Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಸುರತ್ಕಲ್; ದೊಡ್ಡ ಕೊಪ್ಪಲ, ಗುಡ್ಡೆ...

ಸುರತ್ಕಲ್; ದೊಡ್ಡ ಕೊಪ್ಪಲ, ಗುಡ್ಡೆ ಕೊಪ್ಪಲ ಕಡಲ ಕಿನಾರೆಯಲ್ಲಿ ತೈಲ ತ್ಯಾಜ್ಯ ಪತ್ತೆ: ಸ್ಥಳೀಯರಲ್ಲಿ ಆತಂಕ

ವಾರ್ತಾಭಾರತಿವಾರ್ತಾಭಾರತಿ13 May 2022 10:22 PM IST
share
ಸುರತ್ಕಲ್; ದೊಡ್ಡ ಕೊಪ್ಪಲ, ಗುಡ್ಡೆ ಕೊಪ್ಪಲ ಕಡಲ ಕಿನಾರೆಯಲ್ಲಿ ತೈಲ ತ್ಯಾಜ್ಯ ಪತ್ತೆ: ಸ್ಥಳೀಯರಲ್ಲಿ ಆತಂಕ

ಸುರತ್ಕಲ್ : ಇಲ್ಲಿನ ದೊಡ್ಡ ಕೊಪ್ಪಲ, ಗುಡ್ಡೆ ಕೊಪ್ಪಲ ಪ್ರದೇಶದ ಕಡಲ ಕಿನಾರೆಯಲ್ಲಿ ತೈಲ ತ್ಯಾಜ್ಯ ಪತ್ತೆಯಾಗಿದ್ದು, ಸ್ಥಳೀಯರನ್ನು ತೀವ್ರ ಆತಂಕಕ್ಕೀಡು ಮಾಡಿದೆ.

ಸುರತ್ಕಲ್, ಎನ್‌ಐಟಿಕೆ, ಗುಡ್ಡೆಕೊಪ್ಪಲ, ದೊಡ್ಡಕೊಪ್ಪಲ ಪ್ರದೇಶದಲ್ಲಿ ಕಳೆದ ಮೂರು ದಿನಗಳಿಂದ ಅಲೆಗಳೊಂದಿಗೆ ತೈಲ ತ್ಯಾಜ್ಯ ಸಮುದ್ರ ದಡಕ್ಕೆ ಅಪ್ಪಳಿಸುತ್ತಿವೆ. ಮೊದಲ ದಿನ ಒಂದೆರೆಡು ಕಡೆ ಕಾಣಿಸಿದ್ದ ಈ ತೈಲ ತ್ಯಾಜ್ಯವು ಶುಕ್ರವಾರ ಏಳೆಂಟು ಕಡೆಗಳಲ್ಲಿ ಕಾಣಿಸಿಕೊಂಡಿವೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ಇದರಿಂದ ಸ್ಥಳೀಯ ಮೀನುಗಾರರು ಮತ್ತು ಗ್ರಾಮಸ್ಥರು ಕಂಗಾಲಾಗಿದ್ದಾರೆ.

ಈ ತೈಲ ತ್ಯಾಜ್ಯವು ಕಳೆದ 3 ವರ್ಷಗಳಿಂದ ಸಮುದ್ರ ಕಿನಾರೆಯಲ್ಲಿ ಕೆಟ್ಟು ನಿಂತಿರುವ ‘ಭಗವತಿ ಪ್ರೇಮ್’ ಎಂಬ ಹಡಗಿನದ್ದು ಎಂದು ಕೆಲವರು ಹೇಳಿಕೊಂಡರೆ, ಇನ್ನು ಕೆಲವರು ಇದು ಎಂಆರ್‌ಪಿಎಲ್ ಸಹಿತ ಸುರತ್ಕಲ್ ಪರಿಸರದ ಬೃಹತ್ ಕಂಪೆನಿಗಳು ಸಮುದ್ರಕ್ಕೆ ಹೊರಚೆಲ್ಲುವ ತೈಲ ತ್ಯಾಜ್ಯವಾಗಿದೆ ಎಂದು ಶಂಕೆ ವ್ಯಕ್ತಪಡಿಸಿದ್ದಾರೆ.

ತೈಲ ತ್ಯಾಜ್ಯ ಸಮುದ್ರದ ಕಿನಾರೆ ಸೇರುವುದು ಇಲ್ಲಿ ಮಾಮೂಲಿಯಾಗಿದೆ. ಆದರೆ ಇದರಿಂದ ಆಗುತ್ತಿರುವ ತೊಂದರೆಗಳು ಎಂಆರ್‌ಪಿಎಲ್, ಎಸ್‌ಇಝೆಡ್‌ನಂತಹ ಸಂಸ್ಥೆಗಳಿಗೆ ಕಾಣದಿರುವುದು ವಿಪರ್ಯಾಸ. ಸ್ಥಳೀಯ ಜನಪ್ರತಿನಿಧಿಗಳೂ ಗ್ರಾಮಸ್ಥರ ನೆರವಿಗೆ ಮುಂದಾಗಿ ಇಂತಹ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ಬಗ್ಗೆ ಚಿಂತಿಸುತ್ತಿಲ್ಲ ಎಂದು ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

*ಎಂಆರ್‌ಪಿಎಲ್, ಎಸ್‌ಇಝೆಡ್ ಸಹಿತ ಬೃಹತ್ ಕೈಗಾರಿಕಾ ಕಂಪೆನಿಗಳು ತ್ಯಾಜ್ಯ ನೀರನ್ನು ಸಮುದ್ರಕ್ಕೆ ಬಿಡುತ್ತಲೇ ಇವೆ. ಇತ್ತೀಚಿನ ಅಸನಿ ಚಂಡಮಾರುತದ ಕಾರಣದಿಂದಾಗಿ ಸಮುದ್ರದ ಅಬ್ಬರ ಜೋರಾಗಿರುವ ಪರಿಣಾಮ ತೈಲ ತ್ಯಾಜ್ಯಗಳು ಸಮುದ್ರದ ದಡಕ್ಕೆ ಅಪ್ಪಲಿಸುವ ಸಾಧ್ಯತೆಗಳಿವೆ. ಅಲ್ಲದೆ ಕೆಟ್ಟು ನಿಂತ ಮತ್ತು ಸಂಚಾರದ ಹಡಗುಗಳೂ ಅದರಲ್ಲಿರುವ ತ್ಯಾಜ್ಯಗಳನ್ನು ಹೊರ ಹಾಕಿರುವ ಪರಿಣಾಮ ಅದು ಸಮುದ್ರದ ಕಿನಾರೆ ಸೇರಿರುವ ಸಾಧ್ಯತೆ ಇದೆ ಎಂದು ಸ್ಥಳೀಯ ನಿವಾಸಿ ಶ್ರೀಕಾಂತ ಗುಡ್ಡಕೊಪ್ಪಲ ತಿಳಿಸಿದ್ದಾರೆ.

*ಈ ತೈಲ ಮಿಶ್ರಿತ ತ್ಯಾಜ್ಯ ನೀರಿನಿಂದ ಆರೋಗ್ಯ ಹದಗೆಡುತ್ತಿದೆ. ಮೀನುಗಾರಿಕೆಗೂ ತೊಂದರೆಯಾಗುತ್ತಿದೆ. ಮೀನುಗಳು ಮರಿ ಇಡುವ ಸಮಯದಲ್ಲೇ ಇಂತಹ ಅವಾಂತರಗಳು ನಡೆಯುತ್ತಿರುವುದರಿಂದ ಮೀನುಗಳ ಸಂತಾನ ಉತ್ಪತ್ತಿ ಕಡಿಮೆಯಾಗುತ್ತವೆ ಎಂದು ಸಿದ್ದೀಕ್ ಗೊಡ್ಡಕೊಪ್ಪಲ ಅಭಿಪ್ರಾಯಪಟ್ಟಿದ್ದಾರೆ.

*ಸಮುದ್ರ ತೀರದ ಜನರು ಇಂತಗ ಗಂಭೀರ ಸಮಸ್ಯೆಗಳನ್ನು ಎದುರಿಸುತ್ತಿದ್ದರೂ ಕೂಡ ನವ ಮಂಗಳೂರು ಬಂದರು ಪ್ರಾಧಿಕಾರವಾಗಲೀ, ಜನಪ್ರತಿನಿಧಿಗಳಾಗಲೀ ಸಮಸ್ಯೆಗಳನ್ನು ಆಲಿಸಿ ಪರಿಹಾರ ಕಂಡುಹಿಡಿಯುವ ಬಗ್ಗೆ ಮನಸ್ಸು ಮಾಡುತ್ತಿಲ್ಲ. ಜಿಲ್ಲಾಡಳಿತವು ಇಂತಹ ಘಟನೆಗಳನ್ನು ಗಂಭೀರವಾಗಿ ಪರಿಗಣಿಸಬೇಕಿದೆ ಎಂದು ಸ್ಥಳೀಯರಾದ ಧನಂಜಯ ತಿಳಿಸಿದ್ದಾರೆ.

*‘ಭಗವತಿ ಪ್ರೇಮ್’ ಎಂಬ ಕೆಟ್ಟು ನಿಂತ ಹಡಗನ್ನು ಒಡೆದು ಅದರ ಸಲಕರಣೆಗಳನ್ನು ಗುಜರಿಗೆ ಹಾಕುವುದಕ್ಕಾಗಿ 3 ವರ್ಷದ ಹಿಂದೆ ಗುಡ್ಡಕೊಪ್ಪಲ ಬಳಿ ತಂದಿಡಲಾಗಿದೆ. ಆದರೆ ಈವರೆಗೂ ಅದರ ಕೆಲಸ ಆರಂಭಗೊಂಡಿಲ್ಲ. ಅದು ನಿಲ್ಲಿಸಿರುವ ಸಮೀಪದಲ್ಲಿ ಬಂಡೆಕಲ್ಲುಗಳೂ ಇವೆ. ಅಲ್ಲದೆ ಈ ಪ್ರದೇಶವು ಮೀನುಗಳ ಸಂತಾನ ಉತ್ಪತ್ತಿಯ ಕೇಂದ್ರವೂ ಆಗಿದೆ. ಕೆಟ್ಟು ನಿಂತ ಈ ಹಡಗಿನಿಂದಾಗಿ ಜನರಿಗೂ, ಮೀನುಗಾರರಿಗೂ ತೊಂದರೆ ಎದುರಾಗಿದೆ ಎಂದು ಸಿದ್ದೀಕ್ ಗೊಡ್ಡಕೊಪ್ಪಲ ಹೇಳಿದ್ದಾರೆ.

"ತೈಲ ತ್ಯಾಜ್ಯದ ಮೂಲ ಯಾವುದು ಎಂಬುದು ಇನ್ನೂ ಸ್ಪಷ್ಟಗೊಂಡಿಲ್ಲ. ಆದಾಗ್ಯೂ ಎಂಆರ್‌ಎಂಪಿಎಲ್, ಎನ್‌ಎಂಪಿಟಿ ಅಧಿಕಾರಿಗಳಿಂದ  ಮಾಹಿತಿ ಕೇಳಿದ್ದೇವೆ. ಅಲ್ಲದೆ ಸ್ಥಳೀಯವಾಗಿಯೂ ಪರಿಶೀಲನೆಗೆ ಕ್ರಮ ವಹಿಸಲಾಗಿದೆ. ಶನಿವಾರ ಈ ಬಗ್ಗೆ ತಾನು ಎಂಆರ್‌ಎಂಪಿಎಲ್, ಎನ್‌ಎಂಪಿಟಿ ಅಧಿಕಾರಿಗಳ ಜೊತೆ ವೀಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಲಿದ್ದೇನೆ. ಅಲ್ಲದೆ ಸ್ಥಳೀಯರಿಗೂ. ಮೀನುಗಾರಿಕೆಗೂ ಯಾವುದೇ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಲಾಗುವುದು".
- ಡಾ. ರಾಜೇಂದ್ರ ಕೆ.ವಿ.
ದ.ಕ.ಜಿಲ್ಲಾಧಿಕಾರಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X