Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಸಾಲ ಮರುಪಾವತಿಸದವರ ಪಟ್ಟಿಗೆ ಶ್ರೀಲಂಕಾ...

ಸಾಲ ಮರುಪಾವತಿಸದವರ ಪಟ್ಟಿಗೆ ಶ್ರೀಲಂಕಾ ಸೇರ್ಪಡೆಯ ಸಾಧ್ಯತೆ: ಇದರಿಂದಾಗುವ ಅನಾನುಕೂಲವೇನು ಗೊತ್ತೇ?

ವಾರ್ತಾಭಾರತಿವಾರ್ತಾಭಾರತಿ18 May 2022 11:29 PM IST
share
ಸಾಲ ಮರುಪಾವತಿಸದವರ ಪಟ್ಟಿಗೆ ಶ್ರೀಲಂಕಾ ಸೇರ್ಪಡೆಯ ಸಾಧ್ಯತೆ: ಇದರಿಂದಾಗುವ ಅನಾನುಕೂಲವೇನು ಗೊತ್ತೇ?

ಕೊಲಂಬೊ, ಮೇ 18: ಸರಕಾರಿ ಬಾಂಡ್ ಮೂಲಕ ಪಡೆದಿರುವ ಸಾಲವನ್ನು ಮರುಪಾವತಿಸಲು ನೀಡಿರುವ ಹೆಚ್ಚುವರಿ ಅವಧಿ ಬುಧವಾರ ಸಮಾಪ್ತಿಯಾಗಿರುವುದರಿಂದ ಅಂತರಾಷ್ಟ್ರೀಯ ರೇಟಿಂಗ್ ಸಂಸ್ಥೆಗಳು ಶ್ರೀಲಂಕಾವನ್ನು ಡಿಫಾಲ್ಟರ್ ಪಟ್ಟಿ(ಸಾಲ ಮರುಪಾವತಿಸದವರ ಪಟ್ಟಿ)ಗೆ ಸೇರಿಸುವ ನಿರೀಕ್ಷೆಯಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಡಿಫಾಲ್ಟರ್ ಪಟ್ಟಿಗೆ ಸೇರ್ಪಡೆಯಾದರೆ ಮುಂದಿನ ದಿನದಲ್ಲಿ ಅಂತರಾಷ್ಟ್ರೀಯ ಸಂಸ್ಥೆಗಳಿಂದ ಸಾಲ ಪಡೆಯಲು ತೊಡಕಾಗುತ್ತದೆ.

 ‌
ಈ ಮಧ್ಯೆ, ಪೆಟ್ರೋಲ್ ಸರಕು ತುಂಬಿರುವ ಹಡಗು ಮಾರ್ಚ್ 28ರಿಂದ ಕೊಲಂಬೊ ಬಂದರಿನಲ್ಲಿ ಲಂಗರು ಹಾಕಿದ್ದು ಅದರಲ್ಲಿರುವ ಪೆಟ್ರೋಲ್ ಬಿಡಿಸಿಕೊಳ್ಳಲು ಡಾಲರ್ ಮೂಲಕ ಹಣ ಪಾವತಿಸಬೇಕಿದೆ. ದೇಶದಲ್ಲಿ ವಿದೇಶಿ ವಿನಿಮಯ ದಾಸ್ತಾನು ಬರಿದಾಗಿರುವುದರಿಂದ ತೈಲದ ಕೊರತೆಯಾಗಲಿದೆ ಎಂದು ಶ್ರೀಲಂಕಾದ ಇಂಧನ ಸಚಿವ ಕಾಂಚನ ವಿಜೆಸೇಕರ ಸಂಸತ್ತಿಗೆ ತಿಳಿಸಿದ್ದಾರೆ.
 

ಸರಕಾರಿ ಬಾಂಡ್ ಮೂಲಕ ಪಡೆದ 2 ಸಾಲದ ವಾಯ್ದೆ ಎಪ್ರಿಲ್ 18ಕ್ಕೆ ಅಂತ್ಯವಾಗಿತ್ತು. ಆದರೆ ಸಾಲ ಮರುಪಾವತಿಸಲು ಸಾಧ್ಯವಾಗದು ಎಂದು ಶ್ರೀಲಂಕಾ ಹೇಳಿದ್ದರಿಂದ 1 ತಿಂಗಳ ಹೆಚ್ಚುವರಿ ಅವಕಾಶ ನೀಡಿದ್ದು ಅದೂ ಬುಧವಾರಕ್ಕೆ ಅಂತ್ಯಗೊಂಡಿದೆ. ಸಾಲ ಮರುಪಾವತಿಸಲು ವಿಫಲರಾಗಿರುವುದು ಸರಕಾರದ ರೇಟಿಂಗ್ ಮೇಲೆ ಪರಿಣಾಮ ಬೀರಲಿದೆ ಎಂದು ಎಸ್ ಆ್ಯಂಡ್ ಪಿ ಸಂಸ್ಥೆ ಹೇಳಿದೆ.

ಪೆಟ್ರೋಲ್ ಸರಕನ್ನು ಬಿಡಿಸಿಕೊಳ್ಳಲು ವಿದೇಶಿ ವಿನಿಮಯದ ಕೊರತೆಯಿದೆ. ಈ ವಾರಾಂತ್ಯದೊಳಗೆ ಸೂಕ್ತ ವ್ಯವಸ್ಥೆ ಮಾಡುವ ಭರವಸೆಯಿದೆ. ಅದುವರೆಗೆ ದೇಶದಲ್ಲಿ ಪೆಟ್ರೋಲ್‌ನ ಕೊರತೆ ಎದುರಾಗಲಿದ್ದು ಈಗ ಲಭ್ಯವಿರುವ ಅಲ್ಪಪ್ರಮಾಣದ ಪೆಟ್ರೋಲ್ ದಾಸ್ತಾನನ್ನು ಆಂಬ್ಯುಲೆನ್ಸ್‌ನಂತಹ ತುರ್ತು ಸೇವೆಗೆ ಮಾತ್ರ ಬಳಸಲು ನಿರ್ಧರಿಸಲಾಗಿದೆ ಎಂದು ಸಚಿವರು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X