Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಸಮುದಾಯದ ಅಭಿವೃದ್ಧಿ ಮತ್ತು ಅವನತಿ ಯುವ...

ಸಮುದಾಯದ ಅಭಿವೃದ್ಧಿ ಮತ್ತು ಅವನತಿ ಯುವ ಸಮೂಹದ ಕೈಯಲ್ಲಿದೆ : ಲತೀಫ್ ಮದನಿ

ಎಸ್‌ಕೆಎಸ್‌ಎಂ ಯೂತ್ ವಿಂಗ್‌ನಿಂದ ಯುವ ಸಮ್ಮೇಳನ

ವಾರ್ತಾಭಾರತಿವಾರ್ತಾಭಾರತಿ25 May 2022 9:30 PM IST
share
ಸಮುದಾಯದ ಅಭಿವೃದ್ಧಿ ಮತ್ತು ಅವನತಿ ಯುವ ಸಮೂಹದ ಕೈಯಲ್ಲಿದೆ : ಲತೀಫ್ ಮದನಿ

ಮಂಗಳೂರು: ಸಮುದಾಯದ ಶಕ್ತಿ ಕೇಂದ್ರವಾಗಿರುವ ಯುವ ಜನಾಂಗವು ಇತಿಹಾಸದ ಪುಟಗಳನ್ನು ಅರಿತು ಕೊಂಡು ಕಾರ್ಯಪ್ರವೃತ್ತರಾಗಬೇಕು. ಯಾವುದೇ ಒಂದು ಸಮುದಾಯದ ಅಭಿವೃದ್ಧಿ ಮತ್ತು ಅವನತಿಯು ಯುವ ಸಮೂಹದ ಕೈಯಲ್ಲಿದೆ ಎಂದು ಉಡುಪಿಯು ಸಮ್ಮಾನ್ ಕೌನ್ಸಿಲಿಂಗ್ ಸೆಂಟರ್‌ನ ಅಧ್ಯಕ್ಷ ಶೈಖ್ ಅಬ್ದುಲ್ ಲತೀಫ್ ಮದನಿ ಅಭಿಪ್ರಾಯಪಟ್ಟರು.

ಸೌತ್ ಕರ್ನಾಟಕ ಸಲಫಿ ಮೂವ್‌ಮೆಂಟ್(ಎಸ್‌ಕೆಎಸ್‌ಎಂ)ನ ಅಂಗಸಂಸ್ಥೆಯಾದ ಯೂತ್‌ವಿಂಗ್‌ನ ಸಲಫಿ ಗರ್ಲ್ಸ್ ವಿಮೆನ್ಸ್ ಮೂವ್‌ಮೆಂಟ್‌ನಿಂದ ನಗರದ ಪುರಭವನದಲ್ಲಿ ಬುಧವಾರ ನಡೆದ ‘ದಿ-ಐಡಿಯಲ್ ಯೂತ್-ಇಸ್ಲಾಮಿ ಯುವ ಸಮಾವೇಶ’ದಲ್ಲಿ ‘ಕುಟುಂಬ ಯೋಗಕ್ಷೇಮದಲ್ಲಿ ಯುವಕರ ಪಾತ್ರ’ ಎಂಬ ವಿಷಯದಲ್ಲಿ ಅವರು ಪ್ರವಚನ ನೀಡಿದರು.

ಇಸ್ಲಾಂ ಯುವ ಸಮೂಹಕ್ಕೆ ಹೆಚ್ಚಿನ ಆದ್ಯತೆ ಮತ್ತು ಪ್ರಾಮುಖ್ಯತೆಯನ್ನು ನೀಡಿದೆ. ಇಸ್ಲಾಮಿನ ಇತಿಹಾಸವನ್ನು ಓದಿದರೆ ಎಲ್ಲಾ ವಿಜಯಗಳಲ್ಲೂ ಯುವಕರು ಬಹಳ ಮುಖ್ಯವಾದ ಪಾತ್ರವನ್ನು ವಹಿಸಿರುವುದು ಕಂಡು ಬರುತ್ತದೆ. ಹಾಗಾಗಿ ಯುವ ಜನಾಂಗವು ಇಸ್ಲಾಮಿನ ಇತಿಹಾಸವನ್ನು ಕಲಿಯಬೇಕು. ಯುವ ಸಮೂಹಕ್ಕೆ ಸೂಕ್ತ ತರಬೇತಿ ನೀಡುವುದರ ಜೊತೆಗೆ ಅರಿವು ಮೂಡಿಸಬೇಕು ಎಂದು ಶೈಖ್ ಅಬ್ದುಲ್ ಲತೀಫ್ ಮದನಿ ಹೇಳಿದರು.

‘ಪ್ರೊಡೆಕ್ಟಿವ್ ಯೂತ್‌‘ ಎಂಬ ವಿಷಯದಲ್ಲಿ ಪ್ರವಚನ ನೀಡಿದ ಅಂತರ್‌ ರಾಷ್ಟ್ರೀಯ ಭಾಷಣಗಾರ ದುಬೈಯ ಅಹ್ಮದ್ ಹಾಮೆದ್ ಒಳಿತನ್ನು ಬಯಸಿಕೊಂಡು ಯುವ ಜನಾಂಗವು ಅಲ್ಲಾಹನ ಮಾರ್ಗದಲ್ಲೇ ಸಾಗಬೇಕು. ದೇಶ ಅಥವಾ ಸಮುದಾಯಗಳ ಅಭಿವೃದ್ಧಿಯಲ್ಲಿ ನಮ್ಮ ಪಾತ್ರ ಏನು ಎಂಬುದನ್ನು ಸ್ವತಃ ಯುವಕರು ಅರಿತುಕೊಂಡು ಸೇವೆ ಸಲ್ಲಿಸಬೇಕು ಎಂದರು.

ಎಸ್‌ಕೆಎಸ್‌ಎಂ ಯೂತ್ ವಿಂಗ್ ಅಧ್ಯಕ್ಷ ಇಂಜಿನಿಯರ್ ಮುಹಮ್ಮದ್ ಆತೀಶ್ ‘ಮುಸ್‌ಅಬ್ ಬಿನ್ ಉಮೈರ್ (ರ)ರವರ ತ್ಯಾಗೋಜ್ವಲ ಜೀವನ‘ ಎಂಬ ವಿಷಯದಲ್ಲಿ ಪ್ರವಚನ ನೀಡಿದರು.

ಮುಖ್ಯ ಅತಿಥಿಯಾಗಿ ಸೌದಿ ಅರೇಬಿಯಾದ ಸ್ಯಾಕೋ ಕಾಂಟ್ರಾಕ್ಟಿಂಗ್ ಕಂಪೆನಿಯ ಸಿಇಒ, ಅಲ್-ಇಬಾದಾ ಇಂಡಿಯನ್ ಸ್ಕೂಲ್ ಮಣಿಪಾಲ ಇದರ ಸಂಸ್ಥಾಪಕ ಹಾಗೂ ಅಧ್ಯಕ್ಷ ಹಮ್ಮಾದ್ ಬಶೀರ್ ಸಾಗರ್‌ರ ಪರವಾಗಿ ಅವರ ಪುತ್ರ ಝೈದ್ ಬಶೀರ್ ಸಾಗರ್ ಭಾಗವಹಿಸಿದ್ದರು.

ಎಸ್‌ಕೆಎಸ್‌ಎಂ ಮಂಗಳೂರು ಇದರ ಅಧ್ಯಕ್ಷ ಬಶೀರ್ ಅಹ್ಮದ್ ಶಾಲಿಮಾರ್ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಎಸ್‌ಕೆಎಸ್‌ಎಂ ಕಾರ್ಯದರ್ಶಿ ಅಬ್ದುಲ್ ರಹ್ಮಾನ್ ಉಪ್ಪಿನಂಗಡಿ ಉಪಸ್ಥಿತರಿದ್ದರು.

ಎಸ್‌ಕೆಎಸ್‌ಎಂ ಯೂತ್ ವಿಂಗ್ ಪ್ರಧಾನ ಕಾರ್ಯದರ್ಶಿ ಮೂಸಾ ಫಾಝಿಲ್ ಸ್ವಾಗತಿಸಿದರು. ಅಹ್ಮದ್ ಅನೀಸ್ ಕಾರ್ಯಕ್ರಮ ನಿರೂಪಿಸಿದರು. ಮುಸ್ಫರ್ ಅಹ್ಮದ್ ವಂದಿಸಿದರು.

ಬೆಳಗ್ಗೆ ನಡೆದ ‘ದಿ ಐಡಿಯಲ್ ವಿಮೆನ್-ಇಸ್ಲಾಮೀ ಮಹಿಳಾ ಸಮಾವೇಶ’ದಲ್ಲಿ ಉಮ್ಮು ಫಾಝಿಲ್, ಹಫೀಝಾ ಸ್ವಲಾಹಿಯಾ, ಮುಝಾಹಿದಾ ಹಾಗೂ ಜುವೇರಿಯಾ ಹಯಾತ್ ವಿವಿಧ ವಿಷಯಗಳ ಕುರಿತು ಪ್ರವಚನ ನೀಡಿದರು.

ವೇದಿಕೆಯಲ್ಲಿ ಸಲಫಿ ಗರ್ಲ್ಸ್ ಆ್ಯಂಡ್ ವಿಮೆನ್ಸ್ ಮೂವ್‌ಮೆಂಟ್‌ನ ಅಧ್ಯಕ್ಷೆ ಬಶೀರಾ, ಕಾರ್ಯದರ್ಶಿ ನಾಝಿಯಾ, ಅಡ್ವಕೇಟ್ ನೌಶಾದ್ ಭಾನು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X