Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಗೋವುಗಳ ದತ್ತು ತೆಗೆದುಕೊಳ್ಳುವ...

ಗೋವುಗಳ ದತ್ತು ತೆಗೆದುಕೊಳ್ಳುವ 'ಪುಣ್ಯಕೋಟಿ ದತ್ತು ಯೋಜನೆ' ಪ್ರಾರಂಭ: ಮುಖ್ಯಮಂತ್ರಿ ಬೊಮ್ಮಾಯಿ

‘ಉತ್ಪನ್ನಗಳ ಮಾರಾಟಕ್ಕೆ ಗೋ ಮಾತಾ ಸಹಕಾರ ಸಂಘ ಸ್ಥಾಪನೆ'

ವಾರ್ತಾಭಾರತಿವಾರ್ತಾಭಾರತಿ7 May 2022 7:35 PM IST
share
ಗೋವುಗಳ ದತ್ತು ತೆಗೆದುಕೊಳ್ಳುವ ಪುಣ್ಯಕೋಟಿ ದತ್ತು ಯೋಜನೆ ಪ್ರಾರಂಭ: ಮುಖ್ಯಮಂತ್ರಿ ಬೊಮ್ಮಾಯಿ

ಬೆಂಗಳೂರು, ಮೇ 7: ‘ರಾಜ್ಯದ ಗೋಶಾಲೆಗಳಲ್ಲಿನ ಗೋವುಗಳನ್ನು ವಾರ್ಷಿಕ 11 ಸಾವಿರ ರೂ.ಗಳನ್ನು ನೀಡಿ ದತ್ತು ತೆಗೆದುಕೊಳ್ಳುವ ಪುಣ್ಯಕೋಟಿ ದತ್ತು ಯೋಜನೆಯನ್ನು ಪ್ರಾರಂಭಿಸಲಾಗಿದೆ' ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದಿಲ್ಲಿ ತಿಳಿಸಿದ್ದಾರೆ.

ಶನಿವಾರ ವಿಧಾನಸೌಧದ ಆವರಣದಲ್ಲಿ ಪಶುವೈದ್ಯಕೀಯ ಇಲಾಖೆ ವತಿಯಿಂದ ಸಂಚಾರಿ ಪಶು ಚಿಕಿತ್ಸಾ ಘಟಕ ಲೋಕಾರ್ಪಣೆ ಮಾಡಿ, ಫಲಾನುಭವಿಗಳಿಗೆ ವಿವಿಧ ಸವಲತ್ತುಗಳ ವಿತರಿಸಿ ಮಾತನಾಡಿದ ಅವರು, ‘ಈ ಹಿಂದೆ ನಾನು ನನ್ನ ಹುಟ್ಟುಹಬ್ಬವನ್ನು ಅನಾಥಾಶ್ರಮಕ್ಕೆ ತೆರಳಿ ಮಕ್ಕಳಿಗೆ ದಾನಧರ್ಮ ಮಾಡುವ ಮೂಲಕ ಆಚರಿಸಿಕೊಳ್ಳುತ್ತಿದ್ದೆ. ಈ ಬಾರಿ ನಾನು 11 ಗೋವುಗಳನ್ನು ದತ್ತು ತೆಗೆದುಕೊಂಡು ಆಚರಿಸಿಕೊಂಡಿರುವೆ' ಎಂದು ಸ್ಮರಿಸಿದರು.

‘ರಾಜ್ಯದಲ್ಲಿ ಗೋವುಗಳನ್ನು ಗೋಮಾತೆ ಎಂದು ಪೂಜಿಸುವ ಲಕ್ಷಗಟ್ಟಲೆ ಜನರಿದ್ದಾರೆ. ಗೋವುಗಳ ಸೇವೆ ಪುಣ್ಯದ ಕೆಲಸವೆನ್ನುವ ಭಾವನೆ ನಮ್ಮಲ್ಲಿದೆ. ಈ ಯೋಜನೆಯಿಂದ ಗೋಶಾಲೆ ಹಾಗೂ ಗೋವುಗಳ ನಿರ್ವಹಣೆ ಸಾಧ್ಯವಾಗಲಿದೆ. ವಯಸ್ಸಾದ ಗೋವುಗಳ ನಿರ್ವಹಣೆಗೆ ಪರಿಹಾರ ಒದಗಿಸುವ ಸಕಾರಾತ್ಮಕ ಚಿಂತನೆಯಿಂದ ಈ ಯೋಜನೆಯನ್ನು ಸರಕಾರ ರೂಪಿಸಿದೆ' ಎಂದು ಅವರು ಹೇಳಿದರು. 

ಜೀವನಕ್ಕೆ ಆಧಾರ ಗೋವು: ‘ಕಾಮಧೇನು ಎಂದೇ ಕರೆಯಲ್ಪಡುವ ಗೋವುಗಳಿಲ್ಲದೆ ಮನುಷ್ಯನ ಬದುಕಿಲ್ಲ. ಗೋವು ಸಾಕಾಣಿಕೆಯಿಂದ ಹಾಲು, ಇತ್ಯಾದಿ ಉತ್ಪನ್ನಗಳಿಂದ ಜೀವನದ ಆಧಾರವಾಗಿಸಿಕೊಂಡಿದ್ದಾರೆ. ನಮ್ಮ ಸರಕಾರ ಗೋಹತ್ಯೆ ಕಾನೂನನ್ನು ಜಾರಿಗೆ ತರುವಾಗ, ವಯಸ್ಸಾದ ಗೋವುಗಳ ಸಾಕಾಣಿಕೆಯಿಂದ ರೈತರಿಗೆ ಹೊರೆಯಾಗುತ್ತದೆ ಎನ್ನುತ್ತಿದ್ದರು. ರೈತ ಗೋವುಗಳನ್ನು ಹೊರೆ ಎಂದು ತಿಳಿದೆ ಇಲ್ಲ. ಗೋ ಸಂಪತ್ತನ್ನು ಉಳಿಸಿಕೊಂಡರೆ ಆಹಾರ, ಆದಾಯ, ಪೌಷ್ಟಿಕತೆಯನ್ನು ನೀಡುತ್ತದೆ. ಇಂತಹ ಗೋವುಗಳು ವಯಸ್ಸಾದ ನಂತರ ವಧೆ ಮಾಡುವ ಕೃತ್ಯಕ್ಕೆ ಕೆಲವರು ಪ್ರೋತ್ಸಾಹ ನೀಡುತ್ತಾರೆ. ದೇಶದ ಸಂಸ್ಕೃತಿ, ಜೀವ ಉಳಿಸುವುದೇ ಹೊರತು ವಧೆ ಮಾಡುವುದಲ್ಲ' ಎಂದು ಹೇಳಿದರು.

ಮನೆಬಾಗಿಲಿಗೆ ತೆರಳಿ ದನಕರುಗಳಿಗೆ ಚಿಕಿತ್ಸೆ: ‘ಗೋ ಸಂಪತ್ತಿನ ರಕ್ಷಣೆಗಾಗಿ 100 ಗೋಶಾಲೆಗಳನ್ನು ಪ್ರಾರಂಭ, ಗೋ ಉತ್ಪನ್ನಗಳ ಮಾರಾಟಕ್ಕಾಗಿ ಗೋ ಮಾತಾ ಸಹಕಾರ ಸಂಘವನ್ನು ಸ್ಥಾಪಿಸಲಾಗುವುದು. ಔಷಧಿ ವ್ಯವಸ್ಥೆ, 400 ಪಶುವೈದ್ಯರ ನೇಮಕಾತಿ, ಡಿಪ್ಲೊಮಾ ಮಾಡಿದ ವಿದ್ಯಾರ್ಥಿಗಳಿಗಾಗಿ 250 ಹುದ್ದೆ ಭರ್ತಿಗೊಳಿಸಿ ಗೋಸೇವೆ, ಪಶುಸೇವೆಗೆ ಅವಕಾಶ ಕಲ್ಪಿಸಲಾಗುವುದು. ರೋಗಗ್ರಸ್ತ ದನಕರುಗಳ ಚಿಕಿತ್ಸೆಗೆ ಅನುಕೂಲವಾಗುವಂತಹ ಸಂಚಾರಿ ಪಶು ಚಿಕಿತ್ಸಾಲಯಗಳನ್ನು ಪ್ರಾರಂಭಿಸಲಾಗಿದ್ದು, ದನಕರುಗಳಿಗೆ ಮನೆಬಾಗಿಲಿಗೆ ತೆರಳಿ ಚಿಕಿತ್ಸೆ ಕೊಡಿಸುವಂತಹ ಮಾನವೀಯ ಕಾರ್ಯಕ್ರಮವನ್ನು ಕರ್ನಾಟಕದಲ್ಲಿ ಪ್ರಾರಂಭಿಸಿರುವುದು ಅಭಿನಂದನೀಯ ಎಂದರು.

ಕ್ಷೀರ ಆರ್ಥಿಕ ಕ್ರಾಂತಿ: ‘ನಂದಿನ ಕ್ಷೀರ ಅಭಿವೃದ್ಧಿ ಸಹಕಾರಿ ಬ್ಯಾಂಕನ್ನು ಹಾಲು ಉತ್ಪಾದಕರಿಗೆ ಅನುಕೂಲ ಕಲ್ಪಿಸಲು ಸ್ಥಾಪಿಸಲಾಗುತ್ತಿದೆ. 3,600 ಕೋಟಿ ರೂ.ಗಳ ಬಂಡವಾಳದಿಂದ ಹಾಲು ಉತ್ಪಾದಿಸುವ ರೈತರಿಗೆ ಸುಲಭ ದರದಲ್ಲಿ ಸಾಲ ನೀಡುವ ಮೂಲಕ ಆರ್ಥಿಕ ಅಭಿವೃದ್ದಿಗೊಳಿಸಲಾಗುವುದು. ರಾಜ್ಯದಲ್ಲಿ ಕ್ಷೀರ ಆರ್ಥಿಕ ಕ್ರಾಂತಿ ಆಗಲಿದೆ.

ಗೋವುಗಳ ವಿವಿಧ ತಳಿಗಳ ಅಭಿವೃದ್ಧಿ, ಹಾಲು ಮೆಗಾ ಡೈರಿ ಸ್ಥಾಪನೆಗೆ ಒತ್ತು ನೀಡಲಾಗಿದೆ. ರಾಜ್ಯದಲ್ಲಿ ಸೆಕೆಂಡರಿ ಕೃಷಿ ನಿರ್ದೇಶನಾಲಯ ಮಾಡಿ ಕೃಷಿ ಉತ್ಪನ್ನಗಳಿಗೆ ಮೌಲ್ಯವರ್ಧನೆ, ಮಾರುಕಟ್ಟೆ ಕಲ್ಪಿಸುವ ಉದ್ದೇಶಿಂದ ಸ್ಥಾಪಿಸಲಾಗಿದೆ. ರೈತರ, ಶ್ರಮಿಕರ ಸ್ವಾವಲಂಬನೆ ಹಾಗೂ ಸ್ವಾಭಿಮಾನದ ಬದುಕು ಕಟ್ಟಿಕೊಟ್ಟಲು ಸರಕಾರ ಬದ್ಧ. ಕೃಷಿ, ತೋಟಗಾರಿಕೆ, ರೇಶ್ಮೆ, ಸಹಕಾರ, ಪಶುಸಂಗೋಪನೆ ಇಲಾಖೆ ಸಂಯೋಜನೆಗೊಳಿಸುವ ಮೂಲಕ ಗಾಂಧಿಜೀ ಗ್ರಾಮಾಭಿವೃದ್ಧಿಯ ಕನಸನ್ನು ಸಾಕಾರಗೊಳಿಸಲಾಗುವುದು. ಈ ಎಲ್ಲ ಕಾರ್ಯಕ್ರಮಗಳಿಗೆ ಪ್ರೇರಣಾಶಕ್ತಿಯಾಗಿರುವ ಗೋಮಾತೆಯ ಆರೋಗ್ಯ ರಕ್ಷಣೆ ನಮ್ಮ ಆದ್ಯತೆಯಾಗಿದೆ ಎಂದು ತಿಳಿಸಿದರು.

ಪಶುಸಂಗೋಪನಾ ಸಚಿವ ಪ್ರಭು ಚೌಹಾಣ್, ಕಂದಾಯ ಸಚಿವ ಆರ್.ಅಶೋಕ್, ಸಹಕಾರ ಸಚಿವ ಎಸ್.ಟಿ. ಸೋಮಶೇಖರ್, ಸಂಸದ ಪಿ.ಟಿ.ಮೋಹನ್, ಪಶುಸಂಗೋಪನಾ ಇಲಾಖೆ ಕಾರ್ಯದರ್ಶಿ ಸಲ್ಮಾ ಫಾಹಿಮ್ ಸೇರಿದಂತೆ ಹಿರಿಯ ಅಧಿಕಾರಿಗಳು ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X