Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಸಮಕಾಲೀನಕತೆಗೆ ಸ್ಪಂದಿಸುವುದು ಸಾಹಿತಿಗಳ...

ಸಮಕಾಲೀನಕತೆಗೆ ಸ್ಪಂದಿಸುವುದು ಸಾಹಿತಿಗಳ ಹೊಣೆ: ಚ.ಹ.ರಘುನಾಥ

ವಾರ್ತಾಭಾರತಿವಾರ್ತಾಭಾರತಿ8 May 2022 9:48 PM IST
share

ಬೆಂಗಳೂರು, ಮೇ 8: ಸಮಕಾಲೀನಕತೆಗೆ ಸ್ಪಂದಿಸುವುದು ಸಾಹಿತಿಗಳ ಸಾಮಾಜಿಕ ಹೊಣೆಗಾರಿಕೆ ಆಗಿದೆ. ಸಮಕಾಲೀನತೆಯನ್ನು ಕಾದಂಬರಿ ಅಥವಾ ಕವಿತೆಗಳಲ್ಲಿ ಕಟ್ಟಿಕೊಡುವುದಕ್ಕಿಂತ ಕಥೆಗಳಲ್ಲಿ ಕಟ್ಟಿಕೊಡುವುದು ಸುಲಭ ಎಂದು ಲೇಖಕ ಚ.ಹ.ರಘುನಾಥ ಅಭಿಪ್ರಾಯಪಟ್ಟರು.

ರವಿವಾರ ವಂಶಿ ಪಬ್ಲಿಕೇಷನ್ಸ್ ವತಿಯಿಂದ ನಗರದ ಜೆ.ಸಿ.ರಸ್ತೆಯ ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಿದ್ದ ಪುಸ್ತಕ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಕಾದಂಬರಿಯಲ್ಲಿ ಬಹುತೇಕ ವೇಳೆ ವಸ್ತುವು ವಾಚ್ಯವಾಗುವ ಹಾಗೂ ಕಾವ್ಯದಲ್ಲಿ ಸೂಚ್ಯವಾಗುವ ಸಾಧ್ಯತೆ ಇದೆ. ಆದರೆ, ಕಥೆಯು ಸಮಕಾಲೀಕತೆಯನ್ನು ಸೂಕ್ತ ರೀತಿಯಲ್ಲಿ ವ್ಯಾಖ್ಯಾನಿಸಲು ಸಾಧ್ಯವಾಗುತ್ತದೆ’ ಎಂದು ಅಭಿಪ್ರಾಯಪಟ್ಟರು.

‘ತೆಲುಗು ಭಾಷೆಯಿಂದ ಕನ್ನಡಕ್ಕೆ ಅನುವಾದಿತ ‘ಜಾಲ’ ಹಾಗೂ ‘ಮೌನಸಾಕ್ಷಿ’ ಕಥಾ ಸಂಕಲನದ ಬಹುತೇಕ ಕಥೆಗಳು ರೂಪಕಗಳ ಅನುಭವವನ್ನು ಸೃಷ್ಟಿಸುವಷ್ಟು ಸಶಕ್ತವಾಗಿದೆ. ಈ ಕಥೆಗಳ ಅನುವಾದವೂ ಓದುಗ ಸ್ನೇಹಿಯಾಗಿವೆ’ ಎಂದು ಅಭಿಪ್ರಾಯಪಟ್ಟರು.

ಲೇಖಕ ಪೆದ್ದಂಟಿ ಅಶೋಕ್ ಕುಮಾರ್ ಮಾತನಾಡಿ, ‘ಕನ್ನಡ-ತೆಲುಗು ಭಾಷೆಗಳು ಅನ್ಯೋನ್ಯತೆಯನ್ನು ಹೊಂದಿವೆ. ಎರಡೂ ಭಾಷೆಗಳಲ್ಲಿಯ ಉತ್ತಮ ಸಾಹಿತ್ಯಗಳನ್ನು ಪರಸ್ಪರ ಅನುವಾದಕ್ಕೆ ಒಳಪಡಿಸಬೇಕು. ಕಥೆಗಾರನಿಗೆ ಒಂದು ಹೃದಯವಿದ್ದರೆ, ಅನುವಾದಕರಿಗೆ ಎರಡು ಹೃದಯಗಳಿರುತ್ತವೆ. ನೀರು, ಗಾಳಿ ವ್ಯಾಪಾರೀಕರಣಗೊಳ್ಳುತ್ತಿರುವ ಸಂದರ್ಭದಲ್ಲಿ ಜನರು ಚಳವಳಿಯ ರೂಪದಲ್ಲಿ ಎಚ್ಚೆತ್ತುಕೊಳ್ಳುವ ಅನಿವಾರ್ಯತೆ ಇರುವುದನ್ನು ‘ಜಾಲ’ ಕಥೆಗಳ ಮೂಲ ಅಂಶಗಳಾಗಿವೆ’ ಎಂದು ಅವರು ಹೇಳಿದರು.

ಲೇಖಕಿ ಆರ್. ಪೂರ್ಣಿಮಾ ಮಾತನಾಡಿ, ‘ಸಮಾಜಕ್ಕೆ ಉಪಯೋಗವಾಗಬಲ್ಲ, ಜನಹಿತಾಸಕ್ತಿ ಕಾಪಾಡಬಲ್ಲ ಸಾಹಿತ್ಯ ಯಾವುದೇ ಭಾಷೆಯಲ್ಲಿರಲಿ ಅದನ್ನು ತಮ್ಮತಮ್ಮ ಭಾಷೆಗಳಲ್ಲಿ ಅನುವಾದಿಸುವ ಹಂಬಲ ಅನುವಾದಕರಿಗಿರಬೇಕು’ ಎಂದು ಸಲಹೆ ನೀಡಿದರು. ಲೇಖಕಿ ಎಂ.ಜಿ.ಶುಭಮಂಗಳ ಅವರ ‘ಜಾಲ’ ಹಾಗೂ ‘ಮೌನಸಾಕ್ಷಿ’ ಎಂಬ ಅನುವಾದಿತ ಕೃತಿಗಳನ್ನು ಲೋಕಾರ್ಪಣೆ ಮಾಡಲಾಯಿತು. ಸೈಯ್ಯದ್ ಪಾಷಾ, ವಾಸುದೇವ ನಾಡಿಗ್ ಉಪಸ್ಥಿತರಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X