Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕೊರಗ ಸಮುದಾಯದ ಅಖಿಲೇಶ್‌ಗೆ...

ಕೊರಗ ಸಮುದಾಯದ ಅಖಿಲೇಶ್‌ಗೆ ಎಸೆಸೆಲ್ಸಿಯಲ್ಲಿ 602 ಅಂಕ; ಇಂಜಿನಿಯರ್ ಆಗುವ ಗುರಿ

ಸಾಧನೆಗೆ ಕೂಲಿಕಾರ ತಂದೆ ತಾಯಿ ಸಾಥ್

ವಾರ್ತಾಭಾರತಿವಾರ್ತಾಭಾರತಿ24 May 2022 8:03 PM IST
share
ಕೊರಗ ಸಮುದಾಯದ ಅಖಿಲೇಶ್‌ಗೆ ಎಸೆಸೆಲ್ಸಿಯಲ್ಲಿ 602 ಅಂಕ; ಇಂಜಿನಿಯರ್ ಆಗುವ ಗುರಿ

ಕುಂದಾಪುರ: ಅಂಚಿಗೆ ತಳ್ಳಲ್ಪಟ ಕೊರಗ ಸಮುದಾಯದ ಕೂಲಿ ಕಾರ ಕುಟುಂಬದಿಂದ ಬಂದ ಆಲೂರು ಸರಕಾರಿ ಪೌಢ ಶಾಲೆಯ ವಿದ್ಯಾರ್ಥಿ ಅಖಿಲೇಶ್, ಯಾವುದೇ ಟ್ಯೂಷನ್, ಕೋಚಿಂಗ್ ಪಡೆಯದೆ ಈ ಬಾರಿಯ ಎಸೆಸೆಲ್ಸಿ ಪರೀಕ್ಷೆಯಲ್ಲಿ 602(ಶೇ.96.32) ಅಂಕ ಪಡೆಯುವ ಮೂಲಕ ಸಾಧನೆ ಮಾಡಿದ್ದಾರೆ.

ಆಲೂರು ಗ್ರಾಮದ ನವ ಗ್ರಾಮ ಕಾಲನಿಯ ನಿವಾಸಿ ಗಣೇಶ ಮತ್ತು ಮಾಲತಿ ದಂಪತಿ ಮಗ ಅಖಿಲೇಶ್, ಸ್ವಂತ ಪರಿಶ್ರಮದಿಂದ ಈ ಅಪ್ರತಿಮ ಸಾಧನೆ ಮಾಡಿದ್ದಾರೆ. ಗಣೇಶ ಆಲೂರು ಕಲ್ಲು ಗಣಿಯಲ್ಲಿ ಕಾರ್ಮಿಕರಾಗಿ ದುಡಿದು ಕುಟುಂಬ ನಿರ್ವಹಣೆ, ಮಕ್ಕಳ ಶಿಕ್ಷಣ, ಹದಗೆಟ್ಟ ತಾಯಿಯ ಆರೋಗ್ಯ ನೋಡಿಕೊಂಡರೆ, ಮಾಲತಿ ಗೇರು ಬೀಜ ಸಂಸ್ಕರಣೆ ಕೆಲಸ ಮಾಡುತ್ತಾ ಮಕ್ಕಳಿಗೆ ನೆರವಾಗುತ್ತಿದ್ದಾರೆ.

ಮುಂದೆ ಪಿಯುಸಿಯಲ್ಲಿ ಪಿಸಿಎಂಸಿ ವಿಭಾಗದಲ್ಲಿ ಮುಂದುವರೆದು ಇಂಜಿನಿಯರ್ ಆಗುವ ಗುರಿ ಹೊಂದಿದ್ದೇನೆ. ಮನೆಮಂದಿ ಏಳುವ ಮುಂಚೆಯೇ ಬೆಳಗಿನ ಜಾವ ಮೂರು ಗಂಟೆಗೆ ಎದ್ದು ಓದುತ್ತಿದ್ದೆ. ಸಂಜೆಯೂ ಕೂಡ ಓದುತ್ತಿದ್ದೆ. ಶಾಲಾ ಪಾಠ, ಶಿಕ್ಷಕರ ಹೊರತಾಗಿ ಯಾರ ಸಹಕಾರ ಪಡೆಯದೆ ಎಸೆಸೆಲ್ಸಿ ಮುಗಿಸಿದ್ದೇನೆ ಎಂದು ಅಖಿಲೇಶ್ ತಿಳಿಸಿದ್ದಾರೆ. ಅಖಿಲೇಶ್ ಉಡುಪಿ ಜಿಲ್ಲೆಯ ಕೊರಗ ಸಮುದಾಯದಲ್ಲಿ ಈವರೆಗೆ ಅತ್ಯಧಿಕ ಅಂಕ ಗಳಿಸಿದ ವಿದ್ಯಾರ್ಥಿ ಎಂಬ ಕೀರ್ತಿ ಭಾಜನರಾಗಿದ್ದಾರೆ.

ಸಾಧಕ ವಿದ್ಯಾರ್ಥಿಗೆ ಸನ್ಮಾನ

ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಜಿಲ್ಲಾ ಸಂಘಟನೆ ಆಶ್ರಯದಲ್ಲಿ ಆಲೂರು ಹಾಡಿಮನೆ ವಠಾರದಲ್ಲಿ ಮಂಗಳವಾರ ಆಯೋಜಿಸ ಲಾದ ಕಾರ್ಯಕ್ರಮದಲ್ಲಿ ಕೊರಗ ಸಮಾಜದ ಪ್ರತಿಭಾವಂತ ವಿದ್ಯಾರ್ಥಿ ಅಖಿಲೇಶ್ ಅವರನ್ನು ಆಲೂರು ಗ್ರಾಪಂ ಉಪಾಧ್ಯಕ್ಷ ರವಿ ಶೆಟ್ಟಿ ಸನ್ಮಾನಿಸಿದರು.

ಸಮಿತಿಯ ಜಿಲ್ಲಾ ಸಂಘಟನೆ ಅಧ್ಯಕ್ಷ ಶ್ರೀಧರ ನಾಡಾ ಮಾತನಾಡಿ, ಕೊರಗ ಸಮುದಾಯ ಅಳಿವಿನಂಚಿನಲ್ಲಿದ್ದು ಸರಕಾರ ಹಾಗೂ ಬೇರೆ ವರ್ಗದವರು ಸಮುದಾಯಕ್ಕೆ ವಿಶೇಷ ಮಾನ್ಯತೆ ನೀಡಬೇಕು. ಕೊರಗ ಸಮಾಜ ಅವನತಿ ಹಾದಿಯಲ್ಲಿರುವಾಗಲೇ ಎಸೆಸೆಲ್ಸಿ ಪರೀಕ್ಷೆಯಲ್ಲಿ ಕೊರಗ ಸಮುದಾಯದ ಯುವಕ ಅತ್ಯುತ್ತಮ ಅಂಕ ಪಡೆದು ಉತ್ತೀರ್ಣನಾಗುವ ಮೂಲಕ ಸಮಾಜದಲ್ಲಿ ಶೈಕ್ಷಣಿಕ ಭರವಸೆ ಮೂಡಿಸಿದ್ದಾನೆ ಎಂದು ಹೇಳಿದರು.

ವಂಡ್ಸೆ ಗ್ರಾಪಂ ಮಾಜಿ ಸದಸ್ಯ ಗುಂಡು ಪೂಜಾರಿ, ಅಖಿಲೇಶ್‌ಗೆ 10 ಸಾವಿರ ನಗದು ಪ್ರೋತ್ಸಾಹ ಧನ ಘೋಷಿಸಿದರು. ಆಲೂರು ಗ್ರಾಪಂ ಸದಸ್ಯ ರಾಜೇಶ್ ದೇವಾಡಿಗ, ಅಖಿಲೇಶ್ ತಂದೆ ಗಣೇಶ್ ಉಪಸ್ಥಿತರಿದ್ದರು.

"ನಾನು 8ನೇ ತರಗತಿ ಓದಿದ್ದು ಕಷ್ಟದ ಹಿನ್ನೆಲೆ ಅರ್ಧಕ್ಕೆ ಶಾಲೆ ಬಿಡುವಂತಾಯಿತು. ನನ್ನ ಹಾಗೆ ನನ್ನ ಮಕ್ಕಳಾಗಬಾರದೆಂದು ಅವರಿಗೆ ಉತ್ತಮ ಶಿಕ್ಷಣ ನೀಡುವ ಯೋಚನೆಯಿದೆ. ಮಗ ಓದಿದರೆ ನನಗೆ ಖುಷಿ. ಅವನ ಚಿಂತನೆಯಂತೆ ಅಗತ್ಯ ಶಿಕ್ಷಣ ನೀಡುತ್ತೇನೆ".
-ಗಣೇಶ್, ಅಖಿಲೇಶ್ ತಂದೆ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X