ಎಲ್ಗರ್ ಪರಿಷತ್ ಪ್ರಕರಣ: ವರವರ ರಾವ್ ಸಹಿತ ಇನ್ನಿಬ್ಬರ ಜಾಮೀನು ಅರ್ಜಿ ವಜಾಗೊಳಿಸಿದ ಹೈಕೋರ್ಟ್
![ಎಲ್ಗರ್ ಪರಿಷತ್ ಪ್ರಕರಣ: ವರವರ ರಾವ್ ಸಹಿತ ಇನ್ನಿಬ್ಬರ ಜಾಮೀನು ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಎಲ್ಗರ್ ಪರಿಷತ್ ಪ್ರಕರಣ: ವರವರ ರಾವ್ ಸಹಿತ ಇನ್ನಿಬ್ಬರ ಜಾಮೀನು ಅರ್ಜಿ ವಜಾಗೊಳಿಸಿದ ಹೈಕೋರ್ಟ್](https://www.varthabharati.in/sites/default/files/images/articles/2022/05/4/333930-1651654501.jpg)
ಮುಂಬೈ: ಎಲ್ಗರ್ ಪರಿಷತ್-ಮಾವೋವಾದಿ ನಂಟು ಪ್ರಕರಣದಲ್ಲಿ ಬಂಧಿತರಾಗಿರುವ ವರವರ ರಾವ್ ಹಾಗೂ ಇತರ ಇಬ್ಬರು ಸಾಮಾಜಿಕ ಹೋರಾಟಗಾರರು ಡೀಫಾಲ್ಟ್ ಜಾಮೀನು ನಿರಾಕರಿಸಿದ ಹೈಕೋರ್ಟ್ನ ಹಿಂದಿನ ಆದೇಶವನ್ನು ಮರುಪರಿಶೀಲಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಬಾಂಬೆ ಹೈಕೋರ್ಟ್ ಬುಧವಾರ ವಜಾಗೊಳಿಸಿದೆ.
ತನ್ನ ಹಿಂದಿನ ತೀರ್ಪಿನಲ್ಲಿ ಯಾವುದೇ ವಾಸ್ತವಿಕ ದೋಷವಿದೆ ಎಂದು ಹಿಡಿದಿಟ್ಟುಕೊಳ್ಳುವುದು ಕಷ್ಟಕರವಾಗಿದೆ ಮತ್ತು ಅದನ್ನು ಪರಿಶೀಲಿಸುವ ಅಗತ್ಯವಿದೆ ಎಂದು ಹೈಕೋರ್ಟ್ ಹೇಳಿದೆ.
ಮರುಪರಿಶೀಲನೆಯ ಯಾವುದೇ ಪ್ರಕರಣವನ್ನು ಮಾಡಲಾಗಿಲ್ಲ ಎಂದು ನ್ಯಾಯ ಮೂರ್ತಿಗಳಾದ ಎಸ್. ಎಸ್.ಶಿಂಧೆ ಮತ್ತು ಎನ್ .ಜೆ .ಜಮಾದಾರ್ ಅವರ ವಿಭಾಗೀಯ ಪೀಠ ಹೇಳಿದೆ.
ಪ್ರಕರಣದಲ್ಲಿ ಡೀಫಾಲ್ಟ್ ಜಾಮೀನು ನೀಡಲು ನಿರಾಕರಿಸಿದ ಹೈಕೋರ್ಟ್ನ ಹಿಂದಿನ ಆದೇಶವನ್ನು ಪ್ರಶ್ನಿಸಿ ಮೂವರು ಆರೋಪಿಗಳಾದ ವರವರ ರಾವ್, ಅರುಣ್ ಫೆರೇರಾ ಮತ್ತು ವೆರ್ನಾನ್ ಗೊನ್ಸಾಲ್ವಿಸ್ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ತಿರಸ್ಕರಿಸಿದೆ.
ರಾವ್ ಪ್ರಸ್ತುತ ವೈದ್ಯಕೀಯ ಜಾಮೀನಿನ ಮೇಲೆ ಹೊರಗಿದ್ದು, ಇತರ ಇಬ್ಬರು ಅರ್ಜಿದಾರರು ಜೈಲಿನಲ್ಲಿದ್ದಾರೆ.