Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಎಪ್ರಿಲ್ ನಲ್ಲಿ ಶೇ. 7.83 ಕ್ಕೇರಿದ...

ಎಪ್ರಿಲ್ ನಲ್ಲಿ ಶೇ. 7.83 ಕ್ಕೇರಿದ ಭಾರತದ ನಿರುದ್ಯೋಗ ದರ: ಸೆಂಟರ್ ಫಾರ್ ಇಂಡಿಯನ್ ಇಕಾನಮಿ ವರದಿ

ವಾರ್ತಾಭಾರತಿವಾರ್ತಾಭಾರತಿ2 May 2022 8:14 PM IST
share
ಎಪ್ರಿಲ್ ನಲ್ಲಿ ಶೇ. 7.83 ಕ್ಕೇರಿದ ಭಾರತದ ನಿರುದ್ಯೋಗ ದರ: ಸೆಂಟರ್ ಫಾರ್ ಇಂಡಿಯನ್ ಇಕಾನಮಿ ವರದಿ

ಹೊಸದಿಲ್ಲಿ,ಮೇ 2: ಮಾರ್ಚ್ ನಲ್ಲಿ ಶೇ.7.60 ರಷ್ಟಿದ್ದ ಭಾರತದ ನಿರುದ್ಯೋಗ ದರವು ಎಪ್ರಿಲ್ ನಲ್ಲಿ ಶೇ.7.83ಕ್ಕೆ ಏರಿಕೆಯಾಗಿದೆ ಎಂದು ಸೆಂಟರ್ ಫಾರ್ ಇಂಡಿಯನ್ ಇಕಾನಮಿ (ಸಿಎಂಐಇ) ತನ್ನ ವರದಿಯಲ್ಲಿ ತಿಳಿಸಿದೆ. ಮಾರ್ಚ್ ನಲ್ಲಿ ಶೇ.8.28ರಷ್ಟಿದ್ದ ನಗರ ನಿರುದ್ಯೋಗ ದರವು ಎಪ್ರಿಲ್ ನಲ್ಲಿ ಶೇ.9.22ಕ್ಕೇರಿದ್ದರೆ, ಶೇ.7.29ರಷ್ಟಿದ್ದ ಗ್ರಾಮೀಣ ನಿರುದ್ಯೋಗ ದರವು ಶೇ.7.18ಕ್ಕೆ ಇಳಿಕೆಯಾಗಿದೆ.

 ಶೇ.34.5ರಷ್ಟು ಅತ್ಯಂತ ಹೆಚ್ಚಿನ ನಿರುದ್ಯೋಗ ದರವು ಹರ್ಯಾಣದಲ್ಲಿ ದಾಖಲಾಗಿದ್ದರೆ ರಾಜಸ್ಥಾನ (ಶೇ.28.8) ನಂತರದ ಸ್ಥಾನದಲ್ಲಿದೆ. ಬೆಲೆ ಏರಿಕೆಯ ನಡುವೆ ದೇಶಿಯ ಬೇಡಿಕೆಯಲ್ಲಿ ಕುಸಿತ ಮತ್ತು ಆರ್ಥಿಕ ಚೇತರಿಕೆಯ ಮಂದಗತಿ ಉದ್ಯೋಗಾವಕಾಶಗಳ ಮೇಲೆ ಪ್ರತಿಕೂಲ ಪರಿಣಾಮವನ್ನು ಬೀರಿವೆ ಎನ್ನುವುದು ಆರ್ಥಿಕ ತಜ್ಞರ ಅಭಿಪ್ರಾಯವಾಗಿದೆ.

ಮಾರ್ಚ್ ನಲ್ಲಿ ಚಿಲ್ಲರೆ ಹಣದುಬ್ಬರವು ಕಳೆದ 17 ತಿಂಗಳುಗಳಲ್ಲಿ ಅಧಿಕ ಮಟ್ಟವಾದ ಶೇ.6.95 ಕ್ಕೆ ಏರಿಕೆಯಾಗಿದ್ದು,ಈ ವರ್ಷದ ಉತ್ತರಾರ್ಧದಲ್ಲಿ ಸುಮಾರು ಶೇ.7.5 ರಷ್ಟು ಉತ್ತುಂಗಕ್ಕೆ ಏರುವ ಸಾಧ್ಯತೆಯಿದೆ ಎಂದು ಸಿಂಗಾಪುರದ ಕ್ಯಾಪಿಟಲ್ ಇಕನಾಮಿಕ್ಸ್ ನ ಅರ್ಥಶಾಸ್ತ್ರಜ್ಞ ಶಿಲಾನ್ ಶಾ ಅವರು ಅಂದಾಜಿಸಿದ್ದಾರೆ. ಆರ್ಬಿಐ ಜೂನ್ ನಲ್ಲಿ ರೆಪೊ ದರವನ್ನು ಹೆಚ್ಚಿಸಬಹುದು ಎಂದು ಅವರು ನಿರೀಕ್ಷಿಸಿದ್ದಾರೆ.

ಸರಕಾರವು ತನ್ನದೇ ಆದ ಮಾಸಿಕ ಅಂಕಿಅಂಶಗಳನ್ನು ಬಿಡುಗಡೆಗೊಳಿಸುವುದಿಲ್ಲ,ಹೀಗಾಗಿ ಅರ್ಥಶಾಸ್ತ್ರಜ್ಞರು ಮತ್ತು ನೀತಿರೂಪಕರು ಸಿಎಂಐಇ ದತ್ತಾಂಶಗಳನ್ನು ನಿಕಟವಾಗಿ ಗಮನಿಸುತ್ತಿರುತ್ತಾರೆ.

ಅವರು ಕುಸಿಯುತ್ತಿರುವ ಕಾರ್ಮಿಕ ಪಾಲ್ಗೊಳ್ಳುವಿಕೆ ದರ, ಅಂದರೆ ದುಡಿಯುವ ಜನಸಂಖ್ಯೆಯಲ್ಲಿ ಉದ್ಯೋಗದಲ್ಲಿರುವವರು ಮತ್ತು ಉದ್ಯೋಗಗಳನ್ನು ಹುಡುಕುತ್ತಿರುವವರ ನಡುವಿನ ಅನುಪಾತದ ಮೇಲೂ ನಿಗಾ ಇರಿಸಿದ್ದಾರೆ. ಸಾಂಕ್ರಾಮಿಕದ ಸಂದರ್ಭ ಮಿಲಿಯಗಟ್ಟಲೆ ಜನರು ಉದ್ಯೋಗಗಳನ್ನು ಕಳೆದುಕೊಂಡಿದ್ದರಿಂದ 2019, ಮಾರ್ಚ್ ನಲ್ಲಿ ಶೇ.43.7ರಷ್ಟಿದ್ದ ಈ ದರವು 2022, ಮಾರ್ಚ್ ನಲ್ಲಿ ಶೇ.39.5 ಕ್ಕೆ ಕುಸಿದಿದೆ.ʼ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X