Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ವ್ಯಕ್ತಿಯ ಪೌರತ್ವವನ್ನು ಒಮ್ಮೆ ಘೋಷಿಸಿದ...

ವ್ಯಕ್ತಿಯ ಪೌರತ್ವವನ್ನು ಒಮ್ಮೆ ಘೋಷಿಸಿದ ಬಳಿಕ ಎರಡನೇ ಬಾರಿ ವಿಚಾರಣೆಗೆ ಅವಕಾಶವಿಲ್ಲ

ವಿದೇಶಿಯರ ನ್ಯಾಯಾಧಿಕರಣದ ಮಹತ್ವದ ತೀರ್ಪು

ವಾರ್ತಾಭಾರತಿವಾರ್ತಾಭಾರತಿ6 May 2022 3:31 PM IST
share
ವ್ಯಕ್ತಿಯ ಪೌರತ್ವವನ್ನು ಒಮ್ಮೆ ಘೋಷಿಸಿದ ಬಳಿಕ ಎರಡನೇ ಬಾರಿ ವಿಚಾರಣೆಗೆ ಅವಕಾಶವಿಲ್ಲ

  ಗುವಾಹಟಿ,ಮೇ 6: ಓರ್ವ ವ್ಯಕ್ತಿಯನ್ನು ಭಾರತೀಯ ಎಂದು ಘೋಷಿಸಿದ ಬಳಿಕ ನಂತರದ ಕಲಾಪಗಳಲ್ಲಿ ಆತನನ್ನು ವಿದೇಶಿ ಎಂದು ಘೋಷಿಸುವಂತಿಲ್ಲ ಎಂದು ಗುವಾಹಟಿ ಉಚ್ಚ ನ್ಯಾಯಾಲಯದ ವಿದೇಶಿಯರ ನ್ಯಾಯಾಧಿಕರಣ ಪೀಠವು ಹೇಳಿದೆ. ಪೌರತ್ವ ವಿವಾದಕ್ಕೆ ಸಂಬಂಧಿಸಿದಂತೆ ಹಲವಾರು ಪ್ರಕರಣಗಳು ದಾಖಲಾಗಿರುವ ಅಸ್ಸಾಮಿನಲ್ಲಿ ಇದೊಂದು ಮಹತ್ವದ ತೀರ್ಪು ಆಗಿದೆ.

ವ್ಯಕ್ತಿಯ ಪೌರತ್ವಕ್ಕೆ ಸಂಬಂಧಿಸಿದಂತೆ ವಿದೇಶಿಯರ ನ್ಯಾಯಾಧಿಕರಣದ ಅಭಿಪ್ರಾಯವು ‘ರೆಸ್ ಜ್ಯುಡಿಕೇಟಾ (ಪೂರ್ವ ನ್ಯಾಯ)’ದಂತೆ ಕಾರ್ಯಾಚರಿಸುತ್ತದೆ ಎಂದು ನ್ಯಾಯಮೂರ್ತಿಗಳಾದ ಎನ್.ಕೋಟಿಶ್ವರ ಸಿಂಗ್ ಮತ್ತು ನಾನಿ ತಾಗಿಯಾ ಅವರ ಪೀಠವು ಹೇಳಿತು. ಪ್ರಕರಣವೊಂದರಲ್ಲಿ ನ್ಯಾಯಾಲಯವು ತನ್ನ ಅಂತಿಮ ತೀರ್ಪನ್ನು ನೀಡಿದ ಬಳಿಕ ಅದೇ ಕಕ್ಷಿದಾರರು ಅದೇ ವಿಷಯದಲ್ಲಿ ಮತ್ತೆ ದಾವೆ ಹೂಡುವಂತಿಲ್ಲ ಎಂದು ಕಾನೂನಿನ ತತ್ತ್ವವು ಹೇಳುತ್ತದೆ.
ತಮ್ಮನ್ನು ಮೊದಲು ಭಾರತೀಯ ಪ್ರಜೆಗಳೆಂದು ಘೋಷಿಸಲಾಗಿತ್ತು,ಆದರೆ ನಂತರ ವಿದೇಶಿಯರೆಂದು ಘೋಷಿಸಲಾಗಿದೆ ಎಂದು ದೂರಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆ ಸಂದರ್ಭ ನ್ಯಾಯಾಧೀಶರು ಈ ಅಭಿಪ್ರಾಯವನ್ನು ವ್ಯಕ್ತಪಡಿಸಿದರು. ಎರಡು ಪೌರತ್ವ ಸಂಬಂಧಿತ ತೀರ್ಪುಗಳ ಕುರಿತು ಗೊಂದಲವುಂಟಾದ ಬಳಿಕ ನ್ಯಾಯಾಲಯವು ಪೂರ್ವ ನ್ಯಾಯ ತತ್ತ್ವದ ಕುರಿತು ಸ್ಪಷ್ಟೀಕರಣವನ್ನು ನೀಡಿತು.

ಅಮೀನಾ ಖಾತೂನ್ ಎನ್ನುವುವರು ಹೂಡಿದ್ದ ಪೌರತ್ವ ದಾವೆಯಲ್ಲಿ ಗುವಾಹಟಿ ಉಚ್ಚ ನ್ಯಾಯಾಲಯವು,ಸ್ಪಷ್ಟ ಅರ್ಥದಲ್ಲಿ ವಿದೇಶಿಯರ ನ್ಯಾಯಾಧಿಕರಣವು ನ್ಯಾಯಾಲಯವಲ್ಲ,ಹೀಗಾಗಿ ಅದರ ವಿಚಾರಣೆಗಳನ್ನು ನ್ಯಾಯಾಂಗ ಪ್ರಕ್ರಿಯೆಗಳೆಂದು ಪರಿಗಣಿಸಲಾಗುವುದಿಲ್ಲ. ಆದ್ದರಿಂದ ವಿದೇಶಿಯರ ಕಾಯ್ದೆ ಮತ್ತು ವಿದೇಶಿಯರ ನ್ಯಾಯಾಧಿಕರಣದ ಆದೇಶದಡಿ ಪೂರ್ವ ನ್ಯಾಯ ತತ್ತ್ವವನ್ನು ಅನ್ವಯಿಸುವಂತಿಲ್ಲ ಎಂದು ಎತ್ತಿ ಹಿಡಿದಿತ್ತು. ಆದರೆ ಅಬ್ದುಲ್ ಕುದ್ದೂಸ್ ಎನ್ನುವವರು ಹೂಡಿದ್ದ ಇನ್ನೊಂದು ದಾವೆಯಲ್ಲಿ ಸರ್ವೋಚ್ಚ ನ್ಯಾಯಾಲಯವು,ವಿದೇಶಿಯರ ನ್ಯಾಯಾಧಿಕರಣವು ಪೂರ್ವ ನ್ಯಾಯ ತತ್ತ್ವವನ್ನು ಅನ್ವಯಿಸಿ ವ್ಯಕ್ತಿಯ ಪೌರತ್ವವನ್ನು ನಿರ್ಧರಿಸಿ ಆದೇಶವನ್ನು ಹೊರಡಿಸಿದ್ದರೆ ಅದೇ ವ್ಯಕ್ತಿಯ ವಿರುದ್ಧದ ನಂತರದ ಕಲಾಪಗಳಲ್ಲಿ ಈ ನಿರ್ಧಾರವು ಬಂಧಕವಾಗಿರುತ್ತದೆ ಮತ್ತು ಆತನ ಪೌರತ್ವವನ್ನು ಮರುನಿರ್ಧರಿಸಲು ಇನ್ನೊಂದು ವಿಚಾರಣೆ ನಡೆಸುವಂತಿಲ್ಲ ಎಂದು ಎತ್ತಿ ಹಿಡಿದಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X