Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಪುರುಷರ ಬ್ಯಾಡ್ಮಿಂಟನ್; ಥಾಮಸ್ ಕಪ್...

ಪುರುಷರ ಬ್ಯಾಡ್ಮಿಂಟನ್; ಥಾಮಸ್ ಕಪ್ ಫೈನಲ್‍ಗೆ ಭಾರತ

ಇತಿಹಾಸ ಸೃಷ್ಟಿ

ವಾರ್ತಾಭಾರತಿವಾರ್ತಾಭಾರತಿ14 May 2022 7:43 AM IST
share
ಪುರುಷರ ಬ್ಯಾಡ್ಮಿಂಟನ್; ಥಾಮಸ್ ಕಪ್ ಫೈನಲ್‍ಗೆ ಭಾರತ

ಹೊಸದಿಲ್ಲಿ: ಪ್ರಬಲ ಡೆನ್ಮಾರ್ಕ್ ವಿರುದ್ಧದ ರೋಚಕ ಹೋರಾಟದಲ್ಲಿ 3-2 ಜಯ ಸಾಧಿಸಿದ ಭಾರತೀಯ ಪುರುಷರ ಬ್ಯಾಡ್ಮಿಂಟನ್ ತಂಡ ಥಾಮಸ್ ಕಪ್ ಫೈನಲ್ ತಲುಪಿ ಇತಿಹಾಸ ಸೃಷ್ಟಿಸಿದೆ.

ಥಾಯ್ಲೆಂಡ್‍ನಲ್ಲಿ ನಡೆದ ಸೆಮಿಫೈನಲ್‍ನಲ್ಲಿ ಉದಯೋನ್ಮುಖ ತಾರೆ ಎಚ್.ಎಸ್.ಪ್ರಣಯ್, ನಿರ್ಣಾಯಕವಾಗಿದ್ದ ಐದನೇ ಪಂದ್ಯದಲ್ಲಿ ಅಮೋಘ ಪ್ರದರ್ಶನ ತೋರಿ, ಮೊಟ್ಟಮೊದಲ ಬಾರಿಗೆ ಈ ಪ್ರತಿಷ್ಠಿತ ಟೂರ್ನಿಯ ಫೈನಲ್ ತಲುಪಲು ಭಾರತಕ್ಕೆ ನೆರವಾದರು.

1979ರಿಂದ ಭಾರತ ತಂಡ ಸೆಮಿಫೈನಲ್‍ನಿಂದ ಮುಂದೆ ತಲುಪಿದ ನಿದರ್ಶನ ಇಲ್ಲ. ಆದರೆ 2016ರ ಚಾಂಪಿಯನ್ ತಂಡವನ್ನು ಬಗ್ಗುಬಡಿದ ಭಾರತೀಯ ತಂಡ ಶುಕ್ರವಾರ ಐತಿಹಾಸಿಕ ಸಾಧನೆ ಮಾಡಿತು.

ವಿಶ್ವಚಾಂಪಿಯನ್‍ ಶಿಪ್‍ನಲ್ಲಿ ಬೆಳ್ಳಿಪದಕ ಗೆದ್ದಿದ್ದ ಕಿಡಂಬಿ ಶ್ರೀಕಾಂತ್ ಮತ್ತು ವಿಶ್ವದ ನಂಬರ್ 8 ಡಬಲ್ಸ್ ಜೋಡಿ ಸಾತ್ವಿಕ್‍ ರಾಜ್ ರಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಭಾರತದ ಹೋರಾಟ ಸಂಘಟಿಸಿದರು. ಆದರೆ ಉಭಯ ತಂಡಗಳ ನಡುವೆ 2-2 ಸಮಬಲ ಸೃಷ್ಟಿಯಾದ ಹಂತದಲ್ಲಿ ನಿರ್ಣಾಯಕ ಐದನೇ ಪಂದ್ಯದಲ್ಲಿ ವಿಶ್ವದ 13ನೇ ಕ್ರಮಾಂಕದ ಆಟಗಾರ ರಸ್ಮಸ್ ಗೇಮ್ಕೆ ನಡುವಿನ ಸೆಣಸಾಟದಲ್ಲಿ ಪ್ರಣಯ್ ಹಿಮ್ಮಡಿ ಗಾಯಕ್ಕೆ ತುತ್ತಾದರು. ವೈದ್ಯಕೀಯ ವಿರಾಮದ ಬಳಿಕ ತಮ್ಮ ಅಭಿಯಾನ ಮುಂದುವರಿಸಿದ ಪ್ರಣಯ್ ಎಲ್ಲ ಪ್ರತಿಕೂಲಗಳ ನಡುವೆಯೂ 13-21, 21-9, 21-12 ಅಂತರದಿಂದ ಗೆಲುವು ಸಾಧಿಸಿದರು.

ಭಾರತ ಫೈನಲ್‍ನಲ್ಲಿ 14 ಬಾರಿಯ ಚಾಂಪಿಯನ್ ಇಂಡೋನೇಷ್ಯಾ ವಿರುದ್ಧ ಸೆಣೆಸಲಿದೆ. ಇಂಡೋನೇಷ್ಯಾ ಸೆಮಿಫೈನಲ್‍ನಲ್ಲಿ ಜಪಾನ್ ವಿರುದ್ಧ 3-2 ಅಂತರದ ಗೆಲುವು ಸಾಧಿಸಿ ಫೈನಲ್ ತಲುಪಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X