Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. "ಪುಟಿನ್ ತೀವ್ರ ಅಸ್ವಸ್ಥರಾಗಿದ್ದು,...

"ಪುಟಿನ್ ತೀವ್ರ ಅಸ್ವಸ್ಥರಾಗಿದ್ದು, ರಕ್ತದ ಕ್ಯಾನ್ಸರ್ ನಿಂದ ಬಳಲುತ್ತಿದ್ದಾರೆ": ಬ್ರಿಟನ್ ಮಾಜಿ ಗುಪ್ತಚರ ಅಧಿಕಾರಿ

ವಾರ್ತಾಭಾರತಿವಾರ್ತಾಭಾರತಿ15 May 2022 10:43 PM IST
share
ಪುಟಿನ್ ತೀವ್ರ ಅಸ್ವಸ್ಥರಾಗಿದ್ದು, ರಕ್ತದ ಕ್ಯಾನ್ಸರ್ ನಿಂದ ಬಳಲುತ್ತಿದ್ದಾರೆ: ಬ್ರಿಟನ್ ಮಾಜಿ ಗುಪ್ತಚರ ಅಧಿಕಾರಿ

ಹೊಸದಿಲ್ಲಿ, ಮೇ 13: ರಶ್ಯ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಗಂಭೀರವಾಗಿ ಅಸ್ವಸ್ಥರಾಗಿದ್ದಾರೆ ಮತ್ತು ಇದು ಉಕ್ರೇನ್‌ನಲ್ಲಿ ನಡೆಸಿರುವ ಕೃತ್ಯದ ಒಂದು ಭಾಗವಾಗಿರಬಹುದು ಎಂದು ಬ್ರಿಟನ್ ನ ಮಾಜಿ ಗುಪ್ತಚರ ಅಧಿಕಾರಿ ಹೇಳಿದ್ದಾರೆ.

 ಅವರ ಖಾಯಿಲೆಯ ಬಗ್ಗೆ ನಿಖರ ಮಾಹಿತಿಯಿಲ್ಲ. ಇದು ಗುಣಪಡಿಸಲಾಗದ ಕಾಯಿಲೆ ಅಥವಾ ಇನ್ನೇನೋ ಆಗಿರಬಹುದು. ಆದರೆ ಒಂದಂತೂ ಸತ್ಯ, ಇದು ಸಮೀಕರಣದ ಭಾಗವಾಗಿದೆ ಎಂದು ಭಾವಿಸುತ್ತೇನೆ. ರಶ್ಯ ಮತ್ತು ಇತರೆಡೆಯ ಮೂಲಗಳಿಂದ ದೊರಕಿದ ಮಾಹಿತಿಯ ಪ್ರಕಾರ ಪುಟಿನ್ ಗಂಭೀರವಾಗಿ ಅಸ್ವಸ್ಥಗೊಂಡಿರುವುದು ಸತ್ಯ ಎಂದು ಬ್ರಿಟನ್ ಗುಪ್ತಚರ ಇಲಾಖೆಯ ಮಾಜಿ ಅಧಿಕಾರಿ ಕ್ರಿಸ್ಟೋಫರ್ ಸ್ಟೀಲೆ ಹೇಳಿದ್ದಾರೆ.

ಈ ಮಧ್ಯೆ, ಪುಟಿನ್ ಗೆ ಅತ್ಯಂತ ಆಪ್ತವಾಗಿರುವ ರಶ್ಯದ ಮುಖಂಡರೊಬ್ಬರು ಪಾಶ್ಚಾತ್ಯ ಉದ್ಯಮಿಯೊಬ್ಬರ ಜತೆ ಮಾತನಾಡುತ್ತಿದ್ದ ಸಂದರ್ಭ ‘ಪುಟಿನ್ ರಕ್ತದ ಕ್ಯಾನ್ಸರ್ ನಿಂದ ತೀವ್ರ ಅಸ್ವಸ್ಥರಾಗಿದ್ದಾರೆ’ ಎಂದು ಹೇಳಿರುವುದಾಗಿ ಅಮೆರಿಕದ ಪತ್ರಿಕೆ ನ್ಯೂ ಲೈನ್ಸ್ ವರದಿ ಮಾಡಿದೆ. ಉಕ್ರೇನ್ ಯುದ್ಧದ ಬಳಿಕ ಸಾರ್ವಜನಿಕ ಸಮಾರಂಭ, ವಿಜಯ ದಿನಾಚರಣೆ ಮುಂತಾದ ಕಾರ್ಯಕ್ರಮದಲ್ಲಿ ಪುಟಿನ್ ಈ ಹಿಂದಿನಂತೆ ಲವಲವಿಕೆಯಿಂದ ಪಾಲ್ಗೊಳ್ಳದೆ ನಿಸ್ತೇಜರಾಗಿದ್ದರು ಎಂಬ ವರದಿಯ ಬಳಿಕ ಅವರ ಆರೋಗ್ಯದ ಬಗ್ಗೆ ಊಹಾಪೋಹ ಗರಿಗೆದರಿದೆ. ಮಾಸ್ಕೋದ ಕೆಂಪುವೃತ್ತದಲ್ಲಿ ನಡೆದ ಮಿಲಿಟರಿ ಕವಾಯತಿನ ಸಂದರ್ಭ ವೇದಿಕೆಯಲ್ಲಿ ಆಸೀನರಾಗಿದ್ದ ಪುಟಿನ್ ತನ್ನ ಕಾಲುಗಳ ಮೇಲೆ ಕಡುಹಸಿರು ಬಣ್ಣದ ಹೊದಿಕೆ ಹೊದ್ದಿರುವುದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.


ಪುಟಿನ್ ಪದಚ್ಯುತಿಗೆ ದಂಗೆ: ಉಕ್ರೇನ್ ಸೇನಾಧಿಕಾರಿ ಹೇಳಿಕೆ

 ಉಕ್ರೇನ್‌ನಲ್ಲಿ ನಡೆಯುತ್ತಿರುವ ಯುದ್ಧದ ಮಧ್ಯೆಯೇ, ರಶ್ಯ ಅಧ್ಯಕ್ಷ ಪುಟಿನ್ ರನ್ನು ಪದಚ್ಯುತಗೊಳಿಸುವ ಕ್ಷಿಪ್ರಕ್ರಾಂತಿಗೆ ಚಾಲನೆ ದೊರೆತಿದ್ದು ಅದನ್ನು ತಡೆಯುವುದು ಅಸಾಧ್ಯವಾಗಿದೆ ಎಂದು ಉಕ್ರೇನ್ ಸೇನಾಧಿಕಾರಿ ಹೇಳಿದ್ದಾರೆ.

ಸ್ಕೈ ನ್ಯೂಸ್ ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಮೇಜರ್ ಜನರಲ್ ಕಿರಿಲೊ ಬುಡನೊವ್, ಆಗಸ್ಟ್ ಮಧ್ಯಭಾಗದಲ್ಲಿ ಯುದ್ಧಕ್ಕೆ ತಿರುವು ದೊರಕಬಹುದು ಮತ್ತು ಈ ವರ್ಷಾಂತ್ಯಕ್ಕೆ ಯುದ್ಧ ಕೊನೆಗೊಳ್ಳಬಹುದು. ಒಂದು ವೇಳೆ ರಶ್ಯ ಸೋತರೆ, ಪುಟಿನ್ ಪದಚ್ಯುತಗೊಳ್ಳಲಿದ್ದಾರೆ ಮತ್ತು ರಶ್ಯ ಪತನವಾಗಲಿದೆ ಎಂದಿದ್ದಾರೆ.

ರಶ್ಯದಲ್ಲಿ ಪುಟಿನ್ ವಿರುದ್ಧ ದಂಗೆಗೆ ಚಾಲನೆ ದೊರಕಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು ‘ ಹೌದು. ಅವರು ಈ ನಿಟ್ಟಿನಲ್ಲಿ ಮುಂದುವರಿಯುತ್ತಿದ್ದಾರೆ ಮತ್ತು ಅವರನ್ನು ತಡೆಯುವುದು ಅಸಾಧ್ಯ. ಅಂತಿಮವಾಗಿ ನಾಯಕತ್ವ ಬದಲಾವಣೆಗೆ ಇದು ಕಾರಣವಾಗಲಿದೆ ಎಂದರು.

ಪುಟಿನ್ ರಕ್ತದ ಕ್ಯಾನ್ಸರ್ ಮತ್ತಿತರ ಕಾಯಿಲೆಯಿಂದ ಬಳಲುತ್ತಿದ್ದು ಅವರ ಮಾನಸಿಕ ಮತ್ತು ದೈಹಿಕ ಸ್ಥಿತಿ ಹದಗೆಟ್ಟಿದೆ. ಅವರು ತೀವ್ರ ಅಸ್ವಸ್ಥರಾಗಿದ್ದಾರೆ ಎಂದು ಹೇಳಿದ ಬುಡನೊವ್, ತಮ್ಮ ಅನಾರೋಗ್ಯದ ಬಗ್ಗೆ ಪುಟಿನ್ ಸುಳ್ಳು ಸುದ್ಧಿ ಪ್ರಸಾರ ಮಾಡುತ್ತಿದ್ದಾರೆ. ಇದೊಂದು ತಂತ್ರಗಾರಿಕೆ ಎಂಬ ವರದಿಯನ್ನು ನಿರಾಕರಿಸಿದರು. ಪುಟಿನ್ ಅನಾರೋಗ್ಯದ ಬಗ್ಗೆ ಹಲವು ವರದಿ, ಇದಕ್ಕೆ ಸಂಬಂಧಿಸಿದ ಹಲವು ವೀಡಿಯೊಗಳು, ಬೆಲಾರಸ್ ಮುಖಂಡ ಅಲೆಕ್ಸಾಂಡರ್ ಲುಕಶೆಂಕೊರಿಗೆ ಹಸ್ತಲಾಘವ ನೀಡುವಾಗ ಪುಟಿನ್ ಕೈ ನಡುಗುತ್ತಿರುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿವೆ. ಆದರೆ ಈ ಬಗ್ಗೆ ರಶ್ಯ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X