Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಲಸಿಕೆ ಪಡೆಯುವಂತೆ ಯಾರನ್ನೂ...

ಲಸಿಕೆ ಪಡೆಯುವಂತೆ ಯಾರನ್ನೂ ಒತ್ತಾಯಿಸುವಂತಿಲ್ಲ: ಸರ್ವೋಚ್ಚ ನ್ಯಾಯಾಲಯದ ಮಹತ್ವದ ತೀರ್ಪು

ವಾರ್ತಾಭಾರತಿವಾರ್ತಾಭಾರತಿ2 May 2022 11:08 AM IST
share
ಲಸಿಕೆ ಪಡೆಯುವಂತೆ ಯಾರನ್ನೂ ಒತ್ತಾಯಿಸುವಂತಿಲ್ಲ: ಸರ್ವೋಚ್ಚ ನ್ಯಾಯಾಲಯದ ಮಹತ್ವದ ತೀರ್ಪು

ಹೊಸದಿಲ್ಲಿ,ಮೇ 2: ಕೋವಿಡ್ ಲಸಿಕೆಯನ್ನು ಪಡೆಯುವಂತೆ ದೇಶದ ಯಾವುದೇ ವ್ಯಕ್ತಿಯನ್ನು ಬಲವಂತಗೊಳಿಸುವಂತಿಲ್ಲ ಎಂದು ಸರ್ವೋಚ್ಚ ನ್ಯಾಯಾಲಯವು ಸೋಮವಾರ ಮಹತ್ವದ ತೀರ್ಪೊಂದರಲ್ಲಿ ಸ್ಪಷ್ಟಪಡಿಸಿದೆ. ಭಾರತದ ಹಾಲಿ ಲಸಿಕೆ ನೀತಿಯು ಅಸಮಂಜಸವಾಗಿದೆ ಮತ್ತು ನಿರಂಕುಶತೆಯ ಅಭಿವ್ಯಕ್ತಿಯಿಂದ ಕೂಡಿದೆ ಎಂದು ಹೇಳಲಾಗುವುದಿಲ್ಲ ಎಂದೂ ನ್ಯಾಯಾಲಯವು ತಿಳಿಸಿತು.

ಕೋವಿಡ್ ಲಸಿಕೆ ನೀತಿಯ ಪರಿಷ್ಕರಣೆ ಕೋರಿ ಸಲ್ಲಿಸಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ನಡೆಸುತ್ತಿದ್ದ ನ್ಯಾಯಮೂರ್ತಿಗಳಾದ ಎಲ್.ನಾಗೇಶ್ವರ ರಾವ್ ಮತ್ತು ಬಿ.ಆರ್.ಗವಾಯಿ ಅವರ ಪೀಠವು,‌ ಯಾವುದೇ ವ್ಯಕ್ತಿಯನ್ನು,ಆತನ ಅಥವಾ ಆಕೆಯ ಇಚ್ಛೆಯ ವಿರುದ್ಧವಾಗಿ ಲಸಿಕೆ ಹಾಕಿಸಿಕೊಳ್ಳುವಂತೆ ಬಲವಂತಗೊಳಿಸುವಂತಿಲ್ಲ ಎಂದು ಹೇಳಿತು. 

ದೈಹಿಕ ಸ್ವಾಯತ್ತತೆಯನ್ನು ಪರಿಗಣಿಸಿ ದೈಹಿಕ ಸಮಗ್ರತೆಯು ಸಂವಿಧಾನದ ವಿಧಿ 21ರಡಿ ರಕ್ಷಣೆಯನ್ನು ಹೊಂದಿದೆ. ಲಸಿಕೆ ಪಡೆಯುವಂತೆ ಯಾರನ್ನೂ ಒತ್ತಾಯಿಸುವಂತಿಲ್ಲ. ಆದರೆ ಸಮುದಾಯ ಆರೋಗ್ಯದ ಹಿತಾಸಕ್ತಿಯಲ್ಲಿ ವೈಯಕ್ತಿಕ ಹಕ್ಕುಗಳ ಮೇಲೆ ಕೆಲವು ಮಿತಿಗಳನ್ನು ಹೇರಬಹುದು ಎಂದು ತಿಳಿಸಿತು.

ಲಸಿಕೆ ಹಾಕಿಸಿಕೊಳ್ಳದವರಿಗೆ ಸಾರ್ವಜನಿಕ ಸ್ಥಳಗಳಲ್ಲಿ ಪ್ರವೇಶವನ್ನು ನಿರ್ಬಂಧಿಸಿರುವ ರಾಜ್ಯ ಸರಕಾರಗಳು ಮತ್ತು ಸಂಸ್ಥೆಗಳ ಕ್ರಮ ಸಮರ್ಪಕವಲ್ಲ ಮತ್ತು ಪ್ರಸ್ತುತ ಅಸ್ತಿತ್ವದಲ್ಲಿರುವ ಸ್ಥಿತಿಗಳಲ್ಲಿ ಅದನ್ನು ಹಿಂದೆಗೆದುಕೊಳ್ಳಬೇಕು ಎಂದು ಹೇಳಿದ ಸರ್ವೋಚ್ಚ ನ್ಯಾಯಾಲಯವು,‘ಕೋವಿಡ್ ಪ್ರಕರಣಗಳ ಸಂಖ್ಯೆ ಕಡಿಮೆ ಇರುವವರೆಗೆ ಪ್ರಸ್ತುತ ಆದೇಶವನ್ನು ಪಾಲಿಸುವಂತೆ,ಸಾರ್ವಜನಿಕ ಸ್ಥಳಗಳಲ್ಲಿ ವ್ಯಕ್ತಿಗಳ ಪ್ರವೇಶವನ್ನು ನಿರ್ಬಂಧಿಸದಂತೆ ಹಾಗೂ ಈಗಾಗಲೇ ಇಂತಹ ನಿರ್ಬಂಧಗಳಿದ್ದರೆ ಅವುಗಳನ್ನು ಹಿಂದೆಗೆದುಕೊಳ್ಳುವಂತೆ ನಾವು ಸೂಚಿಸುತ್ತೇವೆ ’ಎಂದು ತಿಳಿಸಿತು.

ಲಸಿಕೆಯ ಪರಿಣಾಮಗಳನ್ನು ವರದಿ ಮಾಡುವ ವ್ಯಕ್ತಿಗಳ ಮಾಹಿತಿಗಳೊಂದಿಗೆ ರಾಜಿ ಮಾಡಿಕೊಳ್ಳದೆ ಸಾರ್ವಜನಿಕವಾಗಿ ಲಭ್ಯ ವ್ಯವಸ್ಥೆಯೊಂದರಲ್ಲಿ ಲಸಿಕೆಯ ಅಡ್ಡಪರಿಣಾಮಗಳನ್ನು ಯಾವುದೇ ವಿಳಂಬವಿಲ್ಲದೆ ಪ್ರಕಟಿಸುವಂತೆ ಪೀಠವು ಕೇಂದ್ರ ಸರಕಾರಕ್ಕೆ ನಿರ್ದೇಶ ನೀಡಿತು.

ಕೋವಿಡ್ ಲಸಿಕೆಗಳ ಕ್ಲಿನಿಕಲ್ ಟ್ರಯಲ್‌ಗಳ  ದತ್ತಾಂಶಗಳನ್ನು ಬಹಿರಂಗಗೊಳಿಸುವಂತೆ ಮತ್ತು ಕಡ್ಡಾಯ ಲಸಿಕೆ ನೀಡಿಕೆಯು ಅಸಾಂವಿಧಾನಿಕ ಎಂದು ಘೋಷಿಸುವಂತೆ ಕೋರಿ ರಾಷ್ಟ್ರೀಯ ತಾಂತ್ರಿಕ ಸಲಹಾ ಗುಂಪಿನ ಮಾಜಿ ಸದಸ್ಯ ಡಾ.ಜಾಕೋಬ್ ಪುಲಿಯೆಲ್ ಅವರು ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ನ್ಯಾಯಾಲಯವು ತೀರ್ಪನ್ನು ಪ್ರಕಟಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X