Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಬಂಟ್ವಾಳ: ಏಕಲವ್ಯ ಪ್ರಶಸ್ತಿ ವಿಜೇತ...

ಬಂಟ್ವಾಳ: ಏಕಲವ್ಯ ಪ್ರಶಸ್ತಿ ವಿಜೇತ ಕಬಡ್ಡಿ ಆಟಗಾರ ಉದಯ ಚೌಟ ನಿಧನ

ವಾರ್ತಾಭಾರತಿವಾರ್ತಾಭಾರತಿ21 May 2022 10:20 AM IST
share
ಬಂಟ್ವಾಳ: ಏಕಲವ್ಯ ಪ್ರಶಸ್ತಿ ವಿಜೇತ ಕಬಡ್ಡಿ ಆಟಗಾರ ಉದಯ ಚೌಟ ನಿಧನ

ಬಂಟ್ವಾಳ: ಖ್ಯಾತ ಕಬಡ್ಡಿ ಆಟಗಾರ ಉದಯ ಚೌಟ ಅನಾರೋಗ್ಯದಿಂದಾಗಿ ಶನಿವಾರ ನಿಧನರಾದರು. 

ದೇಶದ ಪ್ರಮುಖ ಕಬಡ್ಡಿ ಆಟಗಾರರಲ್ಲಿ ಒಬ್ಬರಾದ ಉದಯ ಚೌಟ ಅವರು ಬಂಟ್ವಾಳ ತಾಲೂಕಿನ ಮಾಣಿಯ ಬದಿಗುಡ್ಡೆ ನಿವಾಸಿ.

2007ರ ದ್ವಿತೀಯ ವಿಶ್ವಕಪ್ ಕಬಡ್ಡಿ ಪಂದ್ಯಾಟದಲ್ಲಿ ಗೆಲುವು ಸಾಧಿಸಿರುವ ತಂಡದಲ್ಲಿ ಅತ್ಯುತ್ತಮ ಪ್ರಶಸ್ತಿಯನ್ನು ಉದಯ ಚೌಟ ಪಡೆದಿದ್ದರು. 

ಪ್ರಸಕ್ತ ಬ್ಯಾಂಕ್ ಆಫ್ ಬರೋಡದ ಸುರತ್ಕಲ್ ಕಚೇರಿಯಲ್ಲಿ ಉಪ ಪ್ರಬಂಧಕರಾಗಿದ್ದ ಉದಯ ಚೌಟ ಕ್ರೀಡಾ ಕೂಟದಲ್ಲಿ 8 ತಿಂಗಳ ಕಾಲ ಏರ್ ಇಂಡಿಯಾ ಮತ್ತು 10 ತಿಂಗಳ ಕಾಲ ಕೆ.ಪಿ.ಟಿ.ಎಲ್. ಉದ್ಯೋಗದಲ್ಲಿದ್ದರು. 

ಮಾಣಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣ, ಪುತ್ತೂರು ಸರಕಾರಿ ಕಾಲೇಜಿನಲ್ಲಿ ಪಿ.ಯು.ಸಿ., ಪುತ್ತೂರು ಸಂತ ಫಿಲೋಮಿನ ಕಾಲೇಜಿನಲ್ಲಿ ಪದವಿ ವ್ಯಾಸಾಂಗ ಮಾಡಿರುವ ಇವರು ವಿದ್ಯಾರ್ಥಿ ಸಮಯದಲ್ಲಿ ಕ್ರೀಡಾ ಕ್ಷೇತ್ರದಲ್ಲಿ ಅಪಾರ ಆಸಕ್ತಿ ಹೊಂದಿದ್ದರು.

ವಿದ್ಯಾಭ್ಯಾಸ ಮಾಡುತ್ತಿದ್ದಾಗಲೇ ನಾಲ್ಕು ವರ್ಷ ಅಂತರ್ ಕಾಲೇಜು ಕಬಡ್ಡಿ ಪಂದ್ಯಾಟದಲ್ಲಿ ಜಯಗಳಿಸಿದ್ದ ಉದಯ ಚೌಟ ಅವರು ಅಂತರ್ ವಿಶ್ವವಿದ್ಯಾಲಯಕ್ಕೆ ಸೌತ್ ರನ್ ಗೆ ಮಂಗಳೂರು ವಿವಿಯನ್ನು ಮೂರು ವರ್ಷಗಳ ಕಾಲ ಪ್ರತಿನಿಧಿಸಿದ್ದರು.

1993ರಲ್ಲಿ ಜ್ಯೂನಿಯರ್ ನ್ಯಾಷನಲ್ ನಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿದ ಇವರು 2000ದಿಂದ 2008ರ ವರೆಗೆ ರಾಷ್ಟ್ರೀಯ ತಂಡದಲ್ಲಿ ಇದ್ದರು.

ದಕ್ಷಿಣ ಕನ್ನಡ ಜಿಲ್ಲೆಯ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ನ ಸಂಘಟನಾ ಕಾರ್ಯದರ್ಶಿಯಾಗಿಯೂ ಸೇವೆ ಸಲ್ಲಿಸಿದ್ದಾರೆ. 

ಏಕಲವ್ಯ ಪ್ರಶಸ್ತಿ ಪಡೆದ ಜಿಲ್ಲೆಯ ಪ್ರಥಮ ಕಬಡ್ಡಿ ಆಟಗಾರ ಇವರು. 2004ರಲ್ಲಿ ಭಾರತ-ಬಾಂಗ್ಲ ಟೆಸ್ಟ್ ಕಬಡ್ಡಿ ಪಂದ್ಯಾಟದಲ್ಲಿ ಐದು ಪಂದ್ಯಗಳನ್ನು ಜಯಿಸಿ ಚಿನ್ನದ ಪದಕಗಳನ್ನು ಪಡೆದಿದ್ದರು. 

ಕ್ರೀಡೆಯಲ್ಲಿ ಅತ್ಯುತ್ತಮ ಸಾಧನೆಗೆ ಕರ್ನಾಟಕ ಸರಕಾರ ನೀಡುವ ಏಕಲವ್ಯ ಪ್ರಶಸ್ತಿಯನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ಪ್ರಥಮ ಬಾರಿಗೆ ಪಡೆದ ಹೆಗ್ಗಳಿಕೆ ಇವರದ್ದು. 

ಇಪ್ಪತ್ತು ವರ್ಷಗಳ ಕಾಲ ಕಬಡ್ಡಿ ಜೀವನದಲ್ಲಿ ಅಖಿಲ ಭಾರತ ಮಟ್ಟದಲ್ಲಿ ನೂರಕ್ಕೂ ಅಧಿಕ, ರಾಜ್ಯ ಮಟ್ಟದಲ್ಲಿ ಮುನ್ನೂರಕ್ಕೂ ಅಧಿಕ ಪಂದ್ಯಾಟದಲ್ಲಿ ಆಡಿದ್ದಾರೆ. 

ಕ್ರೀಡಾ ಕ್ಷೇತ್ರದಲ್ಲಿ ಅಭೂತಪೂರ್ವ ಸಾಧನೆಗೈದ ಉದಯ ಚೌಟ ರವರ ಅಕಾಲಿಕ ಮರಣಕ್ಕೆ ಕುಟುಂಬಸ್ಥರು, ಕಬಡ್ಡಿ ಅಭಿಮಾನಿಗಳು, ಹಲವು ಗಣ್ಯರು ಕಂಬನಿ ಮಿಡಿದಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X