Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ''ಟಿಪ್ಪು ಯಾವಾಗ ಹುಲಿಯನ್ನು ಕೊಂದಿದ್ದ...

''ಟಿಪ್ಪು ಯಾವಾಗ ಹುಲಿಯನ್ನು ಕೊಂದಿದ್ದ ಎಂದು ಹೇಳಿರುವ ಸಂಸದರು ಯಾವಾಗ ಸಿಂಹವಾಗಿದ್ದರು?''

ಪ್ರತಾಪ್ ಸಿಂಹಗೆ ಪ್ರೊ.ಬಿ.ಪಿಮಹೇಶ್ ಚಂದ್ರಗುರು ತಿರುಗೇಟು

ವಾರ್ತಾಭಾರತಿವಾರ್ತಾಭಾರತಿ20 May 2022 10:00 PM IST
share
ಟಿಪ್ಪು ಯಾವಾಗ ಹುಲಿಯನ್ನು ಕೊಂದಿದ್ದ ಎಂದು ಹೇಳಿರುವ ಸಂಸದರು ಯಾವಾಗ ಸಿಂಹವಾಗಿದ್ದರು?

ಮೈಸೂರು,ಮೇ.20: ಟಿಪ್ಪು ಸುಲ್ತಾನ್ ಯಾವಾಗ ಹುಲಿಯನ್ನು ಕೊಂದಿದ್ದ ಎಂದು ಹೇಳಿರುವ ಸಂಸದರು ಯಾವಾಗ ಸಿಂಹವಾಗಿದ್ದರು ಎಂಬ ಪ್ರಶ್ನೆಗೆ ಉತ್ತರಿಸಬೇಕಿದೆ ಎಂದು ಸಂಸದ ಪ್ರತಾಪ್ ಸಿಂಹ ವಿರುದ್ಧ ಪ್ರಗತಿಪರ ಚಿಂತಕ ಪ್ರೊ.ಬಿ.ಪಿ.ಮಹೇಶ್ ಚಂದ್ರಗುರು ತಿರುಗೇಟು ನೀಡಿದ್ದಾರೆ.

ಈ ಸಂಬಂಧ ಶುಕ್ರವಾರ ಮಾಧ್ಯಮ ಹೇಳಿಕೆ ನೀಡಿರುವ ಅವರು, 'ಭಾರತದ ಶ್ರೇಷ್ಟ ಚಿಂತಕ, ಆಡಳಿಗಾರ ಮತ್ತು ರಾಷ್ಟ್ರೀಯವಾದಿ ಟಿಪ್ಪು ಸುಲ್ತಾನ್ರವರನ್ನು ಕುರಿತ ಮೈಸೂರಿನ ಸಂಸದ ಪ್ರತಾಪ್ ಸಿಂಹ ಹೇಳಿಕೆ ಇತಿಹಾಸಕ್ಕೆ ಬಗೆದ ಅಪಚಾರ. ಟಿಪ್ಪು ಯಾವಾಗ ಹುಲಿಯನ್ನು ಕೊಂದಿದ್ದ ಎಂದು ಹೇಳಿರುವ ಸಂಸದರು ಯಾವಾಗ ಸಿಂಹವಾಗಿದ್ದರು' ಎಂಬ  ಪ್ರಶ್ನೆಗೆ ಉತ್ತರಿಸಬೇಕಿದೆ ಎಂದು ಆಗ್ರಹಿಸಿದ್ದಾರೆ.

18ನೇ ಶತಮಾನದಲ್ಲಿ ಕಾರ್ಲ್‍ಮಾರ್ಕ್ಸ್ ಮತ್ತು ಟಿಪ್ಪುಸುಲ್ತಾನ್ ಸಮಾನ ಪ್ರಗತಿಶೀಲ ವಿಚಾರಧಾರೆಗಳಿಂದ ಜಗತ್ತಿನ ಗಮನ ಸೆಳೆದ ಕ್ರಾಂತಿಕಾರಿ ಪುರುಷರು.  ಸ್ವಾತಂತ್ರ್ಯಪೂರ್ವದಲ್ಲಿ ರಾಷ್ಟ್ರೀಯವಾದಿ ಇತಿಹಾಸಕಾರರೆಂಬ ಹಣೆಪಟ್ಟಿಯನ್ನು ಹೊಂದಿ ದೇಶದ ನೈಜ ಚರಿತ್ರೆಯನ್ನು ಬದಿಗಿಟ್ಟು ಸುಳ್ಳಿನ ಸರಮಾಲೆಯನ್ನು ಇತಿಹಾಸವೆಂದು ನಮ್ಮೆಲ್ಲರ ಮೇಲೆ ಹೇರಿದ ಪಟ್ಟಭದ್ರ ಹಿತಾಸಕ್ತಿಗಳ ಹುನ್ನಾರದಿಂದ ದೇಶದ ಮೂಲನಿವಾಸಿಗಳು, ಅಲ್ಪಸಂಖ್ಯಾತರು ಮತ್ತು ಹಿಂದುಳಿದ ಸಮುದಾಯಗಳು ಬಹಳಷ್ಟು ದುರಂತಕ್ಕೆ ಗುರಿಯಾಗಿದ್ದಾರೆ. ಟಿಪ್ಪು ಮೈಸೂರಿನ ಮಹಾರಾಜರಂತೆ ಬ್ರಿಟಿಷರೊಂದಿಗೆ ರಾಜ್ಯಾಧಿಕಾರಕ್ಕಾಗಿ ಯಾವುದೇ ರಾಜಿಮಾಡಿಕೊಳ್ಳಲಿಲ್ಲ. ಪ್ರಸ್ತುತ ಸಂದರ್ಭದಲ್ಲಿ ಟಿಪ್ಪುವನ್ನು ಹಿಂದುತ್ವವಾದಿಗಳು ಮತಾಂಧವೆಂದು ತಪ್ಪಾಗಿ ಭಾವಿಸಿ ಪಠ್ಯಪುಸ್ತಕದಲ್ಲಿ ಟಿಪ್ಪುಸುಲ್ತಾನ್‍ಗೆ “ಮೈಸೂರು ಹುಲಿ” ಯೆಂಬ ಬಿರುದನ್ನು ಕೈಬಿಟ್ಟಿರುವುದು ಸರಿಯಲ್ಲ ಎಂದು ಕಿಡಿಕಾರಿದ್ದಾರೆ.

ನಾಲ್ಕನೇ ಮೈಸೂರು ಯುದ್ಧದಲ್ಲಿ ಬ್ರಿಟಿಷ್ ವಸಾಹತುವಾದಿಗಳಿಗೆ ಶರಣಾಗುವುದಕ್ಕಿಂತ ಭಾರತಕ್ಕಾಗಿ ಹುತಾತ್ಮನಾಗುವುದು ಸರ್ವಶ್ರೇಷ್ಟವೆಂಬ ದೃಢ ನಿಲುವು ತಾಳಿದರು. ಟಿಪ್ಪು ಮೇ 04, 1799ರಂದು ಶ್ರೀರಂಗಪಟ್ಟಣದಲ್ಲಿ ಬ್ರಿಟಿಷರ ವಿರುದ್ಧ ಹೋರಾಡುತ್ತಲೇ ಹುತಾತ್ಮರಾದಾಗ ಭಾರತದಲ್ಲಿ ರಾಷ್ಟ್ರೀಯತೆ ಮತ್ತು ಸ್ವಾತಂತ್ರ್ಯಗಳ ಒಂದು ಐತಿಹಾಸಿಕ ಅಧ್ಯಾಯ ಕೊನೆಗೊಂಡಿತು. ಗುಲಾಮಗಿರಿಯ ಮತ್ತೊಂದು ಕೊಳಕು ಅಧ್ಯಾಯ ಭಾರತೀಯ ಇತಿಹಾಸದಲ್ಲಿ ಪ್ರಾರಂಭವಾಯಿತು. ಟಿಪ್ಪುವಿನ ಮೃತದೇಹದತ್ತ ಧಾವಿಸಿದ ಜನರಲ್ ಹ್ಯಾರಿಸ್ “ಇಂದು ಭಾರತ ನಮ್ಮದಾಯಿತು” ಎಂದು ಕೇಕೇ ಹಾಕಿದನು. ವಸಾಹತುವಾದಿಗಳಿಗೆ ಶರಣಾದ ಮೈಸೂರು ರಾಜರು ಹುಲಿಯೇ ಅಥವಾ ದೇಶದ ಸಾರ್ವಭೌಮತ್ವಕ್ಕಾಗಿ ಪ್ರಜ್ಞಾಪೂರ್ವಕವಾಗಿ ಪ್ರಾಣಾರ್ಪಣೆ ಮಾಡಿದ ಟಿಪ್ಪು ಹುಲಿಯೇ ಎಂಬುದನ್ನು ಈಗಾಗಲೇ ಕಾಲ ನಿರ್ಧರಿಸಿದೆ. ಟಿಪ್ಪು ಭರತ ಭೂಮಿಗೆ ಕೊಟ್ಟಿದ್ದೇ ಹೆಚ್ಚು, ಪಡೆದದ್ದು ಕಡಿಮೆ ಎಂಬ ಸತ್ಯವನ್ನು ಹಿಂದುತ್ವವಾದಿಗಳ ಪ್ರಧಾನ ವಕ್ತಾರರು ಅರಿಯಬೇಕು. ಟಿಪ್ಪು ಸಾಂಸ್ಕೃತಿಕ ಬಹುತ್ವ, ಧರ್ಮ ನಿರಪೇಕ್ಷತೆ ಮತ್ತು ಮೈಸೂರು ಸಂಸ್ಥಾನದ ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡಿದ ಭಾರತೀಯ ಇತಿಹಾಸದಲ್ಲಿ ಮಹತ್ವದ ಸ್ಥಾನ ಗಳಿಸಿದ್ದಾರೆ.  

share
ವಾರ್ತಾಭಾರತಿ
ವಾರ್ತಾಭಾರತಿ
Next Story
X