ಚಿಕ್ಕಮಗಳೂರು: ಆಸ್ಪತ್ರೆಯಿಂದ ವಿಚಾರಣಾಧೀನ ಖೈದಿ ಪರಾರಿ
ಸಾಂದರ್ಭಿಕ ಚಿತ್ರ
ಚಿಕ್ಕಮಗಳೂರು: ನಗರದ ಮಲ್ಲೇಗೌಡ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದ ವಿಚಾರಣಾಧೀನ ಕೈದಿಯೋರ್ವ ಪರಾರಿಯಾದ ಘಟನೆ ನಡೆದಿದೆ.
ಗಾಂಜಾ ಪ್ರಕರಣದಲ್ಲಿ ಕೋರ್ಟ್ ನಿಂದ ವಿಚಾರಣೆಗೆ ಒಳಪಟ್ಟಿರುವ ಕಡೂರು ಮೂಲದ ಖೈದಿ ಧನರಾಜ್ ಅನಾರೋಗ್ಯದ ನಿಮಿತ್ತ ಜಿಲ್ಲಾಸ್ಪತ್ರೆಯಲ್ಲಿ ದಾಖಲಾಗಿದ್ದ.
ಪೊಲೀಸರು ಆಸ್ಪತ್ರೆ ಸಿಬ್ಬಂದಿಗಳ ಕಣ್ಣುತಪ್ಪಿಸಿ ಆಸ್ಪತ್ರೆಯ ಕೊಠಡಿಯಿಂದ ಪರಾರಿಯಾಗಿದ್ದಾನೆ ಎನ್ನಲಾಗಿದೆ.
ಈ ಸಂಬಂಧ ಹಿನ್ನೆಲೆ ಇಬ್ಬರು ಪೊಲೀಸ್ ಪೇದೆಗಳನ್ನು ವಿಚಾರಣೆ ನಡೆಸಲಾಗುತ್ತಿದೆ ಎಂದು ತಿಳಿದು ಬಂದಿದೆ.
Next Story