Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಇಸ್ರೇಲ್‌ ಸೈನಿಕರಿಂದ ‌ಅಲ್‌ಜಝೀರಾ...

ಇಸ್ರೇಲ್‌ ಸೈನಿಕರಿಂದ ‌ಅಲ್‌ಜಝೀರಾ ಪತ್ರಕರ್ತೆ ಶಿರೀನ್ ಹತ್ಯೆ ಖಂಡಿಸಿ ಲಂಡನ್‌ ನಲ್ಲಿ ಬೃಹತ್ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ15 May 2022 8:16 PM IST
share
ಇಸ್ರೇಲ್‌ ಸೈನಿಕರಿಂದ ‌ಅಲ್‌ಜಝೀರಾ ಪತ್ರಕರ್ತೆ ಶಿರೀನ್ ಹತ್ಯೆ ಖಂಡಿಸಿ ಲಂಡನ್‌ ನಲ್ಲಿ ಬೃಹತ್ ಪ್ರತಿಭಟನೆ

ಲಂಡನ್, ಮೇ 15: ಆಕ್ರಮಿತ ಪಶ್ಚಿಮ ದಂಡೆಯಲ್ಲಿ ಈ ವಾರದ ಆರಂಭದಲ್ಲಿ ನಡೆದ ಪತ್ರಕರ್ತೆ ಶಿರೀನ್ ಹತ್ಯೆಯನ್ನು ಖಂಡಿಸಿ ಲಂಡನ್‌ನಲ್ಲಿ ಶನಿವಾರ ನಡೆದ ಪ್ರತಿಭಟನೆಯಲ್ಲಿ ಸುಮಾರು 15,000 ಪೆಲೆಸ್ತೀನ್ ಪರ ಪ್ರದರ್ಶನಕಾರರು ಪಾಲ್ಗೊಂಡಿದ್ದರು ಎಂದು ವರದಿಯಾಗಿದೆ.

ಇಸ್ರೇಲ್‌ನ ಸ್ನಿಪರ್ ದಳದಿಂದ ಶಿರೀನ್ ಹತ್ಯೆಯನ್ನು ಖಂಡಿಸಿ, ಲಂಡನ್‌ನಲ್ಲಿರುವ ಬಿಬಿಸಿ ಕೇಂದ್ರಕಚೇರಿಯ ಹೊರಭಾಗದಲ್ಲಿ ಪ್ರತಿಭಟನಾಕಾರರು 55 ಪೇಪರ್ ಜಾಕೆಟ್‌ಗಳನ್ನು ಪ್ರದರ್ಶಿಸಿದರು. 2000ದಿಂದ ಇಸ್ರೇಲ್ ಪಡೆ 55 ಪತ್ರಕರ್ತರನ್ನು ಹತ್ಯೆಗೈದಿರುವುದನ್ನು ಇದು ಪ್ರತಿನಿಧಿಸಿದೆ ಎಂದು ಪ್ರತಿಭಟನೆಯ ಸಂಘಟಕರು ಹೇಳಿದ್ದಾರೆ. ಜತೆಗೆ, ಪೆಲೆಸ್ತೀನ್ನ ಭೂಮಿಯನ್ನು ಇಸ್ರೇಲ್ ಅಕ್ರಮವಾಗಿ ಸ್ವಾಧೀನಪಡಿಸಿಕೊಂಡು 74 ವರ್ಷ ಕಳೆದಿರುವುದನ್ನು ಸಂಕೇತಿಸಲು 74 ಕೀಗಳನ್ನೂ ಪ್ರತಿಭಟನಾಕಾರರು ಪ್ರದರ್ಶಿಸಿದರು. 1948ರಲ್ಲಿ ಪೆಲೆಸ್ತೀನ್ ಪ್ರದೇಶವನ್ನು ಇಸ್ರೇಲ್ ಅಕ್ರಮವಾಗಿ ವಶಕ್ಕೆ ಪಡೆದಾಗ ಅಲ್ಲಿದ್ದ ಸಾವಿರಾರು ಪೆಲೆಸ್ತೀನೀಯರು ಪಲಾಯನ ಮಾಡಿದ್ದರು.

 ಪೆಲೆಸ್ತೀನ್ ಪ್ರದೇಶವನ್ನು ಇಸ್ರೇಲ್ ಅಕ್ರಮವಾಗಿ ಸ್ವಾಧೀನ ಪಡಿಸಿಕೊಂಡಿರುವುದಕ್ಕೆ ಸಂಬಂಧಿಸಿದ ಸುದ್ಧಿ, ವರದಿಗಳನ್ನು ಪ್ರಸಾರ ಮಾಡುವಾಗ ಬಿಬಿಸಿ ಪಕ್ಷಪಾತ ಮತ್ತು ಸಮಸ್ಯಾತ್ಮಕ ಭಾಷೆ ಬಳಸುತ್ತಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿ ಬ್ಯಾನರ್‌ಗಳನ್ನು ಪ್ರದರ್ಶಿಸಿದರು. ಅಲ್ಲದೆ ಬಿಬಿಸಿಯ ಹೊರಭಾಗದಲ್ಲಿ ಇರಿಸಿದ ಸ್ಮಾರಕದಲ್ಲಿ ಶಿರೀನ್ ಹತ್ಯೆಗೆ ಸಂತಾಪ ಸೂಚಿಸುವ ಸಂದೇಶವನ್ನೂ ಪ್ರತಿಭಟನಾಕಾರರು ಬರೆದರು. ಅಲ್ಲದೆ , ಬ್ರಿಟನ್ ಮೂಲದ ಫ್ರೆಂಡ್ಸ್ ಆಫ್ ಅಲ್-ಅಖ್ಸಾ (ಎಫ್ಒಎ) ಸಂಘಟನೆಯ ಅಭಿಯಾನವನ್ನು ಬೆಂಬಲಿಸುವ ಸಂಕೇತವಾಗಿ ಮಾನವ ಸರಪಳಿ ರಚಿಸಿದರು.

 ಅಲ್ಅಖ್ಸಾದಲ್ಲಿ ಪೆಲೆಸ್ತೀನಿಯರು ಪ್ರಾರ್ಥನೆ ಸಲ್ಲಿಸುವಾಗ ದಾಳಿ ನಡೆಸುವುದನ್ನು ಇಸ್ರೇಲ್ ಪೊಲೀಸರು ನಿಲ್ಲಿಸಬೇಕು ಎಂದು ಎಫ್ಒಎ ಆಗ್ರಹಿಸಿ ಅಭಿಯಾನ ಆರಂಭಿಸಿದೆ. ಶಿರೀನ್ರನ್ನು ಗುರಿಯಾಗಿಸಿ ಇಸ್ರೇಲ್ ಪೊಲೀಸರು ದಾಳಿ ನಡೆಸಿದ್ದು ಮರುದಿನ ನಡೆದ ಅಂತಿಮ ಕ್ರಿಯೆ ಮೆರವಣಿಗೆ ಸಂದರ್ಭದಲ್ಲೂ ಅನುಚಿತವಾಗಿ ನಡೆದುಕೊಂಡು ಅಗೌರವ ತೋರಿದೆ. ಇದನ್ನು ಪ್ರತಿಭಟಿಸಿ ಲಂಡನ್‌ನಲ್ಲಿ ನಡೆದ ಪ್ರತಿಭಟನೆಯಲ್ಲಿ 15,000 ಜನ ಪಾಲ್ಗೊಂಡಿರುವುದು ಪೆಲೆಸ್ತೀನಿಯರ ಪರ ಜನಬೆಂಬಲದ ದ್ಯೋತಕವಾಗಿದೆ ಎಂದು ಎಫ್ಒಎ ಸಾರ್ವಜನಿಕ ವ್ಯವಹಾರ ವಿಭಾಗದ ಮುಖ್ಯಸ್ಥ ಶಮಿಯುಲ್ ಜೋರ್ಡರ್ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X