ಕುಮಾರಸ್ವಾಮಿ ಸಮ್ಮುಖದಲ್ಲಿ ಮಡಿಕೇರಿ ನಗರಸಭೆಯ ನಿವೃತ್ತ ಆಯುಕ್ತೆ ಜೆಡಿಎಸ್ ಸೇರ್ಪಡೆ
ಮಡಿಕೇರಿ ಮೇ 5 : ಮಡಿಕೇರಿ ನಗರಸಭೆಯ ನಿವೃತ್ತ ಆಯುಕ್ತರಾದ ಮೂಟೆರ ಬಿ.ಬಿ. ಪುಷ್ಪಾವತಿ ಇಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ಸಮ್ಮುಖದಲ್ಲಿ ಜಾತ್ಯತೀತ ಜನತಾದಳ ಪಕ್ಷಕ್ಕೆ ಸೇರ್ಪಡೆಗೊಂಡರು.
ಬೆಂಗಳೂರಿನ ಜೆಪಿ ಭವನದಲ್ಲಿ ಕುಮಾರಸ್ವಾಮಿ ಅವರು ಪಕ್ಷದ ಬಾವುಟ ನೀಡಿ, ಶಲ್ಯ ತೊಡಿಸಿ ಜೆಡಿಎಸ್ಗೆ ಬರಮಾಡಿಕೊಂಡರು.
ಈ ಸಂದರ್ಭ ಜಿಲ್ಲಾಧ್ಯಕ್ಷ ಕೆ.ಎಂ.ಗಣೇಶ್ , ಅಲ್ಪಸಂಖ್ಯಾತ ಘಟಕದ ಜಿಲ್ಲಾಧ್ಯಕ್ಷ ಇಸಾಕ್ ಖಾನ್, ಕಾರ್ಯದರ್ಶಿ ಎನ್. ಸಿ. ಸುನಿಲ್, ಖಜಾoಜಿ ಡೆನ್ನಿ ಬರೋಸ್, ಮಹಿಳಾ ಘಟಕದ ಕಾರ್ಯದರ್ಶಿ ಲೀಲಾ ಶೇಷಮ್ಮ, ಯುವ ಘಟಕ ನಗರ ಕಾರ್ಯದರ್ಶಿ ನಚಿಕೇತ್ ಹಾಜರಿದ್ದರು.
Next Story