Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ದಲಿತ ಪತ್ರಕರ್ತರ ಅಭಿವ್ಯಕ್ತಿ...

ದಲಿತ ಪತ್ರಕರ್ತರ ಅಭಿವ್ಯಕ್ತಿ ಹಕ್ಕುಚ್ಯುತಿ ಸಹಿಸಲ್ಲ: ಡಿ.ಎಸ್.ವೀರಯ್ಯ

ವಾರ್ತಾಭಾರತಿವಾರ್ತಾಭಾರತಿ13 May 2022 9:35 PM IST
share
ದಲಿತ ಪತ್ರಕರ್ತರ ಅಭಿವ್ಯಕ್ತಿ ಹಕ್ಕುಚ್ಯುತಿ ಸಹಿಸಲ್ಲ: ಡಿ.ಎಸ್.ವೀರಯ್ಯ

ಬೆಂಗಳೂರು, ಮೇ 13: ಪರಿಶಿಷ್ಟ ಸಮುದಾಯವನ್ನು ತುಳಿದು ಹಾಕುವ ಹುನ್ನಾರ ವ್ಯವಸ್ಥಿತವಾಗಿ ನಡೆಯುತ್ತಿದೆ ಹಾಗೂ ಇತ್ತೀಚೆಗೆ ದಲಿತ ಪತ್ರಕರ್ತರ ಅಭಿವ್ಯಕ್ತಿ ಹಕ್ಕುಚ್ಯುತಿ ಮಾಡಲಾಗುತ್ತಿದೆ. ಇದನ್ನು ಯಾವತ್ತೂ ಕೂಡ ಸಹಿಸಲು ಸಾಧ್ಯವಿಲ್ಲ ಎಂದು ಹಿರಿಯ ಪತ್ರಕರ್ತ, ವಿಧಾನ ಪರಿಷತ್ ಮಾಜಿ ಸದಸ್ಯ ಡಿ.ಎಸ್. ವೀರಯ್ಯ ಹೇಳಿದ್ದಾರೆ.

ಶುಕ್ರವಾರ ಗಾಂಧಿ ಭವನದಲ್ಲಿ ಕರ್ನಾಟಕ ರಾಜ್ಯ ಎಸ್ಸಿ ಎಸ್ಟಿ ಸಂಪಾದಕರ ಸಂಘ ಆಯೋಜಿಸಿದ್ದ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ, ಬಿ.ರಾಚಯ್ಯ ದತ್ತಿ ನಿಧಿ ಪ್ರಶಸ್ತಿ ಹಾಗೂ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ಪರಿಶಿಷ್ಟರ ಅಭಿವೃದ್ಧಿಗಾಗಿಯೇ ಎಸ್‍ಸಿಪಿ, ಟಿಎಸ್ಪಿ ಯೋಜನೆಯಡಿ ಒಟ್ಟು 306 ಯೋಜನೆಗಳಿವೆ. ಈ ಯೋಜನೆಯಡಿ ಪ್ರತಿ ಪರಿಶಿಷ್ಟರ ಅಭಿವೃದ್ಧಿಗೆ ಸಾಲುವಷ್ಟು ಹಣ ಮೀಸಲಿಡಲಾಗಿದೆ. ಆದರೆ, ಮೀಸಲು ಅನುದಾನ ಮಾತ್ರ ವ್ಯಯವಾಗಿಲ್ಲ. ಪರಿಶಿಷ್ಟರ ಏಳ್ಗೆಗಾಗಿಯೇ ಹಣ ಇದ್ದರೂ, ಯೋಜನೆಗಳೇಕೆ ಅನುಷ್ಠಾನಗೊಳ್ಳುತ್ತಿಲ್ಲ ಎಂದು ಪ್ರಶ್ನಿಸಿದರು.

ಈಗಂತೂ ಪರಿಶಿಷ್ಟ ಪತ್ರಕರ್ತರ ಅಭಿವ್ಯಕ್ತಿ ಸ್ವಾತಂತ್ರ್ಯ ಹತ್ತಿಕ್ಕುವ ಹುನ್ನಾರ ಕೂಡ ನಡೆಯುತ್ತಿದೆ. ದಲಿತ ಪತ್ರಕರ್ತರು ಮುನ್ನಡೆಸುತ್ತಿರುವ ಪತ್ರಿಕೆಗಳು ಆರ್ಥಿಕವಾಗಿ ಜರ್ಜರಿತವಾಗಿ ಮುಚ್ಚಿಹೋಗುತ್ತಿವೆ. ಈ ನಿಟ್ಟಿನಲ್ಲೂ ಈಗಿನ ಸರಕಾರದ ಕಠೋರ ದೋರಣೆಯಿಂದಾಗಿ ಪರಿಶಿಷ್ಟ ಪತ್ರಿಕೆಗಳು ಅವಗಣನೆಗೆ ಗುರಿಯಾಗಿರುವುದು ದುರಂತ ಎಂದರು.

ದಲಿತ ಪತ್ರಕರ್ತರು ಕೂಡ ಜ್ಞಾನ ವಿಕಸನಕ್ಕೆ ಒಡ್ಡಿಕೊಳ್ಳಬೇಕಿದೆ. ತಮ್ಮ ಹಕ್ಕುಗಳನ್ನು ದೈನೇಸಿಯಾಗಿ ಯಾಚಿಸಿ ಕೇಳುವುದನ್ನು ಇನ್ನಾದರೂ ಕೈಬಿಡಬೇಕಿದೆ. ಡಾ.ಬಿ.ಆರ್. ಅಂಬೇಡ್ಕರ್ ಸಾಂವಿಧಾನಿಕ ಹಕ್ಕುಗಳನ್ನು ಮೂಲಭೂತವಾಗಿ ನೀಡಿದ್ದಾರೆ. ಅವುಗಳನ್ನು ಎದೆಸೆಟೆಸಿ ಪಡೆದುಕೊಳ್ಳಬೇಕಿದೆ. ಪರಿಶಿಷ್ಟ ಏಳ್ಗೆಯೇ ಸರಿಯಲ್ಲ ಎಂಬ ಧೋರಣೆ ಬಲವಾಗುತ್ತಿದೆ. ಪರಿಶಿಷ್ಟರಿಗೆ ನ್ಯಾಯಾಲಯ, ಸರಕಾರ, ಅಧಿಕಾರ ವರ್ಗಗಳಲ್ಲೂ ನ್ಯಾಯ ಸಿಗದಂತಹ ಸ್ಥಿತಿ ನಿರ್ಮಾಣಗೊಳ್ಳುತ್ತಿದೆ. ಸರಕಾರ ದಲಿತರಿಗೆ ಮೃಷ್ಟಾನ್ನ ಕೊಡುವುದು ಬೇಡ, ಕನಿಷ್ಠ ಬದುಕಲಿಕ್ಕಾದರೂ ಒಂದು ಬ್ರೆಡ್ ಕೊಡಲು ಹಿಂಜರಿಯುತ್ತಿದೆ ಎಂದು ಮಾರ್ಮಿಕವಾಗಿ ನುಡಿದರು.

ದರ ದುಪ್ಪಟ್ಟಿನ ಮತ್ತು ಡಿಜಿಟಲ್ ಈ ಕಾಲಘಟ್ಟದಲ್ಲಿ ಪತ್ರಿಕೆ ಪ್ರಕಟಿಸುವುದು ಒಂದು ಸವಾಲಾಗಿದೆ. ನ್ಯೂಸ್ ಪ್ರಿಂಟ್ ದರ ಗಗನಕ್ಕೇರಿದೆ. ಇಂಥಾ ಸಂದರ್ಭದಲ್ಲಿ ಸಣ್ಣ ಮತ್ತು ಪ್ರಾದೇಶಿಕ ಪತ್ರಿಕೆಗಳ ಉಳಿವಿಗೆ ಸರಕಾರ ಪಣ ತೊಡಬೇಕಿದೆ. ಆದರೆ, ಈಗಿನ ಸರಕಾರ ಅವುಗಳ ಕತ್ತುಹಿಚುಕುವ ಕೆಲಸ ಮಾಡುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಬಿ.ರಾಚಯ್ಯ ದತ್ತಿ ನಿಧಿ ವಾರ್ಷಿಕ ಪ್ರಶಸ್ತಿ ಸ್ವೀಕರಿಸಿದ ಹಿರಿಯ ಪತ್ರಕರ್ತ ಕೋಟಿಗಾನಹಳ್ಳಿ ರಾಮಯ್ಯ ಮಾತನಾಡಿ, ದಲಿತ ಪ್ರಾತಿನಿಧ್ಯತೆ ಇಲ್ಲವಾಗುತ್ತಿದೆ. ಇದರಿಂದಾಗಿ ಡಾ.ಬಿ.ಆರ್.ಅಂಬೇಡ್ಕರ್ ದಲಿತ ಪ್ರಾತಿನಿಧ್ಯ ಆಶಯಕ್ಕೆ ಧಕ್ಕೆ ಉಂಟಾಗಿದೆ. ಇದನ್ನು ಪ್ರಶ್ನಿಸಬೇಕಾದ ಮಾಧ್ಯಮ ಕಾಪೆರ್Çೀರೇಟ್ ಪೆÇೀಷಣೆಯಲ್ಲಿ ಮೈಮರೆತಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಮಾದರಿ ಪತ್ರಿಕೋದ್ಯಮ ಸಮಾಜಮುಖಿಯಾಗಲು ಸಾಧ್ಯವಿಲ್ಲ. ಪತ್ರಕರ್ತರು ಮಾದರಿಯಿಂದ ಹೊರಬರದ ಹೊರತು ಸಮಾಜ ಸ್ವಾಸ್ಥ್ಯ ಅಸಾಧ್ಯ. ಅಂತಹ ಮಾದರಿ ಪತ್ರಕರ್ತರಿಂದ ಸಮಾಜ ಯಾವ ನಿರೀಕ್ಷೆಗಳನ್ನು ಇಟ್ಟುಕೊಳ್ಳಲು ಸಾಧ್ಯ ಎಂದರು.

ಉತ್ತರ ಭಾರತದಲ್ಲಿ ಇಂಗ್ಲಿಷ್ ಗುಡಿಗಳನ್ನು ಕಟ್ಟಿದ್ದಾರೆ. ಅಲ್ಲಿ ಎ ಬಿ ಸಿ ಡಿ ಮಂತ್ರ ಜಪಿಸಲಾಗುತ್ತಿದೆ. ನಮ್ಮಲ್ಲೂ ಡಾ.ಬಿ.ಆರ್. ಅಂಬೇಡ್ಕರ್ ಹೆಸರಿನಲ್ಲಿ ಗುಡಿಗಳನ್ನು ನಿರ್ಮಿಸಬೇಕಿದೆ. ಅಲ್ಲಿ ಸಂವಿಧಾನ ಮತ್ತು ಅಂಬೇಡ್ಕರ್ ಆಶಯ ಮಂತ್ರವಾಗಿಸಬೇಕಿದೆ ಎಂದೂ ಹೇಳಿದರು.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತ ಡಾ.ಪಿ.ಎಸ್. ಹರ್ಷ ಮಾತನಾಡಿ, ಪರಿಶಿಷ್ಟ ಪತ್ರಕರ್ತರ ಹಾಗೂ ಪತ್ರಿಕೆಗಳ ನೆರವಿಗೆ ಸರಕಾರ ಸಕಾರಾತ್ಮಕವಾಗಿದೆ. ಈ ಹಿಂದೆ ನನೆಗುದಿಗೆ ಬಿದ್ದಿದ್ದ ಅನೇಕ ಯೋಜನೆಗಳಿಗೆ ಚಾಲನೆ ನೀಡಿದ್ದೇನೆ. ಮುಂದೆಯೂ ಪತ್ರಕರ್ತರ ಏಳಿಗೆಗೆ ಸಹಕಾರ ನೀಡುತ್ತೇನೆ ಎಂದರು. ಹಿರಿಯ ಪತ್ರಕರ್ತ ಮೈಸೂರಿನ ಶಾಂತಕುಮಾರ್, ಕಲಬುರ್ಗಿಯ ಡಿ.ಶಿವಲಿಂಗಪ್ಪ, ಬಾಗಲಕೋಟೆಯ ಮುತ್ತುನಾಯ್ಕರ್ ಅವರಿಗೆ ಸಂಘದ ವಾರ್ಷಿಕ ದತ್ತಿ ನಿಧಿ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು, ಜಿಲ್ಲಾ ಮತ್ತು ಪ್ರಾದೇಶಿಕ ಪತ್ರಿಕೆಗಳ ಸಂಪಾದಕರ ಸಂಘದ ಅಧ್ಯಕ್ಷ ಮದನಗೌಡ, ಕರ್ನಾಟಕ ಮಾಧ್ಯಮ ಅಕಾಡಮಿ ಅಧ್ಯಕ್ಷ ಸದಾಶಿವ ಶೆಣೈ, ರಾಜ್ಯ ಎಸ್‍ಸಿ ಎಸ್ಟಿ ಪತ್ರಿಕೆಗಳ ಸಂಪಾದಕರ ಸಂಘದ ಅಧ್ಯಕ್ಷ ಚೆಲುವರಾಜ್, ಪ್ರಧಾನ ಕಾರ್ಯದರ್ಶಿ ಸೋಮಶೇಖರ್ ಕೆರಗೋಡು, ವಿವಿಧ ಜಿಲ್ಲೆಗಳ ಪತ್ರಿಕಾ ಸಂಪಾದಕರು ಇದ್ದರು. ಹಿರಿಯ ಪತ್ರಕರ್ತ ರವಿಕುಮಾರ್ ಟೆಲೆಕ್ಸ್ ಕಾರ್ಯಕ್ರಮ ನಿರೂಪಿಸಿದರು.

ಹಿಂದೂತ್ವ ಬೆಳವಣಿಗೆಯಿಂದ ದೇಶಕ್ಕೆ ಹಾನಿ

ಹಿಂದೂತ್ವ ರಾಜಕಾರಣ ಬಲಿಷ್ಠವಾಗುತ್ತಿದೆ. ಈ ಬೆಳವಣಿಗೆ ದೇಶಕ್ಕೆ ಮಾರಕ. ಹಿಂದೂ ಅಜೆಂಡಾ ಪ್ರತಿಷ್ಠಿತವಾಗುತ್ತಿದೆ. ಬಹುತ್ವ ಭಾರತ ಇದರಿಂದ ಸಾಧ್ಯವಿಲ್ಲ. ಬಹು ಸಂಸ್ಕøತಿಯ ಭಾರತ ಪ್ರಜಾಮುಖಿಯಾಗಿ ಬೆಳೆಯಲು ಅಂಬೇಡ್ಕರ್ ರಚನೆಯ ಸಂವಿಧಾನವೇ ಕಾರಣವಾಗಿದೆ. ಅಂತಹ ಸಂವಿಧಾನ ಪಾಲನೆ ಕಡ್ಡಾಯವಾಗಬೇಕಿದೆ ಎಂದು ಹಿರಿಯ ಪತ್ರಕರ್ತ, ವಿಧಾನ ಪರಿಷತ್ ಮಾಜಿ ಸದಸ್ಯ ಡಿ.ಎಸ್. ವೀರಯ್ಯ ಸಲಹೆ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X