Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು: ಸತ್ಯಾಪನಾ ಶುಲ್ಕದ ಗುರಿ...

ಮಂಗಳೂರು: ಸತ್ಯಾಪನಾ ಶುಲ್ಕದ ಗುರಿ ಮುಟ್ಟಲು ಆಹಾರ ಸಚಿವರ ಸೂಚನೆ

ವಾರ್ತಾಭಾರತಿವಾರ್ತಾಭಾರತಿ7 May 2022 8:52 PM IST
share
ಮಂಗಳೂರು: ಸತ್ಯಾಪನಾ ಶುಲ್ಕದ ಗುರಿ ಮುಟ್ಟಲು ಆಹಾರ ಸಚಿವರ ಸೂಚನೆ

ಮಂಗಳೂರು, ಮೇ.7: ಕಾನೂನು ಮಾಪನ ಶಾಸ್ತ್ರ ಇಲಾಖೆಗೆ ನಿಗದಿ ಪಡಿಸಲಾದ ಸತ್ಯಾಪನಾ ಶುಲ್ಕದ ಗುರಿ ಮುಟ್ಟುವಂತೆ ಹಾಗೂ ತೂಕ ಮತ್ತು ಅಳತೆಯಲ್ಲಿ ವಂಚನೆ ಪ್ರಕರಣಗಳನ್ನು ಪತ್ತೆ ಹಚ್ಚಲು ಇಲಾಖೆ ವತಿಯಿಂದ ಹೆಚ್ಚಿನ ತಪಾಸಣೆ ನಡೆಸುವಂತೆ ಆಹಾರ ಮತ್ತು ನಾಗರಿಕ ಸರಬರಾಜು,  ಗ್ರಾಹಕ ವ್ಯವಹಾರಗಳ ಹಾಗೂ ಅರಣ್ಯ ಇಲಾಖೆಯ ಸಚಿವರಾದ ಉಮೇಶ್ ಕತ್ತಿ ಅವರು ಕಾನೂನು ಮಾಪನ ಶಾಸ್ತ್ರ ಇಲಾಖೆಯ ಸಹಾಯಕ ನಿಯಂತ್ರಕ ಕೆ.ಜಿ. ಕುಲಕರ್ಣಿಗೆ ಸೂಚನೆ ನೀಡಿದರು.

ಅವರು ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರ ಸಂಜೆ ಜಿಲ್ಲೆಯ ಆಹಾರ ಇಲಾಖೆ, ಕಾನೂನು ಮಾಪನ ಶಾಸ್ತ್ರ ಮತ್ತು ಅರಣ್ಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಈ ನಿರ್ದೇಶನ ನೀಡಿದರು.

ಕಾನೂನು ಮಾಪನ ಶಾಸ್ತ್ರ ಇಲಾಖೆ ವತಿಯಿಂದ ಪ್ರತಿ ವರ್ಷ ಸತ್ಯಾಪನ ಶುಲ್ಕ ಸಂಗ್ರಹಕ್ಕೆ ಈಗಾಗಲೇ ಗುರಿ ನಿಗದಿಪಡಿಸಲಾಗಿದೆ. ಅದರಂತೆ ಜಿಲ್ಲೆಯಲ್ಲಿ ಸತ್ಯಾಪನಾ ಶುಲ್ಕದ ಸಂಗ್ರಹಣೆ ಹೆಚ್ಚಾಗಬೇಕು,  ಅದರಂತೆ ಪೆಟ್ರೋಲ್ ಬಂಕ್ ಗಳು,  ಕಿರಾಣಿ ಅಂಗಡಿಗಳು, ನ್ಯಾಯಬೆಲೆ ಅಂಗಡಿಗಳು ಹಾಗೂ ಇತರೆ ಅಂಗಡಿಗಳಲ್ಲಿ ತೂಕ ಮತ್ತು ಅಳತೆ ಪ್ರಮಾಣಗಳಲ್ಲಿ ವಂಚಿಸುವ ಪ್ರಕರಣಗಳನ್ನು ಹೆಚ್ಚು ಹೆಚ್ಚಾಗಿ ಪತ್ತೆ ಮಾಡಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ಮಾತನಾಡಿದ ಕಾನೂನು ಮಾಪನ ಶಾಸ್ತ್ರ ಇಲಾಖೆಯ ಸಹಾಯಕ ನಿಯಂತ್ರಕ ಕುಲಕರ್ಣಿ ಜಿಲ್ಲೆಯಲ್ಲಿ 154 ಪೆಟ್ರೋಲ್ ಬಂಕ್ ಗಳಿದ್ದು ಅವುಗಳನ್ನು ಆಗಾಗ್ಯೆ ಪರಿಶೀಲನೆ ನಡೆಸಲಾಗುತ್ತಿದೆ, ಈಗಾಗಲೇ ವಂಚನೆ ಮಾಡಿದ ನಾಲ್ಕು ಬಂಕ್ ಗಳ ವಿರುದ್ದ ದಂಡ ವಿಧಿಸಲಾಗಿದೆ ಎಂದರು.

ಈ ವೇಳೆ ಮಾತನಾಡಿದ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ., ಅವರು ಕಾನೂನು ಮಾಪನ ಶಾಸ್ತ್ರ ಇಲಾಖೆ ನಿಗದಿಪಡಿಸಲಾದ ಗುರಿ ಮುಟ್ಟಬೇಕು ಹಾಗೂ ಗ್ರಾಮ ಪಂಚಾಯತ್,  ತಾಲೂಕುಗಳಲ್ಲಿ ಈ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಮಾಡುವಂತೆ ತಿಳಿಸಿದರು.

ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ವತಿಯಿಂದ ಜಿಲ್ಲೆಯ 3,668 ಆದ್ಯತಾ ಪಡಿತರ ಚೀಟಿಗಳು ಹಾಗೂ 3,370 ಆದ್ಯತೇತರ‌ ಪಡಿತರ ಚೀಟಿಗಳ ವಿತರಣೆ ಬಾಕಿ ಉಳಿದಿದ್ದು ಅದನ್ನು ಶೀಘ್ರವಾಗಿ ವಿಲೇವಾರಿ ಮಾಡುವಂತೆ ಸೂಚಿಸಿದ ಸಚಿವರು, ಬಿಪಿಎಲ್ ಪಡಿತರ ಕಾರ್ಡು ಹೊಂದಿ, ಅದರಲ್ಲಿ ಪಡಿತರ ಪಡೆದವರನ್ನು ಹಚ್ಚುವಂತೆ ಸಚಿವರು ತಿಳಿಸಿದರು.

3,946 ಅನರ್ಹ ಪಡಿತರ ಚೀಟಿಗಳಿಗೆ ಒಟ್ಟು 15,78,731 ರೂ.ಗಳ ದಂಡ ವಸೂಲಿ ಮಾಡಿರುವುದಾಗಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಜಂಟಿ ನಿರ್ದೇಶಕ ಮಧುಸೂದನ್ ಸಭೆಗೆ ತಿಳಿಸಿದರು. ಮಾನದಂಡಗಳನ್ನು ಉಲ್ಲಂಘಿಸಿದ ಪ್ರಕರಣಗಳಲ್ಲಿ ಈ ಅನರ್ಹ ಪಡಿತರ ಚೀಟಿಗಳನ್ನು ಪತ್ತೆ ಮಾಡಲಾಗಿದೆ ಎಂದು ಅವರು ಮಾಹಿತಿ ನೀಡಿದರು.

ಅರಣ್ಯ ಇಲಾಖೆ ವತಿಯಿಂದ ಬೆಳೆ ಹಾನಿ, ಜಾನುವಾರು ಹಾಗೂ ಮಾನವ ಸಾವು ಪ್ರಕರಣಗಳಲ್ಲಿ ಪರಿಹಾರ ಮೊತ್ತವನ್ನು ಸಂಬಂಧಿಸಿದವರಿಗೆ ಕಾಲಮಿತಿಯೊಳಗೆ ಪಾವತಿಸುವಂತೆ ಸೂಚನೆ ನೀಡಿದ ಸಚಿವರು, ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ನೆಡುತೋಪುಗಳ ನಿರ್ವಹಣೆಗೆ ಕ್ರಮ ವಹಿಸುವಂತೆ ಸೂಚಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿ ಡಾ. ದಿನೇಶ್ ಕುಮಾರ್ ವೈ.ಕೆ, ಬೆಳೆಹಾನಿ ಆಗುವ ಜಾನುವಾರು ಮತ್ತು ಮಾನವ ಹಾನಿ ಪ್ರಕರಣಗಳಲ್ಲಿ ಒಟ್ಟು 48.47 ಲಕ್ಷ ರೂಗಳ ಪರಿಹಾರವನ್ನು ಇಲಾಖೆ ವತಿಯಿಂದ ಪಾವತಿಸಲಾಗಿದೆ, ತಣ್ಣೀರು ಬಾವಿ ಬೀಚ್ ನಲ್ಲಿ ಡಾಲ್ಪೀನ್ ರಕ್ಷಣಾ ಕೇಂದ್ರದ ಸ್ಥಾಪನೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದರು.

ಶಾಸಕರಾದ ಡಿ. ವೇದವ್ಯಾಸ ಕಾಮತ್, ಅಪರ ಜಿಲ್ಲಾಧಿಕಾರಿ ಡಾ. ಕೃಷ್ಣಮೂರ್ತಿ ವೇದಿಕೆಯಲ್ಲಿದ್ದರು.

ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X