Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಕೋವಿಡ್‌ನಿಂದ ವಿಶ್ವದಲ್ಲಿ ಮೃತರ ಸಂಖ್ಯೆ...

ಕೋವಿಡ್‌ನಿಂದ ವಿಶ್ವದಲ್ಲಿ ಮೃತರ ಸಂಖ್ಯೆ 15 ಲಕ್ಷ: ವಿಶ್ವ ಆರೋಗ್ಯ ಸಂಸ್ಥೆ

ವಾರ್ತಾಭಾರತಿವಾರ್ತಾಭಾರತಿ6 May 2022 12:41 AM IST
share
ಕೋವಿಡ್‌ನಿಂದ ವಿಶ್ವದಲ್ಲಿ ಮೃತರ ಸಂಖ್ಯೆ 15 ಲಕ್ಷ: ವಿಶ್ವ ಆರೋಗ್ಯ ಸಂಸ್ಥೆ

 ವಿಶ್ವಸಂಸ್ಥೆ, ಮೇ 5: ಕೋವಿಡ್-19 ಸೋಂಕಿನಿಂದ ವಿಶ್ವದಲ್ಲಿ ಮೃತಪಟ್ಟವರ ಸಂಖ್ಯೆ ಅಧಿಕೃತ ಅಂಕಿಅಂಶಕ್ಕಿಂತ ಸುಮಾರು 3 ಪಟ್ಟು ಹೆಚ್ಚಿದೆ. ಸುಮಾರು 15 ಮಿಲಿಯನ್ ಜನತೆ ಕೊರೋನ ಸೋಂಕಿನಿಂದ ಮೃತರಾಗಿದ್ದಾರೆ ಎಂದು ವಿಶ್ವ ಆರೋಗ್ಯ ಸಂಸ್ಥೆಯ ವರದಿ ಹೇಳಿದೆ.

  2020ರ ಜನವರಿಯಿಂದ 2021ರ ಡಿಸೆಂಬರ್ ಅಂತ್ಯದವರೆಗಿನ ಅವಧಿಯಲ್ಲಿ ಕೋವಿಡ್ ಸೋಂಕಿಗೆ ನೇರ ಸಂಬಂಧಿಸಿದ ಮತ್ತು ವಿಶ್ವ ಆರೋಗ್ಯ ಸಂಸ್ಥೆಯಲ್ಲಿ ವರದಿಯಾದ ಅಧಿಕೃತ ಮರಣದ ಪ್ರಮಾಣ 5.4 ಮಿಲಿಯಕ್ಕಿಂತ ಹೆಚ್ಚು. ಆದರೆ 2021ರ ಅಂತ್ಯದವರೆಗೆ, ಕೋವಿಡ್-19ಕ್ಕೆ ಸಂಬಂಧಿಸಿದ ಸುಮಾರು 14.9 ಮಿಲಿಯನ್ ಹೆಚ್ಚುವರಿ ಮರಣ ಸಂಭವಿಸಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಗುರುವಾರ ಹೇಳಿದೆ. ಈ ಲೆಕ್ಕ ಹಾಕದ ಸಾವಿನ ಪ್ರಕರಣಗಳಲ್ಲಿ ಸುಮಾರು 50%ದಷ್ಟು ಭಾರತದಲ್ಲಿ ದಾಖಲಾಗಿದೆ. ಕೊರೋನ ಸೋಂಕಿನಿಂದ ಭಾರತದಲ್ಲಿ ಸುಮಾರು 4.7 ಮಿಲಿಯನ್ ಜನತೆ ಮೃತಪಟ್ಟಿರುವುದಾಗಿ ವರದಿಯಾಗಿದ್ದು ಇದು ಸರಕಾರ ನೀಡಿದ ಅಧಿಕೃತ ಅಂಕಿಅಂಶಕ್ಕಿಂತ ಸುಮಾರು 10 ಪಟ್ಟು ಹೆಚ್ಚು ಮತ್ತು ಜಾಗತಿಕ ಒಟ್ಟು ಮರಣದ ಪ್ರಮಾಣದ ಮೂರನೇ ಒಂದರಷ್ಟು ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ.

 ಸಂಭವಿಸಿದ ಮರಣದ ಪ್ರಮಾಣ ಮತ್ತು ಸಾಂಕ್ರಾಮಿಕ ರೋಗ ಕಾಣಿಸಿಕೊಳ್ಳದಿದ್ದರೆ ನಿರೀಕ್ಷಿಸಬಹುದಾದ ಸಾವಿನ ಪ್ರಮಾಣದ (ಈ ಹಿಂದಿನ ವರ್ಷದ ಅಂಕಿಅಂಶದ ಆಧಾರದಲ್ಲಿ) ನಡುವಿನ ವ್ಯತ್ಯಾಸವನ್ನು ಅಧಿಕ ಮರಣದ ಪ್ರಮಾಣ ಎಂದು ಲೆಕ್ಕ ಹಾಕಲಾಗುತ್ತದೆ. ಕೋವಿಡ್ ಸೋಂಕಿನಿಂದ ನೇರ ಅಥವಾ ಪರೋಕ್ಷವಾಗಿ ಮರಣ ಹೊಂದಿದ ಪ್ರಕರಣವನ್ನು ವಿಶ್ವ ಆರೋಗ್ಯ ಸಂಸ್ಥೆ ಲೆಕ್ಕಹಾಕಿದೆ. ಅಂದರೆ, ರೋಗ ಲಕ್ಷಣ ಕಾಣಿಸಿಕೊಂಡಾಗ ಸೂಕ್ತ ಆರೋಗ್ಯ ಸೇವೆ ಒದಗಿಸುವಲ್ಲಿನ ವೈಫಲ್ಯ ಇತ್ಯಾದಿಗಳಿಂದ ಸಂಭವಿಸುವ ಸಾವಿನ ಪ್ರಕರಣವನ್ನು ಇಲ್ಲಿ ಲೆಕ್ಕ ಹಾಕಲಾಗಿದೆ.

 ಅಂಕಿಅಂಶದಲ್ಲಿನ ವ್ಯತ್ಯಾಸವು, ಸಾಂಕ್ರಾಮಿಕದ ಪರಿಣಾಮವನ್ನು ಸೂಚಿಸುವ ಜತೆಗೆ, ಬಿಕ್ಕಟ್ಟಿನ ಸಂದರ್ಭ ಎಲ್ಲರಿಗೂ ಸುಲಭದಲ್ಲಿ ಮತ್ತು ಸಕಾಲದಲ್ಲಿ ಆರೋಗ್ಯ ಸೇವೆ ಒದಗಿಸುವ ವ್ಯವಸ್ಥೆಗೆ ಹೆಚ್ಚಿನ ಅನುದಾನ ಒದಗಿಸುವ ಅನಿವಾರ್ಯತೆ ಮತ್ತು ಅಗತ್ಯವನ್ನು, ಆರೋಗ್ಯ ಮಾಹಿತಿ ವ್ಯವಸ್ಥೆಯ ಸುಧಾರಣೆಯ ಅಗತ್ಯವನ್ನು ಒತ್ತಿ ಹೇಳಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆಯ ಪ್ರಧಾನ ನಿರ್ದೇಶಕ ಟೆಡ್ರೋಸ್ ಅಧನಮ್ ಘೆಬ್ರಯೇಸಸ್ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X