Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಪಠ್ಯಪುಸ್ತಕದಲ್ಲಿ ಹೆಡಗೆವಾರ್ ಭಾಷಣ...

ಪಠ್ಯಪುಸ್ತಕದಲ್ಲಿ ಹೆಡಗೆವಾರ್ ಭಾಷಣ ಸೇರ್ಪಡೆ ನನ್ನ ಪ್ರಕಾರ ಸರಿ: ಕೋಟ ಶ್ರೀನಿವಾಸ ಪೂಜಾರಿ

"ನಾರಾಯಣಗುರು, ಭಗತ್‍ಸಿಂಗ್ ಅವರನ್ನು ಪಠ್ಯದಲ್ಲಿ ಕೈಬಿಟ್ಟಿರುವ ಬಗ್ಗೆ ಮಾಹಿತಿ ಇಲ್ಲ"

ವಾರ್ತಾಭಾರತಿವಾರ್ತಾಭಾರತಿ18 May 2022 8:01 PM IST
share
ಪಠ್ಯಪುಸ್ತಕದಲ್ಲಿ ಹೆಡಗೆವಾರ್ ಭಾಷಣ ಸೇರ್ಪಡೆ ನನ್ನ ಪ್ರಕಾರ ಸರಿ: ಕೋಟ ಶ್ರೀನಿವಾಸ ಪೂಜಾರಿ

ಚಿಕ್ಕಮಗಳೂರು: ನಾರಾಯಣಗುರು ಮತ್ತು ಭಗತ್‍ಸಿಂಗ್ ಅವರನ್ನು ಪಠ್ಯದಲ್ಲಿ ಕೈಬಿಟ್ಟಿರುವ ಬಗ್ಗೆ ತನಗೆ ಮಾಹಿತಿ ಇಲ್ಲ. ಈ ಕುರಿತು ಪ್ರಾಥಮಿಕ ಮುತ್ತು ಪ್ರೌಢಶಿಕ್ಷಣ ಸಚಿವರೊಂದಿಗೆ ಚರ್ಚಿಸಲಾಗುವುದು. ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸಂಸ್ಥಾಪಕ ಕೇಶವಬಲಿರಾಮ ಹೆಡಗೆವಾರ್ ಅವರ ಭಾಷಣವನ್ನು ಪಠ್ಯದಲ್ಲಿ ಸೇರ್ಪಡೆಗೊಳಿಸಿರುವುದು ನನ್ನ ದೃಷ್ಟಿಯಲ್ಲಿ ಸರಿಯಾಗಿದೆ ಎಂದು ಸಮಾಜ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸ್ಪಷ್ಟಪಡಿಸಿದರು.

ಬುಧವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ನಕಲಿ ಜಾತಿ ಪ್ರಮಾಣ ಪತ್ರ ಹಗರಣದ ಕುರಿತು ಗಮನ ಸೆಳೆದಾಗ, ಅನರ್ಹರು ಜಾತಿ ಪ್ರಮಾಣ ಪತ್ರ ಪಡೆದುಕೊಂಡಿದ್ದರೆ ಅದು ತಪ್ಪು, ಯಾರೇ ಪಡೆದುಕೊಂಡಿದ್ದರೂ ಕಾನೂನಿನ ಪ್ರಕಾರ ಕ್ರಮ ಆಗುತ್ತದೆ. ಶಾಸಕ ರೇಣುಕಾಚಾರ್ಯ ಅವರ ಪುತ್ರಿಗೆ ನಕಲಿ ಜಾತಿ ಪ್ರಮಾಣ ಪತ್ರ ನೀಡಿರುವ ಬಗ್ಗೆ ಶಾಸಕ ಸ್ಪಷ್ಟನೆ ನೀಡಿದ್ದು, ನಕಲಿ ಜಾತಿ ಪ್ರಮಾಣ ಪತ್ರವನ್ನು ಪಡೆದಿಲ್ಲ ಎಂದು ತಿಳಿಸಿದ್ದಾರೆ. ಈ ಸಂಬಂಧ ಅವರು ತಪ್ಪು ಮಾಡಿದ್ದರೆ ಕಾನೂನು ಕ್ರಮಕ್ಕೆ ಒಳಪಡಲಿದ್ದಾರೆ ಎಂದರು.

ಈ ವರ್ಷ ಪ್ರತೀ ವಿಧಾನಸಭಾ ಕ್ಷೇತ್ರಕ್ಕೆ ವಿಶೇಷ ಘಟಕ ಯೋಜನೆಯಡಿ 100 ಕೊಳವೆಬಾವಿಗಳನ್ನು ಪರಿಶಿಷ್ಟಜಾತಿ, ಪಂಗಡದವರಿಗೆ ನೀಡಲಾಗುವುದು, ಹಿಂದುಳಿದ ವರ್ಗದವರಿಗೆ 14-17 ಕೊಳವೆಬಾವಿಗಳನ್ನು ನೀಡಲಾಗುವುದು ಎಂದ ಅವರು, ಕೊಳವೆಬಾವಿ ಕೊರೆದಿರುವ ಬಗ್ಗೆ ಅವ್ಯಹಾರ ಕುರಿತು ಹಿರಿಯ ಅಧಿಕಾರಿಗಳ ನಡೆಸಿರುವ ವರದಿಯನ್ನು ತರಿಸಿಕೊಂಡು ಪರಿಶೀಲಿಸಲಾಗುವುದು. ಒಂದೇ ಒಂದು ರೂ. ಹೆಚ್ಚುಕಡಿಮೆ ಆಗಿದ್ದರೆ ಅದರ ತಪ್ಪಿಗೆ ಶಿಕ್ಷೆ ಅನುಭವಿಸಲು ಸಿದ್ಧವೆಂದು ವಿಧಾನಸಭೆಯಲ್ಲಿ ಉತ್ತರಿಸಿದ್ದೇನೆ. ಆರೋಪ ಮಾಡಿರುವವರೊಂದಿಗೆ ಚರ್ಚಿಸಲು ಸಿದ್ದನಿದ್ದೇನೆ. ಆರೋಪ ಮಾಡಿದವರು ಒಂದು ಬಾರಿ ಸಚಿವರ ಪಾತ್ರವಿದೆ ಎನ್ನುತ್ತಾರೆ, ಇನ್ನೊಂದು ಬಾರಿ ಸಚಿವರ ಪಾತ್ರ ಇಲ್ಲ ಎನ್ನುತ್ತಾರೆ, ಯಾವುದು ಸತ್ಯ, ಯಾವುದು ಸುಳ್ಳು ಎಂಬ ಬಗ್ಗೆ ಗೊಂದಲವಿದೆ. ಟೀಕೆಯನ್ನು ಸತ್ಯಕ್ಕೆ ಅಪಚಾರವಾಗುವಂತೆ ಮಾಡಬಾರದು ಎಂದು ಹೇಳಿದರು.

ಕನಕದಾಸರ ಹೆಸರಿನಲ್ಲಿ ಹಿಂದುಳಿದ ವರ್ಗದವರಿಗೆ 50 ವಿದ್ಯಾರ್ಥಿನಿಲಯಗಳನ್ನು ನಿರ್ಮಿಸುತ್ತಿದ್ದು, ಪ್ರತಿಹಾಸ್ಟೆಲ್‍ಗೆ 3.50 ಕೋಟಿ ವೆಚ್ಚವಾಗಲಿದೆ. ಪರಿಶಿಷ್ಟರ ಏಳಿಗೆಗಾಗಿ ರಾಜ್ಯದಲ್ಲಿ 100 ಅಂಬೇಡ್ಕರ್ ವಸತಿನಿಲಯಗಳನ್ನು ತೆರೆಯಲಾಗುವುದು. ಹಾಸ್ಟೆಲ್ ವಿದ್ಯಾರ್ಥಿನಿಯರಿಗೆ ಆತ್ಮ ರಕ್ಷಣೆ ಕಲೆ ಕರಾಟೆಯನ್ನು ಕಲಿಸಿಕೊಡಲಾಗುತ್ತಿದೆ. ರಾಯಚೂರಿನಲ್ಲಿ ಮಗುವನ್ನು ದೇವಾಲಯದೊಳಗೆ ಪ್ರವೇಶಿಸಲು ಬಿಡದ ಪ್ರಕರಣ ಸಂಬಂದ ಮಗುನಿನ ಹೆಸರಿನಲ್ಲಿ ವಿನಯ ಸಾಮರಸ್ಯ ಯೋಜನೆ ಜಾರಿಗೊಳಿಸಿ ಅಸ್ಪೃಶ್ಯತೆ ನಿವಾರಣೆಗೆ ಯೋಜನೆ ರೂಪಿಸಲಾಗಿದೆ ಎಂದರು.

ಸಮಾಜ ಕಲ್ಯಾಣ ಇಲಾಖೆಯಡಿಯಲ್ಲಿರುವ 2408 ಹಾಸ್ಟೆಲ್‍ಗಳ ಪೈಕಿ 30ಕ್ಕೂ ಹೆಚ್ಚು ಹಾಸ್ಟೆಲ್‍ಗಳು ಬಾಡಿಗೆ ಕಟ್ಟಡದಲ್ಲಿ ನಡೆಯುತ್ತಿವೆ. ಅದಕ್ಕಾಗಿ 4-4 ಕೋಟಿ ರೂ. ವೆಚ್ಚವಾಗುತ್ತಿದೆ. ಸ್ವಂತ ಕಟ್ಟಡ ನಿರ್ಮಾಣಕ್ಕೆ ಹಂತಹಂತವಾಗಿ ಕ್ರಮವಹಿಸಲಾಗುವುದು ಎಂದ ಅವರು, ರಾಜ್ಯ ಸರಕಾರ ವಿಧಾನಸೌಧ ಪಕ್ಕದಲ್ಲಿ ಅಂಬೇಡ್ಕರ್ ಸ್ಪೂರ್ತಿಧಾಮ ನಿರ್ಮಿಸುತ್ತಿದ್ದು, ಮುಖ್ಯಮಂತ್ರಿ ಬೊಮ್ಮಾಯಿ ಅವರು ಕಟ್ಟಡ ನಿರ್ಮಾಣಕ್ಕೆ 50 ಕೋಟಿ ರೂ. ಬಿಡುಗಡೆಗೊಳಿಸಿದ್ದಾರೆಂದರು.

ಬಿಜೆಪಿ ಮುಖಂಡರಾದ ಬಿ.ರಾಜಪ್ಪ, ದೀಪಕ್ ದೊಡ್ಡಯ್ಯ, ಕನಕರಾಜ್ ಅರಸ್, ಜಾವಳಿ ಪರೀಕ್ಷಿತ್ ಈ ವೇಳೆ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X