Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಉಕ್ರೇನ್ ಬಂದರಿನಿಂದ ಹಡಗು ಹೊರಡಲು...

ಉಕ್ರೇನ್ ಬಂದರಿನಿಂದ ಹಡಗು ಹೊರಡಲು ಅವಕಾಶವಿದೆ ಆದರೆ ಷರತ್ತು ಅನ್ವಯಿಸಲಿದೆ: ರಶ್ಯ

ವಾರ್ತಾಭಾರತಿವಾರ್ತಾಭಾರತಿ26 May 2022 11:40 PM IST
share

ಮಾಸ್ಕೊ, ಮೇ 26: ಜಾಗತಿಕ ಆಹಾರ ಬಿಕ್ಕಟ್ಟಿನ ಪರಿಸ್ಥಿತಿಯನ್ನು ಗಮನಿಸಿ, ಉಕ್ರೇನ್‌ನ ಬಂದರುಗಳಲ್ಲಿ ತಡೆಹಿಡಿಯಲಾಗಿರುವ ಆಹಾರವಸ್ತುಗಳ ಸರಕನ್ನು ಹೊಂದಿರುವ ಹಡುಗಳು ಅಲ್ಲಿಂದ ಹೊರಡಲು ಅವಕಾಶ ನೀಡಲು ತಾವು ಸಿದ್ಧ. ಆದರೆ ಇದಕ್ಕೆ ಷರತ್ತುಗಳು ಅನ್ವಯಿಸಲಿದೆ ಎಂದು ರಶ್ಯದ ಸಹಾಯಕ ವಿದೇಶಾಂಗ ಸಚಿವ ಆಂಡ್ರೈ ರುಡೆಂಕೊ ಹೇಳಿದ್ದಾರೆ. 

ತನ್ನ ಮೇಲೆ ವಿಧಿಸಿರುವ ನಿರ್ಬಂಧ ತೆರವುಗೊಳಿಸಿದರೆ ಉಕ್ರೇನ್ ಬಂದರಿನಿಂದ ಹಡಗುಗಳು ಹೊರಡಲಿವೆ. ಆಹಾರ ವಸ್ತುಗಳ ಸರಕು ಹೊತ್ತಿರುವ ಹಡಗುಗಳ ಪ್ರಯಾಣಕ್ಕೆ ರಶ್ಯ ಮಾನವೀಯ ಕಾರಿಡಾರ್ ವ್ಯವಸ್ಥೆ ಮಾಡಲಿದೆ ಎಂದವರು ಹೇಳಿದ್ದಾರೆ. ಫೆಬ್ರವರಿ 24ರಂದು ಉಕ್ರೇನ್ ಮೇಲೆ ಆಕ್ರಮಣ ಆರಂಭಿಸಿದಂದಿನಿಂದ ಕಪ್ಪು ಸಮುದ್ರದಲ್ಲಿರುವ ಉಕ್ರೇನ್‌ನ ಬಂದರುಗಳನ್ನು ರಶ್ಯ ತಡೆಹಿಡಿದಿದೆ. ಕಪ್ಪು ಸಮುದ್ರದಲ್ಲಿ ನೌಕಾದಳವನ್ನು ನಿಯೋಜಿಸಿರುವ ರಶ್ಯ, ಉಕ್ರೇನ್‌ನ ಬಂದರಿನಿಂದ ಯಾವುದೇ ವಾಣಿಜ್ಯ ಹಡಗುಗಳು ಹೊರ ತೆರಳುವುದನ್ನು ಪರಿಣಾಮಕಾರಿಯಾಗಿ ತಡೆಹಿಡಿದಿದೆ. 

ವರದಿಯ ಪ್ರಕಾರ, ವಿಶ್ವದ ಆಹಾರದ ಬಾಸ್ಕೆಟ್ ಎಂದು ಕರೆಯಲಾಗುವ ಉಕ್ರೇನ್‌ನ ಗೋದಾಮುಗಳಲ್ಲಿ 20 ಮಿಲಿಯನ್ ಟನ್‌ಗೂ ಅಧಿಕ ಆಹಾರ ಧಾನ್ಯಗಳು ರಾಶಿಬಿದ್ದಿವೆ. ಉಕ್ರೇನ್‌ನಿಂದ ರಫ್ತಾಗುವ ಆಹಾರ ಧಾನ್ಯಗಳನ್ನು ಅವಲಂಬಿಸಿರುವ ದೇಶಗಳಲ್ಲಿ ಈಗ ಆಹಾರದ ಬಿಕ್ಕಟ್ಟಿನ ಸಮಸ್ಯೆ ತೀವ್ರಗೊಂಡಿದೆ. ಉಕ್ರೇನ್ ಯುದ್ಧ ಶೀಘ್ರ ಅಂತ್ಯಗೊಳ್ಳದಿದ್ದರೆ ಜಾಗತಿಕ ಆಹಾರ ಬಿಕ್ಕಟ್ಟು ಪರಾಕಾಷ್ಟೆಗೆ ತಲುಪಲಿದೆ ಎಂದು ವಿಶ್ವಸಂಸ್ಥೆ ಎಚ್ಚರಿಸಿದೆ. ಕಪ್ಪು ಸಮುದ್ರದ ಬಂದರಿನಿಂದ ಆಹಾರ ಧಾನ್ಯಗಳನ್ನು ಹೊತ್ತ ಹಡಗುಗಳು ಹೊರಡುವುದಕ್ಕೆ ತಡೆಯೊಡ್ಡುವ ಮೂಲಕ ರಶ್ಯ ಅಧ್ಯಕ್ಷ ಪುಟಿನ್, ಮಿಲಿಯಾಂತರ ಜನರನ್ನು ಕ್ಷಾಮದ ದವಡೆಗೆ ನೂಕುತ್ತಿದ್ದಾರೆ ಎಂದು ಜಿ7 ದೇಶಗಳು ಆಕ್ರೋಶ ವ್ಯಕ್ತಪಡಿಸಿವೆ. 

ಆಹಾರ ಸಮಸ್ಯೆಯ ಪರಿಹಾರಕ್ಕೆ ರಶ್ಯಾದ ರಫ್ತು ಮತ್ತು ಹಣಕಾಸಿನ ವಹಿವಾಟಿನ ಮೇಲೆ ವಿಧಿಸಿರುವ ನಿರ್ಬಂಧಗಳನ್ನು ತೆಗೆದುಹಾಕುವುದು ಸೇರಿದಂತೆ ಸಮಗ್ರ ವಿಧಾನದ ಅಗತ್ಯವಿದೆ ಎಂದು ನಾವು ಪದೇಪದೇ ಹೇಳುತ್ತಿದ್ದೇವೆ. ಜತೆಗೆ, ಹಡಗುಗಳು ಲಂಗರು ಹಾಕಿರುವ ಬಂದರಿನಲ್ಲಿ ಉಕ್ರೇನ್ ಹುಗಿದಿಟ್ಟಿರುವ ಸ್ಫೋಟಕಗಳನ್ನೂ ತೆರವುಗೊಳಿಸಬೇಕಾಗಿದೆ. ಅಗತ್ಯವಾದ ಮಾನವೀಯ ಮಾರ್ಗಗಳನ್ನು ಒದಗಿಸಲು ರಶ್ಯ ಸಿದ್ಧವಿದೆ ಮತ್ತು ಇದನ್ನು ಪ್ರತೀ ದಿನವೂ ಮಾಡುತ್ತಿದೆ ಎಂದು ರಶ್ಯದ ವಿದೇಶಾಂಗ ಸಚಿವರು ಹೇಳಿರುವುದಾಗಿ ಇಂಟರ್‌ಫಾಕ್ಸ್ ನ್ಯೂಸ್ ಏಜೆನ್ಸಿ ವರದಿ ಮಾಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X