Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಟೆಕ್ಸಸ್ ಪ್ರಾಥಮಿಕ ಶಾಲೆಯಲ್ಲಿ ಗುಂಡಿನ...

ಟೆಕ್ಸಸ್ ಪ್ರಾಥಮಿಕ ಶಾಲೆಯಲ್ಲಿ ಗುಂಡಿನ ದಾಳಿ: 18 ಮಕ್ಕಳು ಸೇರಿ 21 ಮಂದಿ ಬಲಿ

ವಾರ್ತಾಭಾರತಿವಾರ್ತಾಭಾರತಿ25 May 2022 7:51 AM IST
share
ಟೆಕ್ಸಸ್ ಪ್ರಾಥಮಿಕ ಶಾಲೆಯಲ್ಲಿ ಗುಂಡಿನ ದಾಳಿ: 18 ಮಕ್ಕಳು ಸೇರಿ 21 ಮಂದಿ ಬಲಿ

ವಾಷಿಂಗ್ಟನ್, ಮೇ 25: ಅಮೆರಿಕದ ಟೆಕ್ಸಾಸ್ನಲ್ಲಿ ಪ್ರಾಥಮಿಕ ಶಾಲೆಗೆ ನುಗ್ಗಿದ 18 ವರ್ಷದ ಬಂದೂಕುಧಾರಿ ಯುವಕ ಮನಬಂದಂತೆ ಗುಂಡು ಹಾರಿಸಿ 19 ಮಕ್ಕಳ ಸಹಿತ 21 ಮಂದಿಯನ್ನು ಹತ್ಯೆಗೈದಿದ್ದಾನೆ. ಬಳಿಕ ಗುಂಡಿನ ದಾಳಿ ನಡೆಸಿದ ಯುವಕನನ್ನು ಭದ್ರತಾ ಪಡೆಯವರು ಹತ್ಯೆ ಮಾಡಿದ್ದಾರೆ ಎಂದು ವರದಿಯಾಗಿದೆ.

ಉವಾಲ್ಡೆ ನಗರದ ರಾಬ್ ಪ್ರಾಥಮಿಕ ಶಾಲೆಯಲ್ಲಿ ಈ ದುರ್ಘಟನೆ ನಡೆದಿದೆ. ಸಾಲ್ವದೋರ್ ರಾಮೋಸ್ ಎಂಬ ಯುವಕ ಮಧ್ಯಾಹ್ನದ ವೇಳೆ ಶಾಲೆಗೆ ನುಗ್ಗಿ ತನ್ನಲ್ಲಿದ್ದ ಹ್ಯಾಂಡ್ಗನ್ನಿಂದ ಗುಂಡು ಹಾರಿಸಿದ್ದಾನೆ. ಈತನ ಬಳಿ ರೈಫಲ್ ಕೂಡಾ ಇತ್ತು ಎಂದು ಟೆಕ್ಸಾಸ್ ಗವರ್ನರ್ ಗ್ರೆಗ್ ಅಬೋಟ್ ಹೇಳಿದ್ದಾರೆ.
 ಗುಂಡಿನ ದಾಳಿಯಲ್ಲಿ 19 ಮಕ್ಕಳು, ಓರ್ವ ಶಿಕ್ಷಕ ಸಹಿತ 21 ಮಂದಿ ಮೃತಪಟ್ಟಿದ್ದು ಹಲವರು ಗಾಯಗೊಂಡಿದ್ದಾರೆ. ದುಷ್ಕರ್ಮಿಯನ್ನು ತಡೆಯಲು ಹೋದ ಪೊಲೀಸರತ್ತಲೂ ಆತ ಗುಂಡು ಹಾರಿಸಿದ್ದು ಇಬ್ಬರು ಪೊಲೀಸರಿಗೆ ಅಲ್ಪಪ್ರಮಾಣದ ಗಾಯವಾಗಿದೆ. ಬಳಿಕ ಭದ್ರತಾ ಯೋಧರ ಪ್ರತಿದಾಳಿಯಲ್ಲಿ ರಾಮೋಸ್ ಹತನಾಗಿದ್ದಾನೆ ಎಂದು ವರದಿಯಾಗಿದೆ. ಎರಡನೆ ತರಗತಿಯಿಂದ 4ನೇ ತರಗತಿಯವರೆಗಿನ ಶಾಲೆಯಲ್ಲಿ ಸುಮಾರು 500 ವಿದ್ಯಾರ್ಥಿಗಳಿದ್ದು ಇವರಲ್ಲಿ ಹೆಚ್ಚಿನವರು ಸ್ಪ್ಯಾನಿಷ್ ಭಾಷೆ ಮಾತನಾಡುವ, ಆರ್ಥಿಕವಾಗಿ ಹಿಂದುಳಿದ ವರ್ಗದವರು. ಗುಂಡಿನ ದಾಳಿಯ ವರದಿ ಪ್ರಕಟವಾಗುತ್ತಿದ್ದಂತೆಯೇ ತಮ್ಮ ಮಕ್ಕಳನ್ನು ಅಲ್ಲಿಂದ ಕರೆದುಕೊಂಡು ಹೋಗಲು ಪೋಷಕರು ಶಾಲೆಗೆ ಧಾವಿಸಿದರು. ಆದರೆ, ಗಾಯಗೊಂಡ ಅಥವಾ ಮೃತ ಮಕ್ಕಳ ಗುರುತು ಹಚ್ಚುವಿಕೆ ಪೂರ್ಣಗೊಳ್ಳುವವರೆಗೆ ಉಳಿದ ಮಕ್ಕಳು ಶಾಲೆಯಲ್ಲಿಯೇ ಇರಬೇಕಾಗುತ್ತದೆ ಎಂದು ಶಾಲೆಯ ಆಡಳಿತ ವರ್ಗ ಪೋಷಕರಿಗೆ ಮನವರಿಕೆ ಮಾಡಿಕೊಟ್ಟಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಶಂಕಿತ ಆರೋಪಿ ರಾಮೋಸ್ ಏಕಾಂಗಿಯಾಗಿ ಈ ಕೃತ್ಯ ನಡೆಸಿದ್ದಾನೆ . ಶಾಲೆಯಲ್ಲಿ ಗುಂಡಿನ ದಾಳಿ ನಡೆಸುವ ಮುನ್ನ ಆತ ತನ್ನ ಅಜ್ಜಿಯನ್ನು ಗುಂಡು ಹಾರಿಸಿ ಹತ್ಯೆ ಮಾಡಿದ್ದ ಎಂದು ಮಾಹಿತಿ ಲಭಿಸಿದೆ. ಈ ಎರಡೂ ಗುಂಡಿನ ದಾಳಿಯ ನಡುವೆ ಏನಾದರೂ ಸಂಬಂಧ ಇದೆಯೇ ಎಂಬ ಬಗ್ಗೆ ಇದುವರೆಗೆ ಸ್ಪಷ್ಟವಾಗಿಲ್ಲ ಎಂದು ಗವರ್ನರ್ ಹೇಳಿದ್ದಾರೆ. ಗುಂಡಿನ ದಾಳಿ ನಡೆಸಿದ ಸಲ್ವದೋರ್ ರಾಮೋಸ್ ಸ್ಯಾನ್ ಆಂಟೋನಿಯೊ ನಗರದ ನಿವಾಸಿ ಎಂದು ಅಧಿಕಾರಿಗಳು ಹೇಳಿದ್ದಾರೆ.

 ಬಫೆಲೊ ನಗರದ ಸೂಪರ್ಮಾರ್ಕೆಟ್ನಲ್ಲಿ ಗುಂಡಿನ ದಾಳಿ ನಡೆದ 10 ದಿನದೊಳಗೇ ಈ ದಾಳಿ ನಡೆದಿರುವುದು ಆತಂಕ ಮೂಡಿಸಿದೆ. ಐದು ದಿನಗಳ ಏಶ್ಯಾ ಪ್ರವಾಸ ಮುಗಿಸಿ ಶ್ವೇತ ಭವನಕ್ಕೆ ಮರಳಿದ ಅಮೆರಿಕ ಅಧ್ಯಕ್ಷ ಜೋ ಬೈಡನ್, ಪ್ರಕರಣದ ಬಗ್ಗೆ ತೀವ್ರ ಆತಂಕ ಮತ್ತು ಸಂತಾಪ ವ್ಯಕ್ಯಪಡಿಸಿದ್ದು ಮೃತರ ಗೌರವಾರ್ಥ ದೇಶದಾದ್ಯಂತ ರಾಷ್ಟ್ರಧ್ವಜವನ್ನು ಅರ್ಧಮಟ್ಟದಲ್ಲಿ ಹಾರಿಸುವಂತೆ ಆದೇಶಿಸಿದ್ದಾರೆ. ಈ ರೀತಿಯ ಸಾಮೂಹಿಕ ಗುಂಡಿನ ದಾಳಿ ಪ್ರಕರಣ ವಿಶ್ವದ ಬೇರೆಲ್ಲಿಯೂ ಅಪರೂಪಕ್ಕೆ ನಡೆಯುತ್ತವೆ. ಆದರೆ ಅಮೆರಿಕದಲ್ಲಿ ಹೀಗೇಕೆ? ಗನ್ ಲಾಬಿಯ ವಿರುದ್ಧ ನಾವು ಯಾವತ್ತು ಒಗ್ಗೂಡಲಿದ್ದೇವೆ ಎಂದು ಬೈಡನ್ ಪ್ರಶ್ನಿಸಿದ್ದಾರೆ.

 ಇದುವರೆಗೆ ಆದದ್ದು ಸಾಕು. ನಮ್ಮ ಹೃದಯ ಒಡೆಯುತ್ತಿದೆ. ನಾವು ಕಠಿಣ ಕ್ರಮ ಕೈಗೊಳ್ಳುವ ಧೈರ್ಯ ಪ್ರದರ್ಶಿಸಬೇಕಾಗಿದೆ ಎಂದು ಅಮೆರಿಕದ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X