Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ‘ಯೆನೆಪೊಯ ಕ್ಯಾಂಪಸ್‌ನ ಸಸ್ಯ ಮತ್ತು...

‘ಯೆನೆಪೊಯ ಕ್ಯಾಂಪಸ್‌ನ ಸಸ್ಯ ಮತ್ತು ಪ್ರಾಣಿಗಳು’ ಕೃತಿ ಬಿಡುಗಡೆ

ವಾರ್ತಾಭಾರತಿವಾರ್ತಾಭಾರತಿ25 May 2022 8:45 PM IST
share
‘ಯೆನೆಪೊಯ ಕ್ಯಾಂಪಸ್‌ನ ಸಸ್ಯ ಮತ್ತು ಪ್ರಾಣಿಗಳು’ ಕೃತಿ ಬಿಡುಗಡೆ

ಮಂಗಳೂರು: ‘ಯೆನೆಪೊಯ ಕ್ಯಾಂಪಸ್‌ನ ಸಸ್ಯ ಮತ್ತು ಪ್ರಾಣಿಗಳು’ ಎಂಬ ಶೀರ್ಷಿಕೆಯಡಿ ಪ್ರಕಟಿಸಲಾದ ಕೃತಿಯನ್ನು ಸೋಮವಾರ ಕ್ಯಾಂಪಸ್‌ನಲ್ಲಿ ಉಪಕುಲಪತಿ ಡಾ. ಎಂ. ಜಯಕುಮಾರ್ ಬಿಡುಗಡೆಗೊಳಿಸಿದರು.

ಬಳಿಕ ಮಾತನಾಡಿದ ಅವರು ಆರಂಭದಿಂದಲೂ ಯೆನೆಪೊಯ ಸಂಸ್ಥೆಗಳು ಪರಿಸರಕ್ಕೆ ಹೆಚ್ಚಿನ ಪ್ರಾಮುಖ್ಯತೆ ಯನ್ನು ನೀಡಿವೆ. ಹಸಿರು ಕ್ಯಾಂಪಸ್ ಚಟುವಟಿಕೆಗಳಿಗೆ ಹೆಚ್ಚಿನ ಆದ್ಯತೆ ನೀಡಿದೆ. ಪ್ರಸಕ್ತ ಕಾಲಘಟ್ಟದಲ್ಲಿ ಜೀವವೈವಿಧ್ಯ ಸಂರಕ್ಷಣೆಯ ಅಗತ್ಯವಿದೆ. ಈ ಕೃತಿಯು ಯೆನೆಪೊಯ ವಿವಿ ಕ್ಯಾಂಪಸ್‌ನಲ್ಲಿ ಕಂಡುಬರುವ ಜೀವವೈವಿಧ್ಯತೆಯ ಮೌಲ್ಯಯುತ ದಾಖಲಾತಿಯಾಗಿದೆ ಎಂದರು.

ಸಂಪಾದಕಿ ಡಾ.ಭಾಗ್ಯಾ ಬಿ. ಶರ್ಮಾ ಕೃತಿಯನ್ನು ಪರಿಚಯಿಸಿದರು.

ದೇರಳಕಟ್ಟೆಯಲ್ಲಿರುವ ಯೆನೆಪೊಯ ವಿಶ್ವವಿದ್ಯಾನಿಲಯದ 27 ಎಕರೆ ಕ್ಯಾಂಪಸ್‌ನಲ್ಲಿ ಏಳು ವರ್ಷಗಳ ಕಾಲ ನಡೆಸಿದ ಅಧ್ಯಯನದ ಫಲವಾಗಿ ೧೩೫ ಸಸ್ಯ ಪ್ರಭೇದಗಳು ಮತ್ತು ೧೭೩ ಪ್ರಾಣಿ ಪ್ರಭೇದಗಳ ಫೋಟೋಗಳು ಮತ್ತು ವಿವರಣೆಗಳನ್ನು ಪುಸ್ತಕ ದಾಖಲಿಸಿದೆ. ಕರ್ನಾಟಕ ಜೀವವೈಧ್ಯ ಮಂಡಳಿಯ ಮಾಜಿ ನಿರ್ದೇಶಕ ಹಾಗೂ ಪರಿಸರವಾದಿ ಅನಂತ ಹೆಗಡೆ ಅಶೀಸರ ಪುಸ್ತಕಕ್ಕೆ ಮುನ್ನುಡಿ ಬರೆದಿದ್ದಾರೆ.

ಕ್ಯಾಂಪಸ್‌ನ ಸಸ್ಯ ವೈವಿಧ್ಯತೆಯ ಲೆಕ್ಕಪರಿಶೋಧನೆ ನಡೆಸಿದ ಖ್ಯಾತ ವರ್ಗೀಕರಣ ಶಾಸ್ತ್ರಜ್ಞ (ಟ್ಯಾಕ್ಸಾನಮಿಸ್ಟ್) ದಿ. ಪ್ರೊ.ಗೋಪಾಲಕೃಷ್ಣ ಭಟ್ ಅವರ ಸ್ಮರಣಾರ್ಥ ಪುಸ್ತಕವನ್ನು ಸಮರ್ಪಿಸಲಾಗಿದೆ. ಪ್ರಾಣಿಶಾಸ್ತ್ರಜ್ಞ ಡಾ. ದೀಪಕ್ ಮತ್ತು ವಿವೇಕ್ ವಿವಿಧ ಪ್ರಾಣಿ ಪ್ರಭೇದಗಳಾದ ಹುಳುಗಳು, ಜೇಡಗಳು, ಹಾವುಗಳು, ಚಿಟ್ಟೆಗಳು ಮತ್ತು ಸಸ್ತನಿಗಳನ್ನು ದಾಖಲಿಸಿದ್ದಾರೆ. ಕಾರ್ಕಳದ ವೈದ್ಯಾಧಿಕಾರಿ ಡಾ. ಪ್ರಸಾದ್ ಕಿಣಿ ಮತ್ತು ನೇತ್ರ ತಜ್ಞೆ ಡಾ.ಉಮಾ ಕುಲಕರ್ಣಿ ಕ್ಯಾಂಪಸ್‌ನಲ್ಲಿ ಚಿತ್ರೀಕರಿಸಲಾದ ಪಕ್ಷಿಗಳ ಛಾಯಾಚಿತ್ರಗಳನ್ನು ಈ ಪುಸ್ತಕಕ್ಕೆ ನೀಡಿದ್ದಾರೆ.

ಕಣ್ಣೂರು ಮತ್ತು ಕಲ್ಲಿಕೋಟೆ ವಿವಿಯ ಉಪಕುಲಪತಿ ಡಾ.ಶ್ರೀಪತಿ ರಾವ್, ಪ್ರೊ.ಅಬ್ದುಲ್ ರಹ್ಮಾನ್, ರಿಜಿಸ್ಟ್ರಾರ್ ಡಾ.ಗಂಗಾಧರ ಸೋಮಯಾಜಿ, ಯೆನೆಪೊಯ ಡೆಂಟಲ್ ಕಾಲೇಜಿನ ಪ್ರಾಂಶುಪಾಲ ಡಾ.ಅಖ್ತರ್ ಹುಸೇನ್, ಯೆನೆಪೊಯ ಫಾರ್ಮಸಿ ಕಾಲೇಜಿನ  ಪ್ರಾಂಶುಪಾಲ ಡಾ.ಗುಲ್ಜಾರ್ ಅಹ್ಮದ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X