ಯ ವಿಫಲವಾಗಿದೆ, ಉಕ್ರೇನ್ ಯಶಸ್ವಿಯಾಗುತ್ತಿದೆ -ಆ್ಯಂಟನಿ ಬ್ಲಿಂಕೆನ್, ಅಮೆರಿಕ ವಿದೇಶಾಂಗ ಕಾರ್ಯದರ್ಶಿ
ಈ ಯುದ್ಧದಲ್ಲಿ ಗೆದ್ದದ್ದು ಅಮೆರಿಕ ಮತ್ತು ಯುರೋಪ್ ಎನ್ನುವುದು ಜಗತ್ತಿಗೆ ಗೊತ್ತಿದೆ.

ಜಾತಿ-ಧರ್ಮದ ಹೆಸರಲ್ಲಿ ವ್ಯಾಪಾರಕ್ಕೆ ನಿಬಂಧನೆ ಹಾಕುವುದು ಒಳ್ಳೆಯದಲ್ಲ -ಬಿ.ಎ.ಶರವಣ, ವಿ.ಪ. ಮಾಜಿ ಸದಸ್ಯ
ಇಲ್ಲಿ ಜಾತಿ, ಧರ್ಮವೇ ಒಂದು ವ್ಯಾಪಾರವಾಗಿದೆ.

ರಾಜ್ಯದ ಯಾವುದೇ ಶಾಲೆಗಳಲ್ಲಿ ಧರ್ಮಗ್ರಂಥಗಳ ಬೋಧನೆಗೆ ಅವಕಾಶ ಇಲ್ಲ -ಬಿ.ಸಿ.ನಾಗೇಶ್, ಸಚಿವ
ತರಗತಿಗಳ ಪಠ್ಯ ಪುಸ್ತಕಗಳನ್ನು ಬೋಧಿಸುವುದಕ್ಕೇ ಶಿಕ್ಷಕರ ಕೊರತೆಯಿರುವಾಗ, ಧರ್ಮ ಗ್ರಂಥ ಬೋಧನೆಗೆ ಯಾರನ್ನು ತರುವುದು?


ಶ್ರೀ ನಾರಾಯಣ ಗುರುಗಳ ಸಂದೇಶವನ್ನು ಎಲ್ಲರೂ ಪಾಲಿಸಿದರೆ ಜಗತ್ತಿನ ಯಾವೊಂದು ಶಕ್ತಿಯೂ ಭಾರತವನ್ನು ವಿಭಜಿಸಲು ಸಾಧ್ಯವಿಲ್ಲ -ನರೇಂದ್ರ ಮೋದಿ, ಪ್ರಧಾನಿ
ಅದಕ್ಕಾಗಿಯೇ ಕಳೆದ ಗಣ ರಾಜ್ಯೋತ್ಸವದಲ್ಲಿ ನಾರಾಯಣ ಗುರು ಟ್ಯಾಬ್ಲೋಗೆ ಅವಕಾಶ ನಿರಾಕರಿಸಲಾಯಿತೆ?

10 ವರ್ಷಗಳಿಂದ ವಿಶ್ವದಲ್ಲಿ ಏನಾಗುತ್ತಿದೆ ಎಂಬುದನ್ನು ಯುರೋಪ್ ಗಮನಿಸಿಯೇ ಇಲ್ಲ -ಎಸ್.ಜೈಶಂಕರ್, ಕೇಂದ್ರ ಸಚಿವ
ಭಾರತ ಏನಾಗುತ್ತಿದೆ ಎನ್ನುವುದರ ಬಗ್ಗೆ ತಾವು ಗಮನ ಕೊಡಿ.

ಕಾಂಗ್ರೆಸ್‌ಗೆ ನಾಯಕತ್ವ ಹಾಗೂ ಸಾಮೂಹಿಕ ಇಚ್ಛಾಶಕ್ತಿಯ ಅಗತ್ಯವಿದೆ -ಪ್ರಶಾಂತ್ ಕಿಶೋರ್, ಚುನಾವಣಾ ಕಾರ್ಯತಂತ್ರ ನಿಪುಣ

ಮತ್ತು ಆ ಇಚ್ಛಾಶಕ್ತಿಯ ಹೆಸರು ಪ್ರಶಾಂತ್ ಕಿಶೋರ್ ಎನ್ನುವುದನ್ನು ನೀವು ಪ್ರತ್ಯೇಕ ಹೇಳಬೇಕಾಗಿಲ್ಲ.
ನಮ್ಮ ಇಲಾಖೆಗೆ ಕಾಯಕಲ್ಪ ಕಲ್ಪಿಸಿದ್ದೇವೆ. ಬ್ರೋಕರ್‌ಗಳನ್ನು ಹೊರಹಾಕಿದ್ದೇವೆ -ವಿ.ಸೋಮಣ್ಣ, ಸಚಿವ

ಬ್ರೋಕರ್ ಕೆಲಸವನ್ನು ಸಚಿವರೇ ನಿರ್ವಹಿಸುತ್ತಿದ್ದಾರಂತೆ.
ವಿಪಕ್ಷ ನಾಯಕ ಸಿದ್ದರಾಮಯ್ಯಅಸಮರ್ಥ ರಾಜಕಾರಣಿ -ನಳಿನ್‌ಕುಮಾರ್ ಕಟೀಲು, ಸಂಸದ
ವಿಪಕ್ಷ ನಾಯಕರು ಅಸಮರ್ಥರಾಗಿರುವುದೇ ಸರಕಾರದ ವೈಫಲ್ಯಕ್ಕೆ ಕಾರಣವೇ?

ರಾಜ್ಯದ ಆರ್ಥಿಕ ಶಕ್ತಿ ಸುಭದ್ರವಾಗಿದೆ -ಬಸವರಾಜ್ ಬೊಮ್ಮಾಯಿ, ಸಿಎಂ
ಶೇ. 40 ಕಮಿಶನ್‌ಗೆ ಯಾವುದೇ ಧಕ್ಕೆಯಾಗಿಲ್ಲ ಎನ್ನುವ ಸಮಾಧಾನ.

ವೈಜ್ಞಾನಿಕ ಪ್ರಗತಿಯ ಹೆಸರಿನಲ್ಲಿ ಮನುಷ್ಯನು ಪ್ರಕೃತಿಯ ಮೊದಲ ಶತ್ರುವಾಗಿ ಪರಿಣಮಿಸಿದ್ದಾನೆ -ಡಾ.ಡಿ.ವೀರೇಂದ್ರ ಹೆಗ್ಗಡೆ, ಧರ್ಮಾಧಿಕಾರಿ, ಧರ್ಮಸ್ಥಳ
ಅವನಿಗೆ ಅವನೇ ಶತ್ರುವಾಗಿ ಬದಲಾಗಿದ್ದಾನೆ.

ಬೊಮ್ಮಾಯಿ ಮತ್ತೆ ಸಿಎಂ ಆಗುವುದರಲ್ಲಿ ನಮ್ಮದ್ಯಾರದೂ ತಕರಾರು ಇಲ್ಲ, ಆದರೆ ಜನರನ್ನು ದರಿದ್ರ ಮಾಡುವ ಯೋಜನೆಗಳನ್ನು ಕೈ ಬಿಡಬೇಕು -ಬಸವಗೌಡ ಪಾಟೀಲ್ ಯತ್ನಾಳ್, ಶಾಸಕa
ಅದು ಅವರ ಯೋಜನೆಯಲ್ಲ, ಪ್ರಧಾನಿ ಮೋದಿಯವರ ಯೋಜನೆಯನ್ನು ಯಥಾವತ್ ಜಾರಿಗೊಳಿಸುತ್ತಿದ್ದಾರೆ.

ಮುಂದಿನ ವಿಧಾನ ಸಭಾ ಚುನಾವಣೆಯಲ್ಲಿ ಮಂಡ್ಯ ಜಿಲ್ಲೆಯಿಂದ ಬಿಜೆಪಿಯ ನಾಲ್ವರು ಶಾಸಕರು ಗೆಲುವು ಸಾಧಿಸಲಿದ್ದಾರೆ -ಕೆ.ಸಿ.ನಾರಾಯಣ ಗೌಡ, ಸಚಿವ
ಇವಿಎಂ ಹ್ಯಾಕರ್‌ಗಳ ಮೇಲೆ ಅಷ್ಟೊಂದು ಭರವಸೆ.

ನಮ್ಮ ಧರ್ಮ, ಸಂಸ್ಕೃತಿ ಬೆಳೆಯಬೇಕಾದರೆ ನಾವು ತ್ಯಾಗ ಮಾಡಬೇಕಾಗುತ್ತದೆ -ಎಸ್.ಅಂಗಾರ, ಸಚಿವ
ಶತಶತಮಾನಗಳಿಂದ ದಲಿತರು ತ್ಯಾಗ ಮಾಡುತ್ತಾ ಬಂದಿರುವುದು ಸಾಕಾಗುವುದಿಲ್ಲವೆ?

ಕಳೆದ 5 ವರ್ಷಗಳಿಂದ ನಮ್ಮ ದೇಶ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಹೇಗೆ ಅಭಿವೃದ್ಧಿ ಹೊಂದಿದೆ ಎಂದು ಜಗತ್ತಿಗೆ ತೋರಿಸುವ ಕೆಲಸ ನಡೆದಿದೆ -ವಿಶ್ವೇಶ್ವರ ಹೆಗಡೆ ಕಾಗೇರಿ, ವಿಧಾನ ಸಭಾಧ್ಯಕ್ಷ
ಪ್ರಜಾಪ್ರಭುತ್ವ ವಿರೋಧಿಗಳು ಅಭಿವೃದ್ಧಿಯಾಗುತ್ತಿರುವುದನ್ನು ಜಗತ್ತು ನೋಡುತ್ತಿದೆ.

ಕೆಲವರು ನಾಲ್ಕು ಕಟ್ಟಡಗಳನ್ನು ಕಟ್ಟುವುದೇ ಶಿಕ್ಷಣ ಅಂದುಕೊಂಡಿದ್ದಾರೆ -ಅಶ್ವತ್ಥ್ ನಾರಾಯಣ, ಸಚಿವ
ಕಟ್ಟಿದ ಆ ನಾಲ್ಕು ಕಟ್ಟಡಗಳನ್ನು ಉದ್ಯಮಿಗಳಿಗೆ ಮಾರುವುದು ಶಿಕ್ಷಣವೆ?

ಹೊರದೇಶಗಳು ಕೂಡಾ ಭಾರತದಲ್ಲಿ ಬೆಳೆಯುತ್ತಿರುವ ಧಾರ್ಮಿಕ ಅಸಹಿಷ್ಣುತೆ ಬಗ್ಗೆ ಬೊಟ್ಟು ಮಾಡಿ ಮಾತನಾಡುವಂತಾಗಿದೆ -ದಿನೇಶ್ ಗುಂಡೂರಾವ್, ಶಾಸಕ
ಆದರೂ ಕಾಂಗ್ರೆಸ್ ಪಕ್ಷಕ್ಕೆ ಮಾತ್ರ ವಿಷಯ ಇನ್ನೂ ತಲುಪಿಲ್ಲ.

ದೇಶದ ಇತಿಹಾಸದಲ್ಲಿ ಇಂತಹ ಒಬ್ಬ ಪ್ರಧಾನಿಯನ್ನು ನಾನು ನೋಡಿರಲಿಲ್ಲ -ರಾಹುಲ್ ಗಾಂಧಿ, ಕಾಂಗ್ರೆಸ್ ಮಖಂಡ
ಅಂತಹ ಪ್ರಧಾನಿಯ ಸೃಷ್ಟಿಗಾಗಿ ಕಾಂಗ್ರೆಸ್ ಪಟ್ಟ ಕಷ್ಟವೇನು ಕಡಿಮೆಯೆ?


ಕೊರೋನ ನಾಲ್ಕನೇ ಅಲೆ ಜೂನ್‌ನಿಂದ ಅಕ್ಟೋಬರ್‌ವರೆಗೆ ಕಾಣಿಸಿಕೊಳ್ಳುವ ಸಾಧ್ಯತೆ ಇದೆ -ಡಾ.ಕೆ.ಸುಧಾಕರ್, ಸಚಿವ
ಇದು ಅಲೆಯಲ್ಲ, ಲಸಿಕೆ ಮಾಫಿಯಾ ನಡೆಸುತ್ತಿರುವ ಹಲ್ಲೆ.

ಸಂಪರ್ಕ ಭಾಷೆಯಾಗಿ ಹಿಂದಿಯನ್ನು ಬಳಸಿದರೆ ಯಾವುದೇ ತಪ್ಪಿಲ್ಲ -ಸಿ.ಟಿ.ರವಿ, ಶಾಸಕ
ಆದರೆ ನಿಮ್ಮ ಹಿಂದಿ, ಇಂಗ್ಲಿಷ್ ಕೇಳಿ ಅಳಿದುಳಿದ ಸಂಪರ್ಕಗಳೂ ಕಡಿದುಹೋಗುವ ಸಾಧ್ಯತೆಗಳಿವೆ.

ದಿಟ್ಟ ನಿರ್ಧಾರಗಳನ್ನು ತೆಗೆದುಕೊಳ್ಳುವ ಶಕ್ತಿ ಬಿಜೆಪಿಗಿದೆ ಎಂಬುದು ಇತ್ತೀಚಿನ ಕೆಲವು ವಿದ್ಯಮಾನಗಳಿಂದ ಋಜುವಾತಾಗಿದೆ -ಹಾರ್ದಿಕ್ ಪಟೇಲ್, ಗುಜರಾತ್ ಶಾಸಕ
ಕಾಂಗ್ರೆಸ್ ನಿಮ್ಮನ್ನು ಕೈ ಬಿಟ್ಟ ನಿರ್ಧಾರದ ಬಳಿಕ ಋಜುವಾತಾಗಿರಬೇಕು ಅಲ್ಲವೆ?

share
ಪಿ.ಎ.ರೈ
ಪಿ.ಎ.ರೈ
Next Story
X