Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮೋದಿ, ಮಾಧ್ಯಮಗಳ ಮೈಕು ಕಂಡರೆ ಏಕೆ-47...

ಮೋದಿ, ಮಾಧ್ಯಮಗಳ ಮೈಕು ಕಂಡರೆ ಏಕೆ-47 ಗನ್ ಕಂಡಂತೆ ಹೆದರಿ ಓಡುವುದೇಕೆ: ಕಾಂಗ್ರೆಸ್ ಪ್ರಶ್ನೆ

ವಾರ್ತಾಭಾರತಿವಾರ್ತಾಭಾರತಿ4 May 2022 7:11 PM IST
share
ಮೋದಿ, ಮಾಧ್ಯಮಗಳ ಮೈಕು ಕಂಡರೆ ಏಕೆ-47 ಗನ್ ಕಂಡಂತೆ ಹೆದರಿ ಓಡುವುದೇಕೆ: ಕಾಂಗ್ರೆಸ್ ಪ್ರಶ್ನೆ

ಬೆಂಗಳೂರು, ಮೇ 4: ‘ಪ್ರಧಾನಿ ಮೋದಿಯವರು ಮಾಧ್ಯಮಗಳ ಮೈಕು ಕಂಡರೆ ಏಕೆ-47 ಗನ್ ಕಂಡಂತೆ ಹೆದರಿ ಓಡುವುದೇಕೆ? ಗಂಗೆಯಲ್ಲಿ ಕೋವಿಡ್ ಶವ ತೇಲಿದಾಗ, ಚೀನಾ 20 ಯೋಧರ ಹತ್ಯೆ ಮಾಡಿದಾಗ, ಪುಲ್ವಾಮ ದಾಳಿಯಲ್ಲಿ 40 ಯೋಧರು ಮಡಿದಾಗ ಬಾರದ ‘ಓಹ್ ಮೈ ಗಾಡ್' ಉದ್ಘಾರ ಮಾಧ್ಯಮಗಳ ಮೈಕ್ ಎದುರಾದಾಗ ಬರುತ್ತದೆ ಎಂದರೆ ಅದೆಷ್ಟು ಗಾಭರಿಯಾಗಿರಬಹುದು!' ಎಂದು ಕಾಂಗ್ರೆಸ್ ಲೇವಡಿ ಮಾಡಿದೆ.

ಬುಧವಾರ ಸರಣಿ ಟ್ವೀಟ್ ಮಾಡಿರುವ ಕಾಂಗ್ರೆಸ್, ‘ಶೇ.40ರಷ್ಟು ಕಮಿಷನ್ ಬಿಜೆಪಿಯ ಹಗರಣಗಳ ಸಾಲಿಗೆ ಮತ್ತೊಂದು ಅಕ್ರಮ ಸೇರ್ಪಡೆಯಾಗಿದೆ. ರಮೇಶ್ ಜಾರಕಿಹೊಳಿಯವರ ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಕಂಪೆನಿ ಹೆಸರಲ್ಲಿ ನಡೆಯುತ್ತಿರುವ 600 ಕೋಟಿ ರೂ.ವಂಚನೆಗೆ ಇಡೀ ಸರಕಾರವೇ ಬೆಂಬಲವಾಗಿ ನಿಂತಿದೆ. ಅವರ ಸಾಲವನ್ನು ಎನ್‍ಪಿಎ ಎಂದು ಪರಿಗಣಿಸುವಲ್ಲಿ ರಾಜ್ಯ ಸರಕಾರ ಅಷ್ಟೇ ಅಲ್ಲ ಕೇಂದ್ರದ ಸಹಭಾಗಿತ್ವವೂ ಇದೆ' ಎಂದು ಟೀಕಿಸಿದೆ.

‘ಕೇಂದ್ರ ಗೃಹ ಸಚಿವರ ಭೇಟಿಯಿಂದ ರಾಜ್ಯಕ್ಕೆ ಸಿಕ್ಕ ಫಲವೇನು? ತೆರಿಗೆ ಬಾಕಿ ಕೊಡುವ ಬಗ್ಗೆ ಏನಾದರೂ ಹೇಳಿದರೆ? ಬಸವರಾಜ ಬೊಮ್ಮಾಯಿ ಅವರು ಕೇಳಿದರೆ? ಪಿಎಸ್ಸೈ ಪರೀಕ್ಷೆ, ಶೇ.40ರಷ್ಟು ಕಮಿಷನ್, ಬಿಟ್ ಕಾಯಿನ್ ಹಗರಣಗಳ ತನಿಖೆಯ ಬಗ್ಗೆ ಚರ್ಚಿಸಿದರೇ? ಬಾಕಿ ಉಳಿದ ನೆರೆ ಪರಿಹಾರ ಕೊಟ್ಟು ಹೋದರೇ? ನೀರಾವರಿ ಯೋಜನೆಗಳ ಅಡೆತಡೆಗಳನ್ನು ನಿವಾರಿಸಿದರೆ?' ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

‘ಈ ಬಿಜೆಪಿ ಶೇ.40 ಕಮಿಷನ್ ಸರಕಾರಕ್ಕೆ ಜನರನ್ನು ಲೂಟಿ ಮಾಡಲು, ಎಲ್ಲ್ಲ ರೀತಿಯ ಅನ್ಯ ಮಾರ್ಗವನ್ನು ಹಿಡಿಯುತ್ತದೆ. ಮೂಲಸೌಕರ್ಯ ನೀಡುವುದು ಸರಕಾರದ ಆದ್ಯ ಕರ್ತವ್ಯ ಆದರೂ ಶುಲ್ಕ ನಿಗದಿ ಮಾಡಿ ಕ್ರೀಡಾಪಟುಗಳಲ್ಲಿ ಕ್ರೀಡಾ ಆಸಕ್ತಿಯನ್ನೇ ಕಡಿಮೆ ಮಾಡುವ ಮೂಲಕ ಕೋಮುಗಲಭೆಗೆ ಸೆಳೆಯುವ ಪಯತ್ನವೇ? ಅಥವಾ ಸರಕಾರದ ಖಜಾನೆ ಖಾಲಿಯಾಗಿದೆಯೇ?' ಎಂದು ಕಾಂಗ್ರೆಸ್ ವಾಗ್ದಾಳಿ ನಡೆಸಿದೆ.

ಆಹ್ವಾನವಿಲ್ಲದೆ ಬಿರಿಯಾನಿ ತಿನ್ನಲು ಪಾಕ್‍ಗೆ ಹೋಗಿಲ್ಲ: ‘ರಾಹುಲ್ ಗಾಂಧಿಯವರು ಆಹ್ವಾನದ ಮೇರೆಗೆ ಸ್ನೇಹಿತರ ಮದುವೆ ಕಾರ್ಯಕ್ರಮಕ್ಕೆ ಹೋಗಿದ್ದರೇ ಹೊರತು ಆಹ್ವಾನವಿಲ್ಲದಿದ್ದರೂ ಪಾಕಿಸ್ತಾನದ ಬಿರಿಯಾನಿ ತಿನ್ನಲು ಹೋಗಿರಲಿಲ್ಲ! ಪುಲ್ವಾಮ ದಾಳಿಯ ಸಂಗತಿ ತಿಳಿದರೂ ನಿರ್ಲಕ್ಷಿಸಿ ಶೂಟಿಂಗ್‍ನಲ್ಲಿ ನಿರತರಾಗಿದ್ದ ತಮ್ಮ ನಾಯಕನಿಗೆ ಬಿಜೆಪಿಗರು ಮೊದಲು ಬುದ್ಧಿ ಹೇಳಿಕೊಳ್ಳಲಿ' ಎಂದು ಕಾಂಗ್ರೆಸ್ ತಿರುಗೇಟು ನೀಡಿದೆ.

‘ರಾಹುಲ್ ಗಾಂಧಿಯವರು ಮದುವೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು ಜಗತ್ತಿನ ಅತಿದೊಡ್ಡ ಪ್ರಮಾದ ಎನ್ನುತ್ತಿರುವ ಬಿಜೆಪಿ ಉತ್ತರಿಸಲಿ, ಬಿಜೆಪಿ ನಾಯಕ ಪ್ರಕಾಶ್ ಜಾವ್ಡೇಕರ್ ಅವರು ಇದೇನು ಗೋಮೂತ್ರ ಪ್ರೋಕ್ಷಣೆ ಮಾಡುತ್ತಿರುವುದೇ ಅಥವಾ ಪವಿತ್ರ ಗಂಗಾಜಲವನ್ನು ಬಾಟಲಿಯಲ್ಲಿ ತುಂಬಿಕೊಂಡು ಸಿಂಪಡಿಸುತ್ತಿರುವುದೇ?!'(ಶಾಂಪೆನ್ ಬಾಟಲಿ ಹಿಡಿದ ಪ್ರಕಾಶ್ ಜಾವ್ಡೇಕರ್ ಫೋಟೋದೊಂದಿಗೆ ಟ್ವೀಟ್)

-ಡಿ.ಕೆ.ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷ

ಪ್ರಧಾನಿ ಮೋದಿಯವರು ಮಾಧ್ಯಮಗಳ ಮೈಕು ಕಂಡರೆ AK47 ಗನ್ ಕಂಡಂತೆ ಹೆದರಿ ಓಡುವುದೇಕೆ @BJP4Karnataka?

ಗಂಗೆಯಲ್ಲಿ ಕೋವಿಡ್ ಶವ ತೇಲಿದಾಗ, ಚೀನಾ 20 ಯೋಧರ ಹತ್ಯೆ ಮಾಡಿದಾಗ, ಪುಲ್ವಾಮ ದಾಳಿಯಲ್ಲಿ 40 ಯೋಧರು ಮಡಿದಾಗ ಬಾರದ 'ಓಹ್ ಮೈ ಗಾಡ್' ಉದ್ಘಾರ ಮಾಧ್ಯಮಗಳ ಮೈಕ್ ಎದುರಾದಾಗ ಬರುತ್ತದೆ ಎಂದರೆ ಅದೆಷ್ಟು ಗಾಭರಿಯಾಗಿರಬಹುದು!

— Karnataka Congress (@INCKarnataka) May 4, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X