VIDEO- ಕರ್ನಾಟಕದಲ್ಲಿ ದಲಿತ ಸಿಎಂ ಆಗ್ತಾರೆ ಅಂತ ಕನಸು ಕಾಣೋನು ಹುಚ್ಚ: ಕೇಂದ್ರ ಸಚಿವ ಎ.ನಾರಾಯಣಸ್ವಾಮಿ
ಬೆಂಗಳೂರು: ಕರ್ನಾಟಕದಲ್ಲಿ ದಲಿತ ಸಿಎಂ ಆಗ್ತಾರೆ ಅಂತ ಕನಸು ಕಾಣೋನು ಹುಚ್ಚ ಎಂದು ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ಹೇಳಿದ್ದಾರೆ.
ಆನೇಕಲ್ನ ಸಾಯಿರಾಮ್ ಕಾಲೇಜಿನಲ್ಲಿ ನಡೆದ ಪದವಿ ಪ್ರಧಾನ ಸಮಾರಂಭ ಕಾರ್ಯಕ್ರಮದಲ್ಲಿ ಭಾಗಿಯಾಗಿ ಬಳಿಕ ಮಾತನಾಡಿದರು.
'ರಾಜ್ಯದಲ್ಲಿ ದಲಿತ ಮುಖ್ಯಮಂತ್ರಿ ಆಗುತ್ತಾರೆ ಅಂತ ಕನಸು ಕಾಣೋನು ಹುಚ್ಚ. ದಲಿತ ಸಿಎಂ ಎನ್ನುವ ಚರ್ಚೆ ಕೇವಲ ರಾಜಕೀಯ ತೆವಲು ಅಷ್ಟೇ'' ಎಂದಿದ್ದಾರೆ.
'ರಾಜ್ಯ ರಾಜಕಾರಣದಲ್ಲಿ ದಲಿತ ಸಿಎಂ ಯಾಕೆ ಆಗಲ್ಲ ಎಂಬುವುದಕ್ಕೆ ಈ ದೇಶದಲ್ಲಿ ಬಹಳಷ್ಟು ಉದಾಹರಣೆಗಳಿವೆ. ಸಂವಿಧಾನ ಬರೆದ ಡಾ.ಬಿ.ಆರ್. ಅಂಬೇಡ್ಕರ್ರವರಿಗೆ ಐದು ವರ್ಷಗಳ ಕಾಲ ಮಂತ್ರಿಯಾಗಿ ಮುಂದುವರೆಯುವುದಕ್ಕೂ ಸಹ ಬಿಡಲಿಲ್ಲ. ಅಂಬೇಡ್ಕರ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಕೂಡ ನೀವು ಐದು ವರ್ಷ ಮಂತ್ರಿಯಾಗಿ ಮುಂದುವರಿಯಬೇಕು ಎಂದು ಅವರ ಮನೆಗೆ ಹೋಗಿ ಯಾರು ಒಂದು ಕಪ್ ಕಾಫಿಯೂ ಸಹ ಕುಡಿದಿಲ್ಲ' ಎಂದು ಹೇಳಿದ್ದಾರೆ.
Next Story