Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮದುವೆ ಸಮಾರಂಭದಲ್ಲಿ ಕಳಚಿದ ವರನ...

ಮದುವೆ ಸಮಾರಂಭದಲ್ಲಿ ಕಳಚಿದ ವರನ 'ವಿಗ್‌': ಬೋಳು ತಲೆಯ ಕಾರಣಕ್ಕೆ ವಿವಾಹವನ್ನೇ ರದ್ದು ಪಡಿಸಿದ ವಧು !

ವಾರ್ತಾಭಾರತಿವಾರ್ತಾಭಾರತಿ23 May 2022 7:55 PM IST
share
ಮದುವೆ ಸಮಾರಂಭದಲ್ಲಿ ಕಳಚಿದ ವರನ ವಿಗ್‌: ಬೋಳು ತಲೆಯ ಕಾರಣಕ್ಕೆ ವಿವಾಹವನ್ನೇ ರದ್ದು ಪಡಿಸಿದ ವಧು !

ಲಖ್ನೋ: ಉತ್ತರ ಪ್ರದೇಶದ ಉನ್ನಾವೊ ಜಿಲ್ಲೆಯಲ್ಲಿ ವರ ಬೋಳು ತಲೆಯೆಂದು ಮದುವೆ ಕಾರ್ಯಕ್ರಮವೇ ಅರ್ಧದಲ್ಲಿ ರದ್ದಾದ ಪ್ರಕರಣ ನಡೆದಿದೆ. ಬೋಳು ತಲೆಯ ವರನನ್ನು ವರಿಸಲು ವಧು ತಯಾರಾಗದ ಕಾರಣ ಮದುವೆ ಅರ್ಧಕ್ಕೆ ನಿಂತಿದೆ ಎಂದು news18 ವರದಿ ಮಾಡಿದೆ. 

 ಮದುವೆ ಸಂಪ್ರದಾಯದ ಸುಮಾರು ಅರ್ಧದಷ್ಟು ವಿಧಿ ವಿಧಾನಗಳು ಪೂರ್ತಿಗೊಂಡಿತ್ತು. ವರ ಏಳು ಸುತ್ತು ಬರುವಷ್ಟರಲ್ಲಿ ತಲೆಸುತ್ತು ಬಂದು ಪ್ರಜ್ಞೆ ತಪ್ಪಿ ಬಿದ್ದಿದ್ದು, ಅಷ್ಟರಲ್ಲಿ ವಧುವಿನ ಸಹೋದರ ವರನ ಮುಖ ಮತ್ತು ತಲೆಯ ಮೇಲೆ ನೀರು ಚಿಮುಕಿಸಿ ಎಚ್ಚರಿಸಲು ನೋಡಿದ್ದಾರೆ, ಈ ವೇಳ ವರನ ತಲೆಯಿಂದ ಕೂದಲಿನ ವಿಗ್ ಕಳಚಿದೆ. ಇದನ್ನು ಕಂಡು ಅಲ್ಲಿದ್ದವರು ನಕ್ಕಿದ್ದು, ವಧುವಿನ ಕಡೆಯವರು ವರನ ಕುಟುಂಬ ನಮ್ಮನ್ನು ವಂಚಿಸಿದೆ ಎಂದು ಆರೋಪಿಸಿದೆ. ಇದಾದ ನಂತರ ವಧು ಮದುವೆಯಾಗಲು ನಿರಾಕರಿಸಿದ್ದಾರೆ.

ಈ ನಡುವೆ ಎರಡೂ ಕಡೆಯವರ ನಡುವೆ ವಾಗ್ವಾದಗಳೂ ಕೂಡ ನಡೆದಿದೆ. ಆದರೆ, ಜನರು ಮಧ್ಯ ಪ್ರವೇಶಿಸಿ ಮಾತುಕತೆ ನಡೆಸಿದ್ದು, ಸ್ಥಳೀಯ ಪೊಲೀಸರಿಗೆ ವಿಷಯ ತಿಳಿಸಲಾಯಿತು.  ಕೊನೆಗೆ ಪೊಲೀಸರ ಸಮ್ಮುಖದಲ್ಲಿ ರಾಜಿ ಪಂಚಾಯಿತಿಗೆ ಎರಡೂ ಕುಟುಂಬ ಹೋಗಿದ್ದು, ಅಲ್ಲೂ ವಧುವನ್ನು ಮನವೊಲಿಸಲು ಪ್ರಯತ್ನಿಸಲಾಯಿತು ಎಂದು ವರದಯಾಗಿದೆ. ಆದರೆ, ವಧು ಯಾವ ಕಾರಣಕ್ಕೂ ಮದುವೆಗೆ ಒಪ್ಪದ ಕಾರಣ, ಕೊನೆಗೆ ಮದುವೆ ಬಿದ್ದಿದೆ. 

 ವರ ಬೋಳು ತಲೆಯವನು ಎಂದು ಮೊದಲೇ ತಿಳಿಸದೆ ಇದ್ದಿದ್ದು ಇಷ್ಟೆಲ್ಲಾ ರಾದ್ಧಾಂತಕ್ಕೆ ಕಾರಣ ಎಂದು ವಧುವಿನ ಚಿಕ್ಕಪ್ಪ ಹೇಳಿದ್ದಾರೆ. ಮೊದಲೇ ತಿಳಿಸಿದ್ದಿದ್ದರೆ, ಮಗಳ ಮನವೊಲಿಸಿ, ಆಕೆಯನ್ನು ಸಿದ್ದಗೊಳಿಸುತ್ತಿದ್ದೆವು. ಆದರೆ, ಏಕಾಏಕಿ ವಿಗ್‌ ಕಳಚಿರುವುದು ಆಕೆಯ ಆಘಾತಕ್ಕೆ ಕಾರಣವಾಗಿದೆ, ಅವಳಿಗೆ ಮೋಸ ಹೋದ ಅನುಭವ ಆಗಿದೆ ಎಂದು ಅವರು ಹೇಳಿರುವುದಾಗಿ new18 ವರದಿ ಮಾಡಿದೆ. 

ಇನ್ನು, ಮದುವೆಗೆ ಖರ್ಚಾದ 5 ಲಕ್ಷದ 60 ಸಾವಿರ ರುಪಾಯಿಯನ್ನೂ ವಧುವಿನ ಕುಟುಂಬ ವರನಿಂದ ವಸೂಲಿ ಮಾಡಿದೆ. ಪೊಲೀಸರ ಸಮ್ಮುಖದಲ್ಲಿ ಈ ಬಗ್ಗೆ ಲಿಖಿತ ಒಪ್ಪಂದವಾಗಿದೆ ಎಂದು ವರದಿಯಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X