ರೈತ- ಸರಕಾರದ ಮಧ್ಯೆ ಕೊಂಡಿಯಾಗಿ: ಬಿಜೆಪಿ ಕಾರ್ಯಕರ್ತರಿಗೆ ಈರಣ್ಣ ಕಡಾಡಿ ಕರೆ

ಉಡುಪಿ : ಉಡುಪಿ ಜಿಲ್ಲಾ ಬಿಜೆಪಿ ರೈತ ಮೋರ್ಚಾವು ಅತ್ಯಂತ ಕ್ರಿಯಾಶೀಲತೆಯಿಂದ ಕಾರ್ಯನಿರ್ವಹಿಸುತ್ತಿದ್ದು, ಪಕ್ಷದ ಕಾರ್ಯಕರ್ತರು ರೈತಾಪಿ ವರ್ಗ ಮತ್ತು ಸರಕಾರದ ನಡುವೆ ಕೊಂಡಿಯಾಗಿ ಜವಾಬ್ದಾರಿ ನಿರ್ವ ಹಿಸಬೇಕು ಎಂದು ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ ಹಾಗೂ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದ್ದಾರೆ.
ಕಡಿಯಾಳಿಯಲ್ಲಿರುವ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಬುಧವಾರ ನಡೆದ ಜಿಲ್ಲಾ ರೈತ ಮೋರ್ಚಾದ ವಿಶೇಷ ಕಾರ್ಯಕಾರಿಣಿ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ಆಡಳಿತ ಪಕ್ಷವಾದ ಬಿಜೆಪಿ ಕಾರ್ಯಕರ್ತ ರಾಗಿ ಸರಕಾರದ ಸಾಧನೆಗಳನ್ನು ಜನರ ಮನೆ ಬಾಗಿಲಿಗೆ ಕೊಂಡೊಯ್ಯುವ ಸತ್ಕಾರ್ಯದಲ್ಲಿ ತೊಡಗಿಸಿಕೊಳ್ಳ ಬೇಕು. ಪ್ರಧಾನಿ ಮೋದಿ ಆಶಯದಂತೆ ಶತಮಾನ ವರ್ಷದ ಸಂದರ್ಭದಲ್ಲಿ ದೇಶವು ಇನ್ನಷ್ಟು ಸದೃಢವಾಗಿ ಆತ್ಮ ನಿರ್ಭರ ಭಾರತವಾಗಬೇಕು ಎಂದರು.
ಮುಂದಿನ ಚುನಾವಣೆಗಳಲ್ಲಿ ರೈತ ಮೋರ್ಚಾದ ಪದಾಧಿಕಾರಿಗಳು, ಸಮಿತಿ ಸದಸ್ಯರು ಹಾಗೂ ಕಾರ್ಯಕರ್ತರು ಜನಸೇವೆಯ ಮೂಲಕ ಪಕ್ಷ ಸಂಘಟನಾ ಕಾರ್ಯದಲ್ಲಿ ಪ್ರಾಮಾಣಿಕವಾಗಿ ತೊಡಗಿಸಿಕೊಂಡು ನಿರಂತರ ಚಟುವಟಿಕೆ ಗಳೊಂದಿಗೆ ಪಕ್ಷದ ಅಭ್ಯರ್ಥಿಗಳ ಪ್ರಚಂಡ ವಿಜಯಕ್ಕೆ ಕಟಿಬದ್ಧರಾಗಿ ಶ್ರಮಿಸ ಬೇಕು ಎಂದು ಅವರು ತಿಳಿಸಿದರು.
ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಪ್ರವೀಣ್ ಕುಮಾರ್ ಗುರ್ಮೆ ಮಾತನಾಡಿ, ಜಿಲ್ಲಾ ರೈತ ಮೋರ್ಚಾ ನಿಯಮಿತ ಸಭೆಗಳು ಹಾಗೂ ನಿರಂತರ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದೆ. ಮಂಡಲವಾರು ಗ್ರಾಮ ಮಟ್ಟದಲ್ಲಿ ರೈತ ಉತ್ಪಾದಕ ಸಂಘವನ್ನು ಪ್ರಾರಂಭಿಸುವ ಕೆಲಸ ಕಾರ್ಯ ಪ್ರಗತಿಯಲ್ಲಿದೆ. ಸರಕಾರದಿಂದ ರೈತರಿಗೆ ದೊರೆಯುವ ಸೌಲಭ್ಯಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಜಾರಿಯಲ್ಲಿದೆ ಎಂದರು.
ರೈತ ಮೋರ್ಚಾದ ರಾಜ್ಯ ಕಾರ್ಯಕಾರಿಣಿ ಸದಸ್ಯ ಹಾಗೂ ರಾಜ್ಯ ಸಾವ ಯವ ಕೃಷಿ ನಿರ್ದೇಶಕ ರಾಘವೇಂದ್ರ ಉಪ್ಪೂರು ಮಾತನಾಡಿದರು. ರೈತ ಮೋರ್ಚಾದ ರಾಜ್ಯ ಕಾರ್ಯದರ್ಶಿ ಪ್ರಸನ್ನ ಕೆರೆಕೈ ಪ್ರಾಸ್ತಾವಿಕವಾಗಿ ಮಾತ ನಾಡಿದರು. ಜಿಲ್ಲಾ ರೈತ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಧೀರಜ್ ಕೆ.ಎಸ್. ಕಾರ್ಯಕ್ರಮ ನಿರೂಪಿಸಿ ವಂದಿಸಿದರು.







