Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ದೇಶದ ಜನರೇ ಕಾಂಗ್ರೆಸ್ ಪಕ್ಷವನ್ನು...

ದೇಶದ ಜನರೇ ಕಾಂಗ್ರೆಸ್ ಪಕ್ಷವನ್ನು ಟಾರ್ಗೆಟ್ ಮಾಡಿರುವಾಗ ನಾವು ಟಾರ್ಗೆಟ್ ಮಾಡುವ ಆವಶ್ಯಕತೆ ಇಲ್ಲ: ಸಿ.ಟಿ.ರವಿ

ವಾರ್ತಾಭಾರತಿವಾರ್ತಾಭಾರತಿ11 May 2022 5:30 PM IST
share
ದೇಶದ ಜನರೇ ಕಾಂಗ್ರೆಸ್ ಪಕ್ಷವನ್ನು ಟಾರ್ಗೆಟ್ ಮಾಡಿರುವಾಗ ನಾವು ಟಾರ್ಗೆಟ್ ಮಾಡುವ ಆವಶ್ಯಕತೆ ಇಲ್ಲ: ಸಿ.ಟಿ.ರವಿ

ಚಿಕ್ಕಮಗಳೂರು, ಮೇ 11: ದೇಶದ ಜನರು ಕಾಂಗ್ರೆಸ್ ಪಕ್ಷವನ್ನು ಟಾರ್ಗೆಟ್ ಮಾಡಿದ್ದಾರೆ. ಡಿ.ಕೆ.ಶಿವಕುಮಾರ್ ಅವರನ್ನು ನಾವು ಟಾರ್ಗೆಟ್ ಮಾಡುವ ಆವಶ್ಯಕತೆ ಇಲ್ಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಶಾಸಕ ಸಿ.ಟಿ.ರವಿ ಡಿ.ಕೆ.ಶಿವಕುಮಾರ್ ಗೆ ತಿರುಗೇಟು ನೀಡಿದ್ದಾರೆ. 

ಬುಧವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿ.ಕೆ.ಶಿವಕುಮಾರ್ ಅವರು ತಮ್ಮನ್ನು ವೈಭವೀಕರಿಸಿಕೊಳ್ಳಬಹುದು, ಅವರ ವೈಯಕ್ತಿಕ ಸಾಮರ್ಥ್ಯದ ಬಗ್ಗೆ ಪ್ರಶ್ನೆ ಮಾಡಲ್ಲ. ಅವರ ರಾಜಕೀಯ ಸಾಮರ್ಥ್ಯದ ಬಗ್ಗೆ ಸಾಬೀತು ಮಾಡಿರುವುದು ಕನಕಪುರದಲ್ಲಷ್ಟೇ ಎಂದ ಅವರು, ಉಪ್ಪು ತಿಂದವರು ನೀರು ಕುಡಿಯುತ್ತಾರೆ. ತಪ್ಪು ಮಾಡಿದವರು ಶಿಕ್ಷೆ ಅನುಭವಿಸುತ್ತಾರೆ. ಏನು ತಪ್ಪು ಮಾಡಿಲ್ಲ ಎಂದರೇ ಆತಂಕ ಪಡುವ ಆವಶ್ಯಕತೆ ಇಲ್ಲ. ರಾಜಕೀಯದಲ್ಲಿ ಇದ್ದೇನೆಂದು ಶೆಲ್ಟರ್ ತೆಗೆದುಕೊಳ್ಳಲು ಆಗಲ್ಲ. ತಪ್ಪು ಮಾಡದೇ ಜೈಲಿಗೆ ಹೋಗುವುದು ಶಕ್ತಿಯಾಗುತ್ತದೆ. ತಪ್ಪು ಮಾಡಿ ಜೈಲಿಗೆ ಹೋಗುವುದರಿಂದ ಅವರ ರಾಜಕೀಯ ಅಂತ್ಯ ಆಗುತ್ತೆ ಎಂದರು.

ಉತ್ತರ ಪ್ರದೇಶದಲ್ಲಿ  ಮೈ ಲಡಕೀ ಹೂಂ, ಲಡ್ ಸಕ್ತಾ ಹೂ ಎಂದು ಪ್ರಿಯಾಂಕಾ ಗಾಂಧಿ ನೇತೃತ್ವದಲ್ಲಿ ಚುನಾವಣೆ ಮಾಡಿದರು. ಏನಾಯ್ತು ಎಂದು ಪ್ರಶ್ನಿಸಿದ ಅವರು, 387 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಡೆಪಾಸಿಟ್ ಕಳೆದುಕೊಂಡಿದೆ, ಅವರೇ ಅಧಿಕಾರದಲ್ಲಿದ್ದ ಪಂಜಾಬ್‍ನಲ್ಲಿ ಹೀನಾಯವಾಗಿ ಸೋತರು ಎಂದ ಅವರು, ದೇಶದ ಜನರು ಕಾಂಗ್ರೆಸ್ ತಿರಸ್ಕರಿಸಿರುವಾಗ ಡಿ.ಕೆ.ಶಿವಕುಮಾರ್ ಅವರನ್ನು ನಾವು ಟಾರ್ಗೆಟ್ ಮಾಡಿ ಏನಾಗಬೇಕು ಎಂದರು.

ಸಿಎಂ ಇಬ್ರಾಹಿಂ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಇಬ್ರಾಹಿಂ ಅವರನ್ನು ರಾಜಕೀಯ ವಿಧೂಷಕ ಎನ್ನುತ್ತಾರೆ. ನಾನು ಹಾಗೆ ಹೇಳಲ್ಲ, ಅವರನ್ನು ರಾಜಕೀಯವಾಗಿ ಯಾರೂ ಅವರನ್ನು ಗಂಭೀರವಾಗಿ ತೆಗೆದುಕೊಂಡಿಲ್ಲ ಎಂದು ಟಾಂಗ್ ನೀಡಿದರು.

ಸಿಎಂ ಇಬ್ರಾಹಿಂ ಎಲ್ಲ ಪಾತ್ರಕ್ಕೂ ಸೂಕ್ತವಾಗುವ ವ್ಯಕ್ತಿ. ಜನತಾ ಪಕ್ಷದಲ್ಲಿದ್ದಾಗ ಇಂದಿರಾಗಾಂಧಿ ಬಗ್ಗೆ ನೀಡಿದ್ದ ಹೇಳಿಕೆ ನೆನಪು ಮಾಡಲು ನನ್ನಿಂದ ಆಗಲ್ಲ. ಕಾಂಗ್ರೆಸ್‍ಗೆ ಬಂದ ಮೇಲೆ ದೇವೇಗೌಡರ ಬಗ್ಗೆ ಮಾತನಾಡಿದ್ದ ಹಳೇ ಕ್ಯಾಸೆಟ್ ಹಾಕಿ ನೋಡಲಿ, ಆಗ ಇಬ್ರಾಹಿಂ ಅವರಿಗೆ ದೇವೇಗೌಡರ ಮೇಲಿರುವ ಪ್ರಾಮಾಣಿಕ ಭಾವನೆ ಏನೆಂದು ತಿಳಿಯುತ್ತದೆ ಎಂದರು.

ಅಟಲ್ ಬಿಹಾರಿ ವಾಜಿಪೇಯಿ, ಪ್ರಧಾನ ಮಂತ್ರಿ ನರೇಂದ್ರ ಮೋದಿ, ಅಡ್ವಾಣಿ, ಅಮಿತ್ ಶಾ ಅವರು ನಮ್ಮ ನಾಯಕರು. ನಾಯಕರನ್ನು ನಾವು ನಾಯಕರ ಸ್ಥಾನದಲ್ಲೇ ನೋಡುತ್ತೇವೆ. ದೇವರ ಸ್ಥಾನದಲ್ಲಿ ಅಲ್ಲ. ನಮಗೆ ಭಾರತ ಮಾತೆಯೇ ದೇವರು, ಎಲ್ಲಾ ದೇವರಿಗಿಂತ ಭಾರತ ಮಾತೆಯೇ ದೊಡ್ಡ ದೇವರು ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X