Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ರಸ್ತೆಗುಂಡಿ ಮುಚ್ಚಲು ಹತ್ತು ದಿನ ಗಡುವು...

ರಸ್ತೆಗುಂಡಿ ಮುಚ್ಚಲು ಹತ್ತು ದಿನ ಗಡುವು ಕೇಳಿದ ಬಿಬಿಎಂಪಿ

ವಾರ್ತಾಭಾರತಿವಾರ್ತಾಭಾರತಿ25 May 2022 10:15 PM IST
share
ರಸ್ತೆಗುಂಡಿ ಮುಚ್ಚಲು ಹತ್ತು ದಿನ ಗಡುವು ಕೇಳಿದ ಬಿಬಿಎಂಪಿ

ಬೆಂಗಳೂರು, ಮೇ 25: ಫಿಕ್ಸ್ ಮೈ ಸ್ಟ್ರೀಟ್ ಆ್ಯಪ್‍ಅನ್ನು ಆಧರಿಸಿ, ಮುಂದಿನ ಹತ್ತು ದಿನಗಳಲ್ಲಿ ನಗರದ ಎಲ್ಲಾ ರಸ್ತೆ ಗುಂಡಿಗಳನ್ನು ಮುಚ್ಚಲಾಗುವುದು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಭರವಸೆ ನೀಡಿದರು.

ಬುಧವಾರ ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಮಾತನಾಡಿದ ಅವರು, ನಗರದಲ್ಲಿ ರಸ್ತೆ ಗುಂಡಿ ಮುಚ್ಚುವ ಕಡೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ. ಮಳೆಯಿಂದಾಗಿ ಮಧ್ಯೆ ತೊಡಕಾಗಿತ್ತು. ಆದರೂ ಫಿಕ್ಸ್ ಮೈ ಸ್ಟ್ರೀಟ್ ಆ್ಯಪ್ ನೆರವಿನಿಂದ 11 ಸಾವಿರ ರಸ್ತೆಗುಂಡಿಗಳನ್ನು ಪತ್ತೆ ಹಚ್ಚಿ 5500 ರಸ್ತೆಗುಂಡಿ ಮುಚ್ಚುವ ಕೆಲಸ ಪ್ರಗತಿಯಲ್ಲಿದೆ ಎಂದು ಮಾಹಿತಿ ನೀಡಿದರು.

ಇನ್ನು ಲೈನಡ್ ಏರಿಯಾದಲ್ಲಿ ಅಭಿವೃದ್ಧಿ ಕಾರ್ಯ ಹೂಳು ತೆಗೆಯುವ ವಿಚಾರದಲ್ಲಿ ಅಲ್ಪಾವಧಿ ಟೆಂಡರ್ ನೀಡಲಾಗಿದೆ. ಇನ್ನೊಂದು ತಿಂಗಳಲ್ಲಿ ಪ್ರಮುಖ ಪ್ರದೇಶಗಳಲ್ಲಿ ಹೂಳು ತೆಗೆಯಲಾಗುವುದು. ಲೈನಡ್ ಏರಿಯಾದಲ್ಲಿ ಅಭಿವೃದ್ದಿ ಕಾರ್ಯ ನಡೆಯುತ್ತಿದ್ದು, ಗುತ್ತಿಗೆದಾರರಿಂದಲೇ ಹೂಳು ತೆಗೆಸಲಾಗುವುದು ಎಂದು ಅವರು ಮಾಹಿತಿ ನೀಡಿದರು.

ಕಾಳಿದಾಸ ಲೇಔಟ್‍ನಲ್ಲಿ ರಾಜಕಾಲುವೆ ಅನಾಹುತ ಪ್ರಕರಣ ಕುರಿತು ಪ್ರತಿಕ್ರಿಯಿಸಿದ ಅವರು, ಘಟನಾ ಸ್ಥಳಕ್ಕೆ ಹಿರಿಯ ಅಧಿಕಾರಿಗಳು ಭೇಟಿ ಕೊಟ್ಟಿದ್ದು, ವರದಿ ಪಡೆಯುತ್ತಾರೆ. ಓರ್ವರನ್ನು ಹೊರತುಪಡಿಸಿ ಉಳಿದವರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಗಾಯಾಳುಗಳ ಅಕೌಂಟ್ ಗುತ್ತಿಗೆದಾರರಿಂದಲೇ ಹಣ ಜಮಾವಣೆ ಮಾಡಿಸಲಾಗುತ್ತದೆ. ಗುತ್ತಿಗೆದಾರರಿಗೆ ಒಂದು ಲಕ್ಷ ದಂಡ ವಿಧಿಸಲು ಸೂಚನೆ ನೀಡಲಾಗಿದೆ. ವಾರ್ಡ್ ಇಂಜಿನಿಯರ್‍ಗೆ ನೋಟಿಸ್ ನೀಡಲಾಗುವುದು ಎಂದು ಹೇಳಿದರು.

ವರದಿಯನ್ನು ಆಧರಿಸಿ ಮಾತ್ರ ಗುತ್ತಿಗೆದಾರನ ವಿರುದ್ಧ ಕ್ರಿಮಿನಲ್ ಕೇಸ್ ದಾಖಲು ಮಾಡಲಾಗುವುದು. ಬಿಬಿಎಂಪಿಯಲ್ಲಿ ವಿಜಿಲೆನ್ಸ್ ಸೆಲ್ ಇದ್ದು, ಒಟ್ಟಾರೆ ಕಾಮಗಾರಿಯ ಶೇ.10 ರಷ್ಟು ಕಾಮಗಾರಿ ಪರಿಶೀಲನೆ ಮಾಡಬೇಕಿದೆ. ಆದರೆ ವಿಜಿಲೆನ್ಸ್ ಸೆಲ್ ಆ ಕೆಲಸ ಮಾಡುತ್ತಿರಲಿಲ್ಲ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X