Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಪ್ರಣಯ್ ಪಾಟೀಲ್ ರ ಕೃತಿ ಮಾನವ ಸಂಬಂಧಗಳ...

ಪ್ರಣಯ್ ಪಾಟೀಲ್ ರ ಕೃತಿ ಮಾನವ ಸಂಬಂಧಗಳ ಆವಿಷ್ಕಾರ: ರಾಜದೀಪ್ ಸರ್ ದೇಸಾಯಿ

ವಾರ್ತಾಭಾರತಿವಾರ್ತಾಭಾರತಿ8 May 2022 7:32 PM IST
share
ಪ್ರಣಯ್ ಪಾಟೀಲ್ ರ ಕೃತಿ ಮಾನವ ಸಂಬಂಧಗಳ ಆವಿಷ್ಕಾರ: ರಾಜದೀಪ್ ಸರ್ ದೇಸಾಯಿ

ಬೆಂಗಳೂರು, ಮೇ 8: ‘ವೈಯಕ್ತಿಕ ಪ್ರಯಾಣದಲ್ಲಿನ ತಮ್ಮ ಅನುಭವಗಳನ್ನು ಉತ್ತಮ ರೀತಿಯಲ್ಲಿ ಪುಸ್ತಕವು ಹೇಗೆ ಜೀವಂತವಾಗಿಸುತ್ತದೆ ಎಂಬುದನ್ನು 'ಬರ್ಗಂಡಿ ವಿಂಟರ್ಸ್ ಇನ್ ಯುರೋಪ್' ಕೃತಿಯ ಮೂಲಕ ಪ್ರಣಯ್ ಪಾಟೀಲ್ ಅವರ ಮಾನವ ಸಂಬಂಧಗಳ ಆವಿಷ್ಕಾರವು ಹೊರಗೆಡವುತ್ತದೆ' ಎಂದು ಪತ್ರಕರ್ತ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ರಾಜದೀಪ್ ಸರ್‍ದೇಸಾಯಿ ಅಭಿಪ್ರಾಯಪಟ್ಟಿದ್ದಾರೆ.

ರವಿವಾರ ನಗರದಲ್ಲಿ ಸಾಮಾಜಿಕ ಕಾರ್ಯಕರ್ತ, ಲೇಖಕ ಪ್ರಣಯ್ ಪಾಟೀಲ್ ಅವರ ಪ್ರಥಮ ಕೃತಿ ‘ಬರ್ಗಂಡಿ ವಿಂಟರ್ಸ್ ಇನ್ ಯುರೋಪ್’ ಕೃತಿ ಲೋಕಾರ್ಪಣೆ ಮಾಡಿ ಮಾತನಾಡಿದ ಅವರು, ಯುವ ಲೇಖಕ ಪ್ರಣಯ್ ಪಾಟೀಲರ ಕೃತಿಯು ರಾಕ್‍ಸ್ಟಾರ್ ಒಬ್ಬರ ಜೀವನಗಾಥೆ ಹೇಳುತ್ತದೆ. ನೈಜ ನಿರೂಪಣೆಯಿಂದಾಗಿ ಓದುಗರನ್ನು ಆವರಿಸಿಕೊಳ್ಳುವ ಪುಸ್ತಕ ಇದಾಗಿದೆ ಎಂದು ಬಣ್ಣಿಸಿದರು.

ಕಾದಂಬರಿಯ ನಾಯಕ ಜೇಸ್ ಟನ್ನರ್‍ನ ಮಾದಕ ವಸ್ತು ಸೇವನೆ ಆತನ ಜೀವ ಹಿಂಡುವ ಪರಿ, ನಾಯಕಿ ಯಾಸ್ಮಿನ್‍ಳ ಪ್ರವೇಶದಿಂದ ಆತನ ಬದುಕಿನಲ್ಲಾಗುವ ಬದಲಾವಣೆಯನ್ನು ಓದುಗರ ಮನಮುಟ್ಟುವಂತೆ ಚಿತ್ರಿಸಿದ್ದಾರೆ. ಪ್ರೀತಿ ಪ್ರಣಯ, ಭೂತದ ಕತೆಗಳು, ವಾಮಾಚಾರ, ಪುನರ್ಜನ್ಮವೂ ಕೃತಿಯಲ್ಲಿ ಕಾಣಿಸುತ್ತದೆ ಎಂದು ಅವರು ತಿಳಿಸಿದರು.

ಅಂಕಣಗಾರ್ತಿ ಪೂಜಾ ಬೇಡಿ, ‘ಮಾನಸಿಕ ಆರೋಗ್ಯದ ಕುರಿತು ಜಾಗೃತಿ ಮೂಡಿಸುವ ಪ್ರಯತ್ನವನ್ನು ಈ ಕೃತಿ ಮಾಡುತ್ತದೆ. ಮನುಷ್ಯನ ಜೀವ ಬಹಳ ಅಮೂಲ್ಯವಾದುದು. ಅದನ್ನು ಜತನದಿಂದ ಕಾಪಾಡಿಕೊಳ್ಳುವುದು ಮುಖ್ಯ. ಜೀವನದಲ್ಲಿ ಏಳು ಬೀಳು ಸಾಮಾನ್ಯ. ಅವುಗಳಿಗೆ ನಾವು ಹೇಗೆ ಪ್ರತಿಕ್ರಿಯಿಸಬೇಕು ಎಂಬುದನ್ನೂ ಕೃತಿ  ಒತ್ತಿ ಹೇಳುತ್ತದೆ’ ಎಂದು ಹೇಳಿದರು.

ಲೇಖಕ ಪ್ರಣಯ್ ಪಾಟೀಲ್ ಮಾತನಾಡಿ, ‘ನನಗೆ ಅಸಹಾಯಕತೆಯ ಅನುಭವ ಕಾಡುತ್ತಿದ್ದರಿಂದ ಲಾಕ್‍ಡೌನ್ ಸಮಯದಲ್ಲಿ ಪುಸ್ತಕ ಬರೆಯಲು ಪ್ರಾರಂಭಿಸಿದೆ. ಕೋವಿಡ್‍ಗೆ ಬಲಿಯಾಗದ ಅನೇಕರು ದಿನಕ್ಕೆ ಊಟ ಸಂಪಾದಿಸಲು ಹೆಣಗಾಡುತ್ತಿದ್ದರು. ನಾನು ಆಹಾರ, ಔಷಧಗಳನ್ನು ಕೊಡುಗೆ ನೀಡುವ ಮೂಲಕ ಸಹಾಯ ಮಾಡಲು ಪ್ರಯತ್ನಿಸಿದೆ. ಆದರೆ ಅದು ಸಾಕಾಗುವುದಿಲ್ಲ ಎಂದು ನಾನು ಭಾವಿಸಿದೆ. ಅದನ್ನು ಕೃತಿಯಲ್ಲಿ ಬರೆದಿದ್ದೇನೆ' ಎಂದು ವಿವರಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X