Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಓ ಮೆಣಸೇ
  4. ಓ ಮೆಣಸೇ...

ಓ ಮೆಣಸೇ...

ಪಿ.ಎ.ರೈಪಿ.ಎ.ರೈ23 May 2022 12:05 AM IST
share
ಓ ಮೆಣಸೇ...

ದಲಿತ ನಾಯಕ ಸಿಎಂ ಆಗುತ್ತಾನೆ ಎಂಬ ಕನಸು ಕಾಣುವವನು ಹುಚ್ಚ  ನಾರಾಯಣಸ್ವಾಮಿ, ಕೇಂದ್ರ ಸಚಿವ
ಇದೂ ಅಚ್ಛೇ ದಿನ್ ಹಾಗೆ ಇನ್ನೊಂದು ಜುಮ್ಲಾ ಅಲ್ಲವೇ?

ಬಿಜೆಪಿಯನ್ನು ಸೋಲಿಸಲು ಕಾಂಗ್ರೆಸ್‌ಗೆ ಮಾತ್ರ ಸಾಧ್ಯ - ರಾಹುಲ್ ಗಾಂಧಿ, ಕಾಂಗ್ರೆಸ್ ಮುಖಂಡ
ಇರಬಹುದು. ಬಿಜೆಪಿ ಸೋತಲ್ಲೂ ಬಿಜೆಪಿ ಸರಕಾರ ತರುವುದು ಕಾಂಗ್ರೆಸ್‌ಗೆ ಮಾತ್ರ ಸಾಧ್ಯ.

ಕಾಂಗ್ರೆಸ್ ಬಾಲ ಅಲ್ಲಾಡಿಸುತ್ತಿರುವುದು ಕರ್ನಾಟಕದಲ್ಲಿ ಮಾತ್ರ - ರಘುಪತಿ ಭಟ್, ಶಾಸಕ
ಈಗ ಆ ಬಾಲ ಬಂದು ನಿಮ್ಮ ಪಕ್ಕದಲ್ಲಿ ಕುಳಿತು ತಲೆ ಆಗಿದೆಯಲ್ಲ...

ಈ ಬಾರಿ ಯಾವ ಸೋಂಕಿನ ಕಾಟವೂ ಇಲ್ಲದ ಕಾರಣ ಪೋಷಕರು ತಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸಬೇಕು - ಬಿ.ಸಿ.ನಾಗೇಶ್, ಸಚಿವ
ಈಗ ಎಲ್ಲಾ ಪೋಷಕರಿಗೆ ಲಸಿಕೆ ಇಲ್ಲದ ಕೋಮು ಸೋಂಕಿನದ್ದೇ ಚಿಂತೆ ಸರ್.

ರಾಜಕಾರಣಿಗಳಿಗಿಂತ ಮೂರ್ಖರು ಯಾರೂ ಇಲ್ಲ - ಕುಂ.ವೀರಭದ್ರಪ್ಪ, ಸಾಹಿತಿ
ಮೂರ್ಖರು ತೀರಾ ಬೇಜಾರು ಮಾಡಿಕೊಳ್ಳುವ ಹೋಲಿಕೆ ಇದು

ಬಿಜೆಪಿಯಲ್ಲಿರುವ ಎಲ್ಲರೂ ಕೋಮುವಾದಿಗಳಲ್ಲ - ರಮೇಶ್ ಕುಮಾರ್, ಮಾಜಿ ಸಭಾಪತಿ
ಹೌದು. ಕಾಂಗ್ರೆಸ್‌ನಲ್ಲೂ ಎಲ್ಲರೂ ಕೋಮುವಾದಿಗಳಲ್ಲ.

ಒಬ್ಬ ಕಾಮನ್ ಮ್ಯಾನ್ ಮುಖ್ಯಮಂತ್ರಿಯಾಗಿ ಸಿಎಂ ಬೊಮ್ಮಾಯಿ ಜನರಿಗೆ ಹತ್ತಿರವಾಗುತ್ತಿದ್ದಾರೆ - ಪ್ರಹ್ಲಾದ್ ಜೋಶಿ, ಕೇಂದ್ರ ಸಚಿವ
ನೀವು ಹೇಳುತ್ತಿರುವುದರಿಂದ ಇದು ಕಂಪ್ಲೆಂಟೋ, ಕಾಂಪ್ಲಿಮೆಂಟೋ ಎಂಬ ಗೊಂದಲದಲ್ಲಿದ್ದಾರೆ ಅವರು.

ಬದಲಾವಣೆಗಾಗಿ ಬಿಜೆಪಿಗೆ ಸೇರಿದೆೆ - ಬಸವರಾಜ ಹೊರಟ್ಟಿ, ವಿ.ಪ. ಮಾಜಿ ಸಭಾಪತಿ
ಕನಿಷ್ಠ ಹೇಳಿಕೆಯಲ್ಲಾದರೂ ಏನಾದರೂ ಬದಲಾವಣೆ ಮಾಡಿಕೊಳ್ಳಬಹುದಿತ್ತು.

ಕೇಂದ್ರ ಸಚಿವ ಅಮಿತ್ ಶಾ ಸುಳ್ಳರ ಬಾದ್‌ಶಾ - ಕೆ.ಟಿ.ರಾಮ್‌ರಾವ್, ತೆಲಂಗಾಣ ಸಚಿವ
ಅವರು ನಿಮ್ಮ ಪಾಲಿನ ಬಾದ್‌ಶಾ ಆಗಲು ಯಾವ ಚುನಾವಣೆ ಬರಬೇಕು?

ಅದೆಷ್ಟು ಬಾರಿ ನನ್ನ ಮೇಲೆ ಸಿಬಿಐ ದಾಳಿ ಆಗಿದೆಯೋ ನನಗೆ ಎಣಿಕೆಯೇ ಸಿಗುತ್ತಿಲ್ಲ - ಕಾರ್ತಿ ಚಿದಂಬರಂ, ಚಿದಂಬರಂ ಪುತ್ರ
ನಿಮ್ಮ ಸಂಪತ್ತಿನ ಲೆಕ್ಕ ಹಾಕಿದ ಮೇಲೆ ಸಿಬಿಐನವರು ಹೀಗೇ ಹೇಳುತ್ತಿದ್ದಾರಲ್ಲ....

ಸರಕಾರ ರಸ್ತೆಗಳ ಅಭಿವೃದ್ಧಿಗೆ ಗರಿಷ್ಠ ಮೊತ್ತದ ಅನುದಾನ ನೀಡುತ್ತಿದೆ - ಸುನೀಲ್ ಕುಮಾರ್, ಸಚಿವ
ಈಗ ಸಂಶಯ ಇರುವುದು ಅದರಿಂದ ಯಾರ ಅಭಿವೃದ್ಧಿ ಆಗುತ್ತಿದೆ ಎಂಬುವುದರ ಬಗ್ಗೆ ಮಾತ್ರ.

ಅಸ್ಪಶ್ಯತೆ ತೊಡೆದು ಹಾಕಲು ‘ವಿನಯ ಸಾಮರಸ್ಯ’ ಎಂಬ ಕಾರ್ಯಕ್ರಮವನ್ನು ಅಭಿಯಾನದ ರೀತಿಯಲ್ಲಿ ಹಮ್ಮಿಕೊಳ್ಳಲಾಗುವುದು -ಕೋಟ ಶ್ರೀನಿವಾಸ ಪೂಜಾರಿ, ಸಚಿವ
ಈ ಕಾರ್ಯಕ್ರಮದಲ್ಲಿ ಅಸ್ಪಶ್ಯರಿಗೆ ಪ್ರತ್ಯೇಕ ಆಸನ ಕಲ್ಪಿಸಲು ಎಷ್ಟು ಕೋಟಿ ಖರ್ಚು ಮಾಡಲಾಗುವುದು?

ನಾನು ನಾಟಕ ಮಾಡಿ ರಾಜಕಾರಣ ಮಾಡಿದ್ದರೆ ಯಾವಾಗಲೋ ಮುಖ್ಯಮಂತ್ರಿಯಾಗುತ್ತಿದ್ದೆೆ - ಬಸನಗೌಡ ಪಾಟೀಲ್ ಯತ್ನಾಳ್, ಶಾಸಕ
ನೀವು ಮುಖ್ಯಮಂತ್ರಿಯಂತೆ ನಾಟಕ ಮಾಡಲು ಪ್ರಾರಂಭಿಸಿ ಹಲವು ವರ್ಷಗಳಾದವು.

ರಾಜ್ಯ ಸರಕಾರ ಗೂಂಡಾಗಿರಿಯನ್ನು ವಿವಿಧ ಸಂಘಸಂಸ್ಥೆಗಳಿಗೆ ಹೊರಗುತ್ತಿಗೆ ಕೊಟ್ಟಿರುವಂತೆ ಕಾಣುತ್ತಿದೆ - ಯು.ಟಿ.ಖಾದರ್, ಶಾಸಕ
ನಿಮ್ಮ ಸರಕಾರ ಇರುವಾಗ ಕೊಟ್ಟಿದ್ದ ಗುತ್ತಿಗೆಯನ್ನು ನವೀಕರಿಸಿದ್ದೇವೆ ಅಷ್ಟೇ ಎನ್ನುತ್ತಿದ್ದಾರೆ ಅವರು.

ಕಾಂಗ್ರೆಸ್‌ನ ಒಂದು ಕುಟುಂಬಕ್ಕೆ ಒಂದೇ ಟಿಕೆಟ್ ನಿಯಮ ತೀರಾ ಹಾಸ್ಯಾಸ್ಪದ - ಕುಮಾರಸ್ವಾಮಿ, ಮಾಜಿ ಸಿಎಂ
ಇಡೀ ಪಕ್ಷ ಒಂದೇ ಕುಟುಂಬದ ಒಳಗಿದ್ದರೆ ಈ ನಿಯಮ ನಿಜಕ್ಕೂ ಹಾಸ್ಯಾಸ್ಪದ.

ಹೆಡಗೆವಾರ್ ಆರೆಸ್ಸೆಸ್‌ನ್ನು ಸ್ಥಾಪನೆ ಮಾಡಿದ್ದರಿಂದಲೇ ಇಂದು ದೇಶ ಭಕ್ತರ ಸಂಖ್ಯೆ ಹೆಚ್ಚಾಗಿದೆ -ಕೆ.ಎಸ್. ಈಶ್ವರಪ್ಪ, ಶಾಸಕ
40 ಶೇ. ಕಮಿಷನ್‌ನ ದ್ವೇಷ ಭಕ್ತರು!

ಬಸವರಾಜ ಹೊರಟ್ಟಿ ಅವರ ಸೇರ್ಪಡೆಯಿಂದ ಬಿಜೆಪಿಗೆ ಆನೆ ಬಲ ಬಂದಿದೆ - ಬಸವರಾಜ ಬೊಮ್ಮಾಯಿ, ಮುಖ್ಯಮಂತ್ರಿ
ಗೋಸುಂಬೆ ಆನೆಯ ಹಾಗೆ ಬಣ್ಣ ಬದಲಾಯಿಸಲು ಸಾಧ್ಯವೇ?

ಪೊಲೀಸರು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗುವುದನ್ನು ಸಹಿಸುವುದಿಲ್ಲ - ಆರಗ ಜ್ಞಾನೇಂದ್ರ, ಸಚಿವ
ಪೊಲೀಸರು ಪೊಲೀಸರ ಕೆಲಸ ಮಾಡಿದರೂ ನೀವು ಸಹಿಸುವುದಿಲ್ಲ ಎಂಬುವುದು ಇತ್ತೀಚೆಗೆ ಆಗಾಗ ಸಾಬೀತಾಗುತ್ತಿದೆ.

ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಹುಲ್‌ಗಾಂಧಿಯವರೇ ಆದ್ಯತೆಯ ಆಯ್ಕೆಯಾಗಿದ್ದಾರೆ - ಶಶಿ ತರೂರು, ಕಾಂಗ್ರೆಸ್ ನಾಯಕ
ಹೀಗೆ ವಾರಕ್ಕೆ ಎಷ್ಟು ಬಾರಿ ಹೇಳುವುದು ನಿಮಗೆ ಅನಿವಾರ್ಯ?

ಪಕ್ಷದ ಪ್ರತಿಯೊಂದು ಸ್ಥಾನವನ್ನು 50 ವರ್ಷದ ಒಳಗಿನವರಿಗೆ ನೀಡಬೇಕು ಎಂದು ಸಂಕಲ್ಪ ಮಾಡಲಾಗಿದೆ - ಡಿ.ಕೆ.ಶಿವಕುಮಾರ್, ಕೆಪಿಸಿಸಿ ಅಧ್ಯಕ್ಷ
ಹಾಗಾದರೆ ಕೆಪಿಸಿಸಿಗೆ ಹೊಸ ಅಧ್ಯಕ್ಷರು ಯಾರು?

ನಾನು ರಾಜ್ಯ ರಾಜಕಾರಣಕ್ಕೆ ಮರಳುತ್ತೇನೆ ಎಂಬುದು ಕೇವಲ ಉಹಾಪೋಹ - ಶೋಭಾ ಕರಂದ್ಲಾಜೆ , ಕೇಂದ್ರ ಸಚಿವೆ
ನೀವು ಸಂಸದೆ, ಕೇಂದ್ರ ಸಚಿವೆ ಆಗಿದ್ದೀರಿ ಎಂಬುವುದೇ ಊಹಾಪೋಹ ಎಂಬುವುದು ಜನರ ಅಭಿಪ್ರಾಯ.

ಪಕ್ಷ ಯಾರಿಗೆ ಟಿಕೆಟ್ ನೀಡಿದರೂ ಅವರ ಗೆಲುವಿಗೆ ಶ್ರಮಿಸುತ್ತೇನೆ - ಜಗದೀಶ್ ಶೆಟ್ಟರ್, ಮಾಜಿ ಸಿಎಂ
ನಿಮಗೆ ಈ ವಯಸ್ಸಲ್ಲಿ ಹೆಚ್ಚು ಶ್ರಮ ನೀಡಬಾರದು ಎಂಬುವುದು ಪಕ್ಷದ ಕಾಳಜಿ!

ವಿಶ್ವವಿದ್ಯಾನಿಲಯಗಳು ಸೈದ್ಧಾಂತಿಕ ಬಿಕ್ಕಟ್ಟಿನ ತಾಣಗಳಾಗಬಾರದು - ಅಮಿತ್ ಶಾ, ಕೇಂದ್ರ ಸಚಿವ
ಅವುಗಳೇನಿದ್ದರೂ ಹೊಡಿಬಡಿ ತಾಣಗಳಾಗಬೇಕು ಎಂಬುವುದು ನಿಮ್ಮ ಅಲಿಖಿತ ನಿಯಮವಲ್ಲವೇ?

share
ಪಿ.ಎ.ರೈ
ಪಿ.ಎ.ರೈ
Next Story
X