Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರೈತರ ಬದುಕಿನಲ್ಲಿ ಡ್ರೋನ್ ಗಳು ಪ್ರಮುಖ...

ರೈತರ ಬದುಕಿನಲ್ಲಿ ಡ್ರೋನ್ ಗಳು ಪ್ರಮುಖ ಪಾತ್ರ ವಹಿಸಲಿವೆ: ಡ್ರೋನ್ ಮಹೋತ್ಸವದಲ್ಲಿ ಪ್ರಧಾನಿ‌

ವಾರ್ತಾಭಾರತಿವಾರ್ತಾಭಾರತಿ27 May 2022 10:51 PM IST
share
ರೈತರ ಬದುಕಿನಲ್ಲಿ ಡ್ರೋನ್ ಗಳು ಪ್ರಮುಖ ಪಾತ್ರ ವಹಿಸಲಿವೆ: ಡ್ರೋನ್ ಮಹೋತ್ಸವದಲ್ಲಿ ಪ್ರಧಾನಿ‌

ಹೊಸದಿಲ್ಲಿ, ಮೇ 27: ದೇಶದಲ್ಲಿ ಡ್ರೋನ್ಗಳ ಬಳಕೆಯ ಕುರಿತು ಗಮನ ಸೆಳೆದಿರುವ ಪ್ರಧಾನಿ ನರೇಂದ್ರ ಮೋದಿ, ಗ್ರಾಮಗಳಲ್ಲಿ ಆಸ್ತಿಯ ಡಿಜಿಟಲ್ ನಕ್ಷೆಗೆ ಪಿಎಂ ಸ್ವಾಮಿತ್ವ ಯೋಜನೆ ನೆರವಾಗಲಿದೆ ಎಂದು ಶುಕ್ರವಾರ ಹೇಳಿದ್ದಾರೆ.

‘ಇದು ಮಾನವನ ಹಸ್ತಕ್ಷೇಪವನ್ನು ಕಡಿಮೆ ಮಾಡಲಿದೆ ಹಾಗೂ ಪಾರದರ್ಶಕತೆಯನ್ನು ಹೆಚ್ಚಿಸಲಿದೆ. ಇದುವರೆಗೆ 65,000 ಆಸ್ತಿ ಪತ್ರಗಳನ್ನು ವಿತರಿಸಲಾಗಿದೆ’ ಎಂದು ಅವರು ತಿಳಿಸಿದರು. ಹೊಸದಿಲ್ಲಿಯ ಪ್ರಗತಿ ಮೈದಾನದಲ್ಲಿ ನಡೆದ ‘ಭಾರತ ಡ್ರೋನ್ ಮಹೋತ್ಸವ’ವನ್ನು ಶುಕ್ರವಾರ ಉದ್ಘಾಟಿಸಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದರು. ‘‘ನಮ್ಮ ರೈತರ ಜೀವನವನ್ನು ಉತ್ತಮಗೊಳಿಸುವಲ್ಲಿ ಡ್ರೋನ್ಗಳು ಮುಖ್ಯ ಪಾತ್ರ ವಹಿಸಲಿವೆ.

ಇದಕ್ಕೆ ಸ್ವಾಮಿತ್ವ ಯೋಜನೆ ಅತ್ಯುತ್ತಮ ಉದಾಹರಣೆ’’ ಎಂದು ಅವರು ಹೇಳಿದರು. ಸ್ವಾಮಿತ್ವ (ಎಸ್ವಿಎಎಂಐಟಿವಿಎ- ಸರ್ವೇ ಆಫ್ ವಿಲೇಜ್ ಆ್ಯಂಡ್ ಮ್ಯಾಪಿಂಗ್ ವಿದ್ ಇಂಪ್ರೂವೈಸ್ಡ್ ಟೆಕ್ನಾಲಜಿ ಇನ್ ವಿಲೇಜ್ ಏರಿಯಾ) ಯೋಜನೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು 2020 ಎಪ್ರಿಲ್ 24ರಂದು ಲೋಕಾರ್ಪಣೆಗೊಳಿಸಿದ್ದರು. ಗ್ರಾಮದ ಪ್ರತಿ ಮನೆಯ ಮಾಲಕನಿಗೆ ‘‘ದಾಖಲೆಯ ಹಕ್ಕು’’ ನೀಡುವ ಮೂಲಕ ಗ್ರಾಮೀಣ ಭಾರತದಲ್ಲಿ ಆರ್ಥಿಕ ಪ್ರಗತಿಯನ್ನು ಸಾಧಿಸುವ ಉದ್ದೇಶವನ್ನು ಇದು ಹೊಂದಿದೆ. ‘‘ಡ್ರೋನ್ ನಮಗೆ ದೊರತೆ ಸ್ಮಾರ್ಟ್ ಸಾಧನ. ಇದು ಶೀಘ್ರದಲ್ಲಿ ಪ್ರತಿಯೊಬ್ಬ ನಾಗರಿಕನ ಬದುಕಿನ ಭಾಗವಾಗಲಿದೆ. ದೇಶದಲ್ಲಿ ಕೃಷಿಯಿಂದ ರಕ್ಷಣೆ, ಪ್ರವಾಸೋದ್ಯಮ, ಆರೋಗ್ಯ ಸೇವೆ ವರೆಗಿನ ಕ್ಷೇತ್ರಗಳಲ್ಲಿ ಗುಣಮಟ್ಟವನ್ನು ಸುಧಾರಿಸಲು ಡ್ರೋನ್ಗಳು ನೆರವಾಗಲಿವೆ’’ ಎಂದು ಅವರು ಹೇಳಿದರು. 

‘‘ಈ ಮಹೋತ್ಸವದಲ್ಲಿ ರೈತರು, ಡ್ರೋನ್ ಎಂಜಿನಿಯರ್ಗಳು, ಸ್ಟಾರ್ಟ್ಅಪ್ಗಳು ಹಾಗೂ ಹಲವು ನಾಯಕರು ಕೂಡ ಇದ್ದಾರೆ. ಡ್ರೋನ್ ತಂತ್ರಜ್ಞಾನದ ಬಗೆಗಿನ ಈ ಉತ್ಸಾಹ ತುಂಬಾ ವಿಶೇಷವಾಗಿದೆ. ನಮ್ಮ ಸ್ಟಾರ್ಟ್ಅಪ್ ಶಕ್ತಿಯನ್ನು ಆಧರಿಸಿ ಜಗತ್ತಿನಲ್ಲಿ ಡ್ರೋನ್ ತಂತ್ರಜ್ಞಾನದ ಕೇಂದ್ರವಾಗುವಲ್ಲಿ ಭಾರತ ಅತಿ ವೇಗದಲ್ಲಿ ಮುನ್ನಡಿ ಇರಿಸುತ್ತಿದೆ’’ ಎಂದು ಅವರು ಹೇಳಿದರು. ಈ ಕಾರ್ಯಕ್ರಮ ಡ್ರೋನ್ಗಳಿಗೆ ಮಾತ್ರ ಸೀಮಿತವಲ್ಲ. ಭಾರತದಲ್ಲಿ ಹೊಸ ತಂತ್ರಜ್ಞಾನ ಹಾಗೂ ಆವಿಷ್ಕಾರದತ್ತ ಸಾಗಲು ಕೂಡ ಈ ಕಾರ್ಯಕ್ರಮ ನೆರವಾಗಲಿದೆ ಎಂದು ಪ್ರಧಾನಿ ಅವರು ಹೇಳಿದರು 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X