Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಉಕ್ರೇನ್ ಗೆ 20 ದೇಶಗಳಿಂದ ಶಸ್ತ್ರಾಸ್ತ್ರ...

ಉಕ್ರೇನ್ ಗೆ 20 ದೇಶಗಳಿಂದ ಶಸ್ತ್ರಾಸ್ತ್ರ ನೆರವಿನ ಘೋಷಣೆ

ವಾರ್ತಾಭಾರತಿವಾರ್ತಾಭಾರತಿ24 May 2022 11:18 PM IST
share
ಉಕ್ರೇನ್ ಗೆ 20 ದೇಶಗಳಿಂದ ಶಸ್ತ್ರಾಸ್ತ್ರ ನೆರವಿನ ಘೋಷಣೆ

ವಾಷಿಂಗ್ಟನ್, ಮೇ 24: ಸೋಮವಾರ ನಡೆದ ಮಿತ್ರರಾಷ್ಟ್ರಗಳ ಸಭೆಯಲ್ಲಿ, ರಶ್ಯದ ಆಕ್ರಮಣವನ್ನು ಎದುರಿಸಲು ಉಕ್ರೇನ್ ಗೆ ಕ್ಷಿಪಣಿ, ಹೆಲಿಕಾಪ್ಟರ್ ಸಹಿತ ಶಸ್ತ್ರಾಸ್ತ್ರಗಳನ್ನು ಒದಗಿಸಲು 20 ದೇಶಗಳು ಮುಂದೆ ಬಂದಿವೆ ಎಂದು ಅಮೆರಿಕದ ರಕ್ಷಣಾ ಕಾರ್ಯದರ್ಶಿ ಲಾಯ್ಡ್ ಆಸ್ಟಿನ್ ಘೋಷಿಸಿದ್ದಾರೆ. ಉಕ್ರೇನ್ ರಕ್ಷಣಾ ಸಂಪರ್ಕ ಗುಂಪು ಎಂದು ಹೆಸರಿಸಲಾಗಿರುವ ಸಂಘಟನೆಯ ಸದಸ್ಯ ದೇಶಗಳ ಪ್ರತಿನಿಧಿಗಳು ಆನ್ ಲೈನ್ ಮೂಲಕ ನಡೆದ ಸಭೆಯಲ್ಲಿ ಪಾಲ್ಗೊಂಡು ಉಕ್ರೇನ್ ಗೆ ನೆರವು ಒದಗಿಸುವ ಬಗ್ಗೆ ಚರ್ಚೆ ನಡೆಸಿವೆ.

 20 ದೇಶಗಳು ಶಸ್ತ್ರಾಸ್ತ್ರ, ಸೇನಾ ಉಪಕರಣ, ಟ್ಯಾಂಕ್ ಗಳು, ಹೆಲಿಕಾಪ್ಟರ್ ಗಳು, ತಟ ರಕ್ಷಣಾ ವ್ಯವಸ್ಥೆ ಸಹಿತ ಶಸ್ತ್ರಾಸ್ತ್ರ ನೆರವಿನ ವಾಗ್ದಾನ ಮಾಡಿವೆ. ಇತರರು ಉಕ್ರೇನ್ ಯೋಧರಿಗೆ ತರಬೇತಿ ಒದಗಿಸುವುದಾಗಿ ಘೋಷಿಸಿದ್ದಾರೆ. 3 ತಿಂಗಳಿಂದ ನಡೆಯುತ್ತಿರುವ ಯುದ್ಧದ ಇತ್ತೀಚಿನ ಸ್ಥಿತಿಗತಿಯ ಬಗ್ಗೆ ಉಕ್ರೇನ್ ರಕ್ಷಣಾ ಸಚಿವ ಒಲೆಕ್ಸಿಯ್ ರೆಝ್ನಿಕೋವ್ ಸಭೆಗೆ ವಿವರಿಸಿದರು ಎಂದು ಆಸ್ಟಿನ್ ಹೇಳಿದ್ದಾರೆ. ಹಡಗು ನಿರೋಧಕ ಹಾರ್ಪೂನ್ ಕ್ಷಿಪಣಿ ವ್ಯವಸ್ಥೆ ಒದಗಿಸುವುದಾಗಿ ಡೆನ್ಮಾರ್ಕ್ ವಾಗ್ದಾನ ಮಾಡಿದೆ. ದಾಳಿ ಹೆಲಿಕಾಪ್ಟರ್, ಟ್ಯಾಂಕ್ ಗಳು ಹಾಗೂ ರಾಕೆಟ್ ವ್ಯವಸ್ಥೆಗಳನ್ನು ಝೆಕ್ ಗಣರಾಜ್ಯ ಒದಗಿಸಲಿದೆ. ಹಾರ್ಪೂನ್ ಕ್ಷಿಪಣಿ ದಡದಿಂದ 300 ಕಿ.ಮೀ ದೂರದಲ್ಲಿರುವ ಹಡಗುಗಳನ್ನು ಧ್ವಂಸ ಮಾಡುವ ಸಾಮರ್ಥ್ಯ ಹೊಂದಿದೆ. ಇವುಗಳನ್ನು ಕಪ್ಪು ಸಮುದ್ರದಲ್ಲಿರುವ ಉಕ್ರೇನ್ ನ ಒಡೆಸಾ ಬಂದರಿನಲ್ಲಿ ನಿಯೋಜಿಸಲಾಗುವುದು. ಈ ಕ್ಷಿಪಣಿಗಳು ರಶ್ಯದ ಕೆಲವು ನೌಕೆಗಳು ಲಂಗರು ಹಾಕಿರುವ ಸೆವಾಸ್ಟೊಪೊಲ್ ಬಂದರಿನ ಉದ್ದೇಶಿತ ಗುರಿಯನ್ನು ತಲುಪುವ ಸಾಮರ್ಥ್ಯ ಹೊಂದಿದೆ ಎಂದವರು ಹೇಳಿದ್ದಾರೆ. 

4 ವಾರದ ಹಿಂದೆ ಜರ್ಮನ್ ನಲ್ಲಿರುವ ಅಮೆರಿಕದ ಸೇನಾ ನೆಲೆಯಲ್ಲಿ ಶಸ್ತ್ರಾಸ್ತ್ರ ಕೊಡುಗೆದಾರರ ಗುಂಪಿನ ಪ್ರಥಮ ಸಭೆಯ ಬಳಿಕ ದೇಣಿಗೆ ಹಾಗೂ ಪೂರೈಕೆಗೆ ಹೆಚ್ಚಿನ ವೇಗ ದೊರಕಿದೆ. ಯುದ್ಧವು ಈಗ ಫಿರಂಗಿಗಳಿಂದ ನಡೆಯುತ್ತಿದ್ದು ಇದಕ್ಕೆ ಟ್ಯಾಂಕ್, ಡ್ರೋನ್ ಹಾಗೂ ಇತರ ಸಾಧನಗಳ ನೆರವು ದೊರಕುತ್ತಿದೆ. ಈ ಯುದ್ಧವನ್ನು ಯುರೋಪ್ ನಿಂದ ಆಚೆಗೆ ವಿಸ್ತರಿಸಲು ರಶ್ಯ ಬಯಸುತ್ತಿದೆ. ರಶ್ಯದ ಆಕ್ರಮಣವು ನಿಯಮಾಧಾರಿತ ಅಂತರಾಷ್ಟ್ರೀಯ ಕ್ರಮಕ್ಕೆ ಅಪಚಾರವಾಗಿದೆ ಎಂದು ಆಸ್ಟಿನ್ ಹೇಳಿದರು. ಬ್ರಸೆಲ್ಸ್ ನಲ್ಲಿ ಜೂನ್ 15ರಂದು ನಡೆಯಲಿರುವ ನೇಟೊ ಸಚಿವ ಮಟ್ಟದ ಸಭೆಯ ಸಂದರ್ಭ ಉಕ್ರೇನ್ ರಕ್ಷಣಾ ಸಂಪರ್ಕ ತಂಡದ ಮುಂದಿನ ಸುತ್ತಿನ ಮಾತುಕತೆ ನಡೆಯಲಿದೆ ಎಂದವರು ಹೇಳಿದ್ದಾರೆ. ಈ ಮಧ್ಯೆ, ದೀರ್ಘದೂರ ವ್ಯಾಪ್ತಿಯ ಕ್ಷಿಪಣಿ, ಎಂ270 ಮತ್ತು ಎಂ 142 ಹಿಮರ್ ಕ್ಷಿಪಣಿ ಉಡಾವಣಾ ವ್ಯವಸ್ಥೆಯನ್ನು ತ್ವರಿತವಾಗಿ ಒದಗಿಸುವಂತೆ ಉಕ್ರೇನ್ ಅಮೆರಿಕವನ್ನು ಒತ್ತಾಯಿಸಿದೆ. ಈ ವ್ಯವಸ್ಥೆಯಿಂದ 187 ಮೈಲುಗಳಷ್ಟು ದೂರದ ಗುರಿಯನ್ನು ತಲುಪುವ ಸಾಮರ್ಥ್ಯದ ಹಲವು ಕ್ಷಿಪಣಿಗಳನ್ನು ಏಕಕಾಲದಲ್ಲಿ ಉಡಾಯಿಸಬಹುದಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X