Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ವಿಶ್ವಸಂಸ್ಥೆ ಭದ್ರತಾ ಸಮಿತಿ ಸದಸ್ಯತ್ವ:...

ವಿಶ್ವಸಂಸ್ಥೆ ಭದ್ರತಾ ಸಮಿತಿ ಸದಸ್ಯತ್ವ: ಭಾರತಕ್ಕೆ ಫ್ರಾನ್ಸ್ ಬೆಂಬಲ

ವಾರ್ತಾಭಾರತಿವಾರ್ತಾಭಾರತಿ6 May 2022 12:48 AM IST
share
ವಿಶ್ವಸಂಸ್ಥೆ ಭದ್ರತಾ ಸಮಿತಿ ಸದಸ್ಯತ್ವ: ಭಾರತಕ್ಕೆ ಫ್ರಾನ್ಸ್ ಬೆಂಬಲ

ಪ್ಯಾರಿಸ್, ಮೇ 5: ವಿಶ್ವಸಂಸ್ಥೆಯ ಭದ್ರತಾ ಸಮಿತಿಯ ಕಾಯಂ ಸದಸ್ಯತ್ವ ಮತ್ತು ಪರಮಾಣು ಪೂರೈಕೆದಾರರ ತಂಡ(ಎನ್‌ಎಸ್‌ಜಿ)ದ ಸದಸ್ಯತ್ವ ಪಡೆಯುವ ಭಾರತದ ಪ್ರಯತ್ನವನ್ನು ಬೆಂಬಲಿಸುವುದಾಗಿ ಫ್ರಾನ್ಸ್ ಪುನರುಚ್ಚರಿಸಿದೆ. ಫ್ರಾನ್ಸ್‌ನ ಅಧ್ಯಕ್ಷ ಇಮ್ಯಾನುವೆಲ್ ಮಾಕ್ರನ್ ಅವರೊಂದಿಗೆ ಪ್ರಧಾನಿ ನರೇಂದ್ರ ಮೋದಿ ನಡೆಸಿದ ಮಾತುಕತೆ ಬಳಿಕ ಹೊರಡಿಸಿದ ಜಂಟಿ ಹೇಳಿಕೆಯಲ್ಲಿ ಈ ಘೋಷಣೆ ಮಾಡಲಾಗಿದೆ. ಜಿ20 ಚೌಕಟ್ಟಿನಲ್ಲಿ ಬಲವಾದ ಸಮನ್ವಯವನ್ನು ಕಾಯ್ದುಕೊಳ್ಳಲು ಭಾರತ-ಫ್ರಾನ್ಸ್ ಒಪ್ಪಿಕೊಂಡಿವೆ. ಭದ್ರತಾ ಸಮಿತಿಯ ಕಾಯಂ ಸದಸ್ಯತ್ವ ಪಡೆಯುವ ಭಾರತದ ಪ್ರಯತ್ನಕ್ಕೆ ಬೆಂಬಲದ ಜೊತೆಗೆ, ಪರಮಾಣು ಪೂರೈಕೆ ತಂಡ(ಎನ್‌ಎಸ್‌ಜಿ)ಯಲ್ಲಿ ಭಾರತದ ಸೇರ್ಪಡೆಯನ್ನೂ ಬೆಂಬಲಿಸುತ್ತದೆ ಎಂದು ಜಂಟಿ ಹೇಳಿಕೆ ತಿಳಿಸಿದೆ. 48 ಸದಸ್ಯರುಳ್ಳ ಎನ್‌ಎಸ್‌ಜಿಯು ಪರಮಾಣು ತಂತ್ರಜ್ಞಾನ ಮತ್ತು ವಿದಳನ ವಸ್ತುಗಳ ವ್ಯವಹಾರದಲ್ಲಿ ತೊಡಗಿರುವ ದೇಶಗಳ ಗಣ್ಯ ಸಂಘಟನೆಯಾಗಿದ್ದು ಪರಮಾಣು ಶಸ್ತ್ರಾಸ್ತ್ರ ಪ್ರಸರಣ ಮಾಡದಿರುವುದಕ್ಕೆ ಬದ್ಧವಾಗಿದೆ. ಪರಮಾಣು ಶಕ್ತ 5 ದೇಶಗಳಲ್ಲಿ ಒಂದಾಗಿರುವ ಚೀನಾವು ಭಾರತಕ್ಕೆ ಎನ್‌ಎಸ್‌ಜಿ ಸದಸ್ಯತ್ವ ನೀಡುವುದನ್ನು ತೀವ್ರವಾಗಿ ವಿರೋಧಿಸುತ್ತಿದೆ. ಭಾರತವು ಪರಮಾಣು ಪ್ರಸರಣ ಮಾಡದಿರುವ ಒಪ್ಪಂದಕ್ಕೆ ಸಹಿ ಹಾಕಿಲ್ಲ ಎಂಬುದು ಚೀನಾದ ವಿರೋಧಕ್ಕೆ ಕಾರಣವಾಗಿದೆ. ಸರ್ವಾನುಮತದ ನಿರ್ಧಾರದ ಆಧಾರದಲ್ಲಿ ಎನ್‌ಎಸ್‌ಜಿ ಸದಸ್ಯತ್ವ ನೀಡುವುದರಿಂದ ಚೀನಾದ ನಿಲುವು ಭಾರತದ ಆಶಯಕ್ಕೆ ಅಡ್ಡಿಯಾಗಿದೆ.

ವಿಶ್ವಸಂಸ್ಥೆಯ ಭದ್ರತಾ ಸಮಿತಿಯಲ್ಲಿ ಕೆಲವು ಸುಧಾರಣೆಯಾಗಬೇಕೆಂದು ದೀರ್ಘಾವಧಿಯಿಂದ ಪ್ರತಿಪಾದಿಸುತ್ತಿರುವ ಭಾರತ, ವಿಶ್ವಸಂಸ್ಥೆಯ ಉನ್ನತ ಸಮಿತಿಯಲ್ಲಿ ಕಾಯಂ ಸದಸ್ಯತ್ವ ಪಡೆಯುವ ಎಲ್ಲಾ ಅರ್ಹತೆಯನ್ನೂ ಹೊಂದಿದೆ ಎಂದು ಫ್ರಾನ್ಸ್ ಹೇಳಿದೆ. ಈಗ ವಿಶ್ವಸಂಸ್ಥೆಯ ಭದ್ರತಾ ಸಮಿತಿಯಲ್ಲಿ 5 ಕಾಯಂ ಸದಸ್ಯ ದೇಶಗಳು ಮತ್ತು 10 ಕಾಯಂ ಅಲ್ಲದ (2 ವರ್ಷದ ಸದಸ್ಯತ್ವ ಅವಧಿ)ಸದಸ್ಯ ದೇಶಗಳಿವೆ.

ರಶ್ಯ, ಬ್ರಿಟನ್, ಚೀನಾ, ಫ್ರಾನ್ಸ್ ಮತ್ತು ಅಮೆರಿಕ ಕಾಯಂ ಸದಸ್ಯರಾಗಿದ್ದು ವಿಟೊ ಅಧಿಕಾರ ಹೊಂದಿವೆ. ಸಮಕಾಲೀನ ಜಗತ್ತಿನ ವಾಸ್ತವತೆಯನ್ನು ಪ್ರತಿಬಿಂಬಿಸಲು ಕಾಯಂ ಸದಸ್ಯರ ಸಂಖ್ಯೆಯನ್ನು ಹೆಚ್ಚಿಸುವ ಅಗತ್ಯವಿದೆ ಎಂದು ಆಗ್ರಹಿಸಲಾಗುತ್ತಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X