Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ: ಡಿಎನ್ಎಗಾಗಿ ದಫನ ಮಾಡಿದ್ದ...

ಉಡುಪಿ: ಡಿಎನ್ಎಗಾಗಿ ದಫನ ಮಾಡಿದ್ದ ಮೃತದೇಹದ ಮಾದರಿ ಸಂಗ್ರಹಿಸಿದ ಪಂಜಾಬ್ ಪೊಲೀಸರು

ವಾರ್ತಾಭಾರತಿವಾರ್ತಾಭಾರತಿ15 May 2022 10:42 PM IST
share
ಉಡುಪಿ: ಡಿಎನ್ಎಗಾಗಿ ದಫನ ಮಾಡಿದ್ದ ಮೃತದೇಹದ ಮಾದರಿ ಸಂಗ್ರಹಿಸಿದ ಪಂಜಾಬ್ ಪೊಲೀಸರು

ಉಡುಪಿ : ಒಂದೂವರೆ ವರ್ಷಗಳ ಹಿಂದೆ ಬೀಡಿನಗುಡ್ಡೆ ರುದ್ರ ಭೂಮಿಯಲ್ಲಿ ಅಪರಿಚಿತ ವ್ಯಕ್ತಿಯ ನೆಲೆಯಲ್ಲಿ ಧಪನ ಮಾಡಲಾದ ಪಂಜಾಬ್ ಮೂಲದ ವ್ಯಕ್ತಿಯ ಮೃತದೇಹವನ್ನು ಪಂಜಾಬ್ ಪೊಲೀಸರು ಹೆಚ್ಚಿನ ತನಿಖೆ ಗಾಗಿ ಹೊರ ತೆಗೆಸಿ, ಮಾದರಿ ಸಂಗ್ರಹಿಸಿರುವ ಬಗ್ಗೆ ವರದಿಯಾಗಿದೆ.

ಪಂಜಾಬ್ ರಾಜ್ಯದ ಸದಾರ್ ಪೊಲೀಸ್ ಠಾಣಾ ವ್ಯಾಪ್ತಿಯ ತೇಜೇಂದ್ರ ಸಿಂಗ್(31) ಎಂಬವರು 2020ರ ಡಿಸೆಂಬರ್ ತಿಂಗಳಲ್ಲಿ ಉದ್ಯೋಗಕ್ಕಾಗಿ ವಿದೇಶಕ್ಕೆ ತೆರಳುವ ಸಂಬಂಧ ಮಂಗಳೂರಿಗೆ ಹೊರಟಿದ್ದರು. ಬಳಿಕ ಅವರು ತನ್ನ ಮನೆಯವರಿಗೆ ಡಿ.15ರಂದು ಕರೆ ಮಾಡಿ ತಾನು ಮಂಗಳೂರಿನಲ್ಲಿ ಇರುವುದಾಗಿ ಹೇಳಿದ್ದರು. ಅದರ ನಂತರ ಅವರ ಮೊಬೈಲ್ ಸ್ವಿಚ್‌ ಆಫ್ ಆಗಿತ್ತು.

ಈ ಹಿನ್ನೆಲೆಯಲ್ಲಿ ಮನೆಯವರು ಸದಾರ್ ಪೊಲೀಸ್ ಠಾಣೆಯಲ್ಲಿ ತೇಜೇಂದ್ರ ಸಿಂಗ್ ಅವರನ್ನು ದುಷ್ಕರ್ಮಿಗಳು ಅಪಹರಿಸಿರುವುದಾಗಿ ದೂರು ನೀಡಿದ್ದರು. ಅದರಂತೆ ತನಿಖೆ ನಡೆಸಿದ ಅಲ್ಲಿನ ಪೊಲೀಸರಿಗೆ ಇದೊಂದು ಕೊಲೆ ಎಂಬುದಾಗಿ ತನಿಖೆಯಿಂದ ಕಂಡುಬಂತು. ಅದರಂತೆ ಈ ಬಗ್ಗೆ ಕೊಲೆ ಪ್ರಕರಣ ದಾಖಲಿಸಿಕೊಂಡ ಅಲ್ಲಿನ ಪೊಲೀಸರು ತನಿಖೆ ತೀವ್ರಗೊಳಿಸಿದರು.

ಮಂಗಳೂರಿಗೆ ಆಗಮನ: ತೇಜೇಂದ್ರ ಅವರ ಫೋನ್ ಕರೆಯ ಜಾಡು ಹಿಡಿದುಕೊಂಡು ಮಂಗಳೂರಿಗೆ ಆಗಮಿಸಿದ ಪಂಜಾಬ್ ಪೊಲೀಸರು, ಮಂಗಳೂರು ಪಶ್ಚಿಮ ವಲಯ ವ್ಯಾಪ್ತಿಯ ಪೊಲೀಸ್ ಠಾಣೆಗಳಲ್ಲಿ ಪತ್ತೆ ಯಾಗಿದ್ದ ಅಪರಿಚಿತ ಮೃತದೇಹಗಳ ಫೋಟೋ ವನ್ನು ಪರಿಶೀಲನೆ ನಡೆಸಿದರು.

ಈ ವೇಳೆ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪತ್ತೆಯಾಗಿದ್ದ ಮೃತದೇಹವು ತೇಜೇಂದ್ರ ಸಿಂಗ್ ಫೋಟೋದೊಂದಿಗೆ ಹೋಲಿಕೆ ಆಗಿತ್ತು. ಹೀಗೆ ಮೃತದೇಹ ವನ್ನು ಪತ್ತೆ ಹಚ್ಚಿದ ಪೊಲೀಸರು, ಮಲ್ಪೆಗೆ ಆಗಮಿಸಿ ವಿಚಾರಿಸಿದರು. ಆಗ ಆ ಮೃತದೇಹವನ್ನು ದಫನ ಮಾಡಿರುವುದು ತಿಳಿದುಬಂತು.

ಮೃತದೇಹ ಹೊರಕ್ಕೆ: ಹೆಚ್ಚಿನ ತನಿಖೆ ಹಿನ್ನೆಲೆಯಲ್ಲಿ ರುದ್ರಭೂಮಿಯಲ್ಲಿ ಧಪನ ಮಾಡಲಾಗಿದ್ದ ಮೃತದೇಹವನ್ನು ಪಂಜಾಬ್ ಪೊಲೀಸರ ಸಮ್ಮುಖದಲ್ಲಿ ಶನಿವಾರ ಹೊರ ತೆಗೆಯಲಾಯಿತು.

ಡಿಎನ್‌ಎ ಮೂಲಕ ಈ ಮೃತದೇಹವು ತೇಜೇಂದ್ರ ಸಿಂಗ್ ಅವರದ್ದೆಯೇ ಎಂಬುದು ದೃಢಪಡಿಸಲು ಪಂಜಾಬ್ ಪೊಲೀಸರು, ಅಸ್ಥಿಪಂಜರದ ಕೆಲವೊಂದು ಮೂಳೆ ಹಾಗೂ ಮಾದರಿಯನ್ನು ಸಂಗ್ರಹಿಸಿದರು. ಇದನ್ನು ಇವರು ಪಂಜಾಬ್ ರಾಜ್ಯಕ್ಕೆ ಕೊಂಡೊಯ್ದು ಡಿಎಎನ್ ಪರೀಕ್ಷೆಗೆ ಒಳಪಡಿಸಲಿದ್ದಾರೆ ಎಂದು ತಿಳಿದು ಬಂದಿದೆ.

ಈ ಸಂದರ್ಭದಲ್ಲಿ ಉಡುಪಿ ತಹಶೀಲ್ದಾರ್ ಅರ್ಚನಾ ಭಟ್, ಮಲ್ಪೆ ಎಸ್ಸೈ ಶಕ್ತಿವೇಲು ಹಾಜರಿದ್ದರು. ಮೃತದೇಹ ಹೊರ ತೆಗೆಯಲು ಉಡುಪಿ ನಗರಸಭೆ ಸಿಬ್ಬಂದಿ, ಸಾಮಾಜಿಕ ಕಾರ್ಯಕರ್ತ ನಿತ್ಯಾನಂದ ಒಳಕಾಡು ಸಹಕರಿಸಿದರು. ಮೃತದೇಹವನ್ನು ದಫನ ಮಾಡುವ ಮೊದಲು ಮರಣೋತ್ತರ ಪರೀಕ್ಷೆಗೆ ಒಳ ಪಡಿಸಿದ್ದರೂ ಸಾವಿಗೆ ಕಾರಣ ತಿಳಿದುಬಂದಿರಲಿಲ್ಲ ಎಂದು ಮೂಲಗಳು ತಿಳಿಸಿವೆ.

ಅಪರಿಚಿತ ಶವವಾಗಿ ಪತ್ತೆ

ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಕೆಮ್ಮಣ್ಣು ಸಮೀಪದ ಮೂಡು ಕುದ್ರುವಿನ ಹೊಳೆಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹವೊಂದು 2020ರ ಡಿ.16ರಂದು ಪತ್ತೆಯಾಗಿತ್ತು. ಈ ಬಗ್ಗೆ ಮರಣೋತ್ತರ ಪರೀಕ್ಷೆ ನಡೆಸಿ, ಮೃತದೇಹವನ್ನು ಜಿಲ್ಲಾಸ್ಪತ್ರೆಯ ಶವಗಾರದಲ್ಲಿ ಇರಿಸಲಾಗಿತ್ತು.

ಆದರೆ ಮೃತರ ವಾರಸುದಾರರು ಯಾರು ಕೂಡ ಪೊಲೀಸ್ ಠಾಣೆಯನ್ನು ಸಂಪರ್ಕಿಸದ ಕಾರಣಕ್ಕಾಗಿ ಅಜ್ಜರಕಾಡು ಶವಗಾರದಲ್ಲಿದ್ದ ಈ ಮೃತದೇಹವನ್ನು ಮಲ್ಪೆ ಪೊಲೀಸರು ಬೀಡಿನಗುಡ್ಡೆ ರುದ್ರಭೂಮಿಯಲ್ಲಿ ಕಾನೂನು ಪ್ರಕ್ರಿಯೆ ನಡೆಸಿ ಧಪನ ಮಾಡಿದ್ದರು. ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಅಸ್ವಾಭಾವಿಕ ಮರಣ ಪ್ರಕರಣ ದಾಖಲಾಗಿತ್ತು. ಇದೀಗ ಈ ಮೃತದೇಹ ತೇಜೇಂದ್ರ ಸಿಂಗ್ ಅವರದ್ದು ಎಂಬುದಾಗಿ ಪಂಜಾಬ್ ಪೊಲೀಸರಿಂದ ಬೆಳಕಿಗೆ ಬಂದಿದೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X