Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕನ್ನಡ ಶಿಶು ಗೀತೆಗಳಿಗೆ ಮರು ಜೀವ...

ಕನ್ನಡ ಶಿಶು ಗೀತೆಗಳಿಗೆ ಮರು ಜೀವ ತುಂಬಬೇಕು: ಆರ್.ಜಿ.ಹಳ್ಳಿ ನಾಗರಾಜ

ವಾರ್ತಾಭಾರತಿವಾರ್ತಾಭಾರತಿ8 May 2022 9:13 PM IST
share

ಬೆಂಗಳೂರು, ಮೇ 8: ಕನ್ನಡ ಕಾವ್ಯಲೋಕವನ್ನು ಶ್ರೀಮಂತಗೊಳಿಸಿದ ಶ್ರೇಷ್ಠ ಕವಿಗಳು ಬರೆದ ಶಿಶುಗೀತೆಗಳು ಇವತ್ತು ಮೌಲ್ಯಗಳನ್ನು ಉಳಿಸಿಕೊಂಡದ್ದು, ಅವುಗಳಿಗೆ ನವಪೀಳಿಗೆಯ ಕವಿಗಳು ಮರುಜೀವ ತುಂಬಬೇಕು ಎಂದು ಕವಿ ಆರ್.ಜಿ. ಹಳ್ಳಿ ನಾಗರಾಜ ಅಭಿಪ್ರಾಯಪಟ್ಟರು. 

ಮಾಗಡಿ ರಸ್ತೆಯ ನ್ಯೂ ಹಾರ್ಡ್ ವಿಕ್ ಇಂಡಿಯನ್ ಸ್ಕೂಲ್ ಆವರಣದಲ್ಲಿ ‘ರಂಗೋತ್ರಿ' ಮಕ್ಕಳ ಮನೋವಿಕಾಸ ಸಂಸ್ಥೆ ಏರ್ಪಡಿಸಿದ್ದ ಬೇಸಗೆ ಶಿಬಿರದ ಮಕ್ಕಳ ಕವಿಗೋಷ್ಠಿ ಅಧ್ಯಕ್ಷತೆ ವಹಿಸಿ ಮಾತಾಡಿದ ಅವರು, ‘ಇವತ್ತು ಕನ್ನಡ ಶಿಶುಗೀತೆ, ಮಕ್ಕಳ ಕತೆಗಳು ಅವಜ್ಞೆಗೆ ಗುರಿಯಾಗಿವೆ. ಆದರೆ, ಕನ್ನಡದ ಮೊದಲ ರಾಷ್ಟ್ರಕವಿ ಗೋವಿಂದಪೈ, ನಂತರದ ರಾಷ್ಟ್ರಕವಿ ಕುವೆಂಪು, ಕವಿಗಳಾದ ಬೇಂದ್ರೆ, ಜಿ.ಪಿ.ರಾಜರತ್ನಂ, ಕಾವ್ಯಾನಂದ, ನವಗಿರಿನಂದ, ಹೊಯಿಸಳ ಮೊದಲಾದ ಹೆಸರಾಂತ ಕವಿಗಳು ಶಿಶುಗೀತೆಯ ರಚನೆ ಮಾಡುವ ಮೂಲಕ ಕನ್ನಡ ಕಾವ್ಯಲೋಕವನ್ನು ಶ್ರೀಮಂತಗೊಳಿಸಿದ್ದಾರೆ. ಇವರುಗಳ ಹಾದಿಯಲ್ಲಿ ಯುವಕವಿಗಳು ಹೆಜ್ಜೆಹಾಕಿ ಶಿಶುಗೀತೆ ರಚನೆಕಡೆ ಗಮನಹರಿಸಬೇಕು’ ಎಂದರು.

‘ಇಂಗ್ಲಿಷ್ ಶಿಕ್ಷಣದ ಹೆಚ್ಚಳ, ರೈಮ್ಸ್ ಭರಾಟೆಯಲ್ಲಿ  ಕನ್ನಡ ಶಿಶುಗೀತೆಗೆ ಹಿನ್ನೆಡೆಯಾಗಿದೆ. ಜೊತೆಗೆ ಮಕ್ಕಳ ಮನೋವಿಕಾಸಕ್ಕಾಗಿ ರಂಜನೀಯ ಕತೆಗಳು ಸೃಷ್ಟಿಯಾಗಬೇಕು. ಅವರಲ್ಲಿ ಮಾನಸಿಕ, ಬೌದ್ಧಿಕ ಬೆಳವಣಿಗೆ ಆಗಬೇಕು. ಮಕ್ಕಳ ವಿಕಾಸಕ್ಕಾಗಿಯೇ ಇರುವ ಅಕಾಡೆಮಿ, ಸಂಘ - ಸಂಸ್ಥೆಗಳೂ ಕನ್ನಡದಲ್ಲಿನ ಶಿಶುಗೀತೆಗಳ ಬೆಳವಣಿಗೆಗೆ ಶ್ರಮಿಸಬೇಕು’ ಎಂದು ಅವರು ಕರೆ ನೀಡಿದರು. 

ಬೆಂಗಳೂರು ವಿವಿ ಪ್ರಸಾರಾಂಗದ ನಿರ್ದೇಶಕ ಡಾ.ಸಿ.ಬಿ.ಹೊನ್ನುಸಿದ್ಧಾರ್ಥ ಅವರು ಮಾತನಾಡಿ, ‘ಮಕ್ಕಳ ಮನೋವಿಕಾಸಕ್ಕೆ ಸಾಹಿತ್ಯ ಸಂಸ್ಕೃತಿಯ ಅರಿವು ಮುಖ್ಯವಾಗಿದೆ. ಅವರಿಗೆ ಎಳೆಯ ವಯಸ್ಸಿನಲ್ಲೇ ವೈಚಾರಿಕ ಅರಿವು ಮೂಡಿಸುವುದು ಮುಖ್ಯ. ರಂಗೋತ್ರಿಯಂಥ ಸಂಸ್ಥೆ ಬೇಸಿಗೆ ಶಿಬಿರದ ಮೂಲಕ ಅರ್ಥಪೂರ್ಣ ಕೆಲಸಗಳನ್ನು ಮಾಡುತ್ತಿದೆ’ ಎಂದರು. 

ಗೋಷ್ಠಿಯಲ್ಲಿ ನಳಂದ ಶಿಕ್ಷಣ ಸಂಸ್ಥೆಯ ಮುಖ್ಯಸ್ಥ ಸಿ.ಎಚ್. ನಾಯಕ್, ರಂಗೋತ್ರಿಯ ಸಂಸ್ಥಾಪಕ ನಿರ್ದೇಶಕ ಕೆ.ಎಚ್. ಕುಮಾರ, ಕವಿ ಗುಂಡಿಗೆರೆ ವಿಶ್ವನಾಥ, ನ್ಯೂ ಹಾರ್ಡ್ ವಿಕ್ ಇಂಡಿಯನ್ ಶಾಲೆಯ ಪ್ರಾಂಶುಪಾಲ ಪ್ರಕಾಶ್, ಕಾರ್ಯದರ್ಶಿ ಕುಮಾರಿ ಕೆ.ಕೆ. ಪೂರ್ಣ ಅವರುಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X