Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಬಂಟ್ವಾಳ: ಲಯನ್ಸ್ ಕ್ಲಬ್ ವತಿಯಿಂದ ಈದ್...

ಬಂಟ್ವಾಳ: ಲಯನ್ಸ್ ಕ್ಲಬ್ ವತಿಯಿಂದ ಈದ್ ಸಂಭ್ರಮಾಚರಣೆ

ವಾರ್ತಾಭಾರತಿವಾರ್ತಾಭಾರತಿ7 May 2022 8:58 PM IST
share
ಬಂಟ್ವಾಳ: ಲಯನ್ಸ್ ಕ್ಲಬ್ ವತಿಯಿಂದ ಈದ್ ಸಂಭ್ರಮಾಚರಣೆ

ಬಂಟ್ವಾಳ : ರಮಝಾನ್ ತಿಂಗಳಲ್ಲಿ  ನಿರಾಹಾರಿಗಳಾಗಿ ಸಕಲ ದೇಹೇಚ್ಚೆಗಳನ್ನೂ ನಿಯಂತ್ರಿಸಿ ಮುಂಜಾನೆ ಯಿಂದ ಮುಸ್ಸಂಜೆವರೆಗೂ ಯಾವುದೇ ಲೌಕಿಕ ಉದ್ದೇಶಗಳಿಲ್ಲದೆ ಕೇವಲ ದೇವ ಸಂಪ್ರೀತಿ ಬಯಸಿ ಧಾರ್ಮಿಕ ಆಚರಣೆಯಾಗಿ ಕೈಗೊಳ್ಳುವ ವೃತವೇ ಇಸ್ಲಾಮಿನ ಪವಿತ್ರ ರಮ್ಜಾನ್ ಉಪವಾಸವಾಗಿದೆ ಎಂದು‌ ಬಿ.ಮೂಡ ಸರಕಾರಿ ಪದವಿ ಪೂರ್ವ ಕಾಲೇಜು ಉಪನ್ಯಾಸಕ ಅಬ್ದುಲ್ ರಝಾಕ್ ಅನಂತಾಡಿ ಹೇಳಿದರು.

ಬಂಟ್ವಾಳ ಲಯನ್ಸ್ ಕ್ಲಬ್ ವತಿಯಿಂದ ಬಿ ಸಿ ರೋಡಿನ ಲಯನ್ಸ್ ಸೇವಾ ಮಂದಿರದಲ್ಲಿ ಶುಕ್ರವಾರ  ನಡೆದ ಅಂತರಾಷ್ಟ್ರೀಯ  ಲಯನ್ಸ್ ಜಿಲ್ಲಾ ಈದ್ ಸಂಭ್ರಮ ಕಾರ್ಯಕ್ರಮದಲ್ಲಿ ಮುಖ್ಯ ಭಾಷಣಗಾರರಾಗಿ ಮಾತನಾಡಿದ ಅವರು ಉಪವಾಸ ಎಂಬುದು ಒಂದು ಪ್ರಬಲವಾದ ಅಹಿಂಸಾ ಅಸ್ತ್ರವಾಗಿದ್ದು  ಗಾಂಧೀಜಿಯವರು ಉಪವಾಸ ಸತ್ಯಾಗ್ರಹಗಳ ಮೂಲಕ ಬ್ರಿಟಿಷರ ವಿರುದ್ಧ ನಡೆಸಿದ ಹೋರಾಟ ಸಾಕಷ್ಟು ಪರಿಣಾಮಕಾರಿಯಾಗಿತ್ತು ಎಂದು ಅವರು ಅಭಿಪ್ರಾಯ ಪಟ್ಟರು.

ಲಯನ್ಸ್ ಜಿಲ್ಲಾ ಗವರ್ನರ್ ವಸಂತ ಕುಮಾರ್ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿದರು. ಈದ್ ಸಂಭ್ರಮಾಚರಣೆಯ ಜಿಲ್ಲಾ ಪ್ರಧಾನ ಸಂಚಾಲಕ ಹಾಜಿ ಜಿ ಮುಹಮ್ಮದ್ ಹನೀಫ್ ಅಧ್ಯಕ್ಷತೆ ವಹಿಸಿದ್ದರು. 

ಲಯನ್ಸ್ ಸ್ಥಾಪಕಾಧ್ಯಕ್ಷ ಡಾ. ವಸಂತ ಬಾಳಿಗಾ, ನಿಕಟಪೂರ್ವ ಗವರ್ನರ್ ಡಾ ಗೀತಾ ಪ್ರಕಾಶ್ ಎ, ಜಿಲ್ಲಾ ಗವರ್ನರ್ ಸಂಜೀತ್ ಶೆಟ್ಟಿ, ಉಪ ಗವರ್ನರ್ ಗಳಾದ ಡಾ. ಮೆಲ್ವಿನ್ ಡಿಸೋಜ, ಭಾರತಿ ಬಿ ಎಂ, ಕ್ಯಾಬಿನೆಟ್ ಸೆಕ್ರೆಟರಿ ಶಶಿಧರ ಮಾರ್ಲ, ಮೊದಲಾದವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. 

ಇದೇ ವೇಳೆ ಬೆಳ್ತಂಗಡಿ-ನಡಾ ಸರಕಾರಿ ಪ್ರೌಢಶಾಲಾ ಶಿಕ್ಷಕ  ಯಾಕೂಬ್ ಎಸ್, ಡಾಕ್ಟರೇಟ್ ಪದವೀಧರೆ ಡಾ. ಲಿಫಾಂ ರೋಶನಾರಾ ಹಾಗೂ ವಿಶೇಷ ಚೇತನ ಸಾಧಕ ಅಹ್ಮದ್ ಕಬೀರ್ ಕಂಚಿನೋಡಿ-ಮೂರ್ಜೆ ಅವರನ್ನು ಸನ್ಮಾನಿಸಲಾಯಿತು. ಮುಖ್ಯ ಭಾಷಣಗಾರ ಅಬ್ದುಲ್ ರಝಾಕ್ ಅನಂತಾಡಿ, ಲಯನ್ಸ್ ಜಿಲ್ಲಾ ಗವರ್ನರ್ ವಸಂತ್ ಕುಮಾರ್ ಶೆಟ್ಟಿ ಹಾಗೂ ದಫ್ ಸಂಯೋಜಕ ಲತೀಫ್ ನೇರಳಕಟ್ಟೆ  ಅವರನ್ನು ಗೌರವಿಸಲಾಯಿತು.

ಅಬೂಬಕ್ಕರ್ ಕುಕ್ಕಾಡಿ,  ನೋಟರಿ ಅಬೂಬಕ್ಕರ್ ವಿಟ್ಲ, ಮುಹಮ್ಮದ್ ಖಲಂದರ್ ಕೆ,  ಮೊಯಿದಿನ್ ಕುಂಞಿ  ಸನ್ಮಾನಿತರನ್ನು  ಪರಿಚಯಿಸಿದರು.  ಸನ್ಮಾನಿತರ ಪರವಾಗಿ ಯಾಕುಬ್ ನಡಾ ಅನಿಸಿಕೆ ವ್ಯಕ್ತಪಡಿಸಿದರು. ಕನ್ನಂಗಾರ್ ಇಶಾ-ಅತುಸ್ಸುನ್ನ ದಫ್ ಸಮಿತಿ ಸದಸ್ಯರು ದಫ್ ಪ್ರದರ್ಶನ ಪ್ರಸ್ತುತ ಪಡಿಸಿದರು.

ಲಯನ್ ಗಳಾದ ದಾಮೋದರ ಬಿ.ಎಂ, ಟಿ. ಮುಹಮ್ಮದ್ ಅಲಿ, ಅಬ್ದುಲ್ ಖಾದರ್, ಶ್ರೀನಿವಾಸ್ ಪೂಜಾರಿ ಮೆಲ್ಕಾರ್, ಜಯರಾಂ ದೇರಪ್ಪಜ್ಜನಮನೆ, ಕವನ್ ಕುಬೆವೂರು, ಲೋಕೇಶ್ ಉಳ್ಳಾಲ, ಹರೀಶ ಆಳ್ವ ಮೊದಲಾದವರು ಉಪಸ್ಥಿತರಿದ್ದರು.

ಹಾಜಿ ಜಿ. ಮುಹಮ್ಮದ್ ಹನೀಫ್ ಸ್ವಾಗತಿಸಿ, ಅಬ್ದುಲ್ ಖಾದರ್ ಸಕಲೇಶಪುರ ವಂದಿಸಿದರು. ಬಿ.ಎ. ಮುಹಮ್ಮದ್ ಬಂಟ್ವಾಳ ಕಿರಾಅತ್ ಪಠಿಸಿದರು. ಲಯನ್ ಡಾ ಧೀರಜ್ ಹೆಬ್ರಿ ಧ್ವಜವಂದನೆಗೈದರು. ಮೈಮೂನಾ ಮೊಯಿದಿನ್ ಹಾಗೂ ರಾಧಾಕೃಷ್ಣ ಬಂಟ್ವಾಳ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X