Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮಕ್ಕಳ ನಾಪತ್ತೆ ಪ್ರಕರಣಗಳಲ್ಲಿ ತೀವ್ರ...

ಮಕ್ಕಳ ನಾಪತ್ತೆ ಪ್ರಕರಣಗಳಲ್ಲಿ ತೀವ್ರ ಏರಿಕೆ: ಸೂಕ್ತ ಕ್ರಮಗಳಿಗೆ ಎನ್‌ಜಿಒಗಳ ಕರೆ

ವಾರ್ತಾಭಾರತಿವಾರ್ತಾಭಾರತಿ28 May 2022 10:55 PM IST
share
ಮಕ್ಕಳ ನಾಪತ್ತೆ ಪ್ರಕರಣಗಳಲ್ಲಿ ತೀವ್ರ ಏರಿಕೆ: ಸೂಕ್ತ ಕ್ರಮಗಳಿಗೆ ಎನ್‌ಜಿಒಗಳ ಕರೆ

ಹೊಸದಿಲ್ಲಿ, ಮೇ 28: ಕೋವಿಡ್ ಸಾಂಕ್ರಾಮಿಕದ ಸಾಮಾಜಿಕ ಪ್ರಭಾವದಿಂದಾಗಿ ಕಳೆದೆರಡು ವರ್ಷಗಳಲ್ಲಿ ಮಕ್ಕಳ ನಾಪತ್ತೆ ಪ್ರಕರಣಗಳು ತೀವ್ರವಾಗಿ ಹೆಚ್ಚಿವೆ ಎಂದು ಎನ್ಜಿಒಗಳು ಕಳವಳ ವ್ಯಕ್ತಪಡಿಸಿವೆ.

ಪರಿಸ್ಥಿತಿ ಇನ್ನಷ್ಟು ಹದಗೆಡುವುದನ್ನು ತಡೆಯಲು ಗಾಮ ಮಟ್ಟದಲ್ಲಿ ಮಕ್ಕಳ ರಕ್ಷಣಾ ಸಮಿತಿಗಳನ್ನು ತಕ್ಷಣ ಬಲಪಡಿಸುವಂತೆ, ಪೋಷಕರನ್ನು ಜಾಗ್ರತಗೊಳಿಸುವಂತೆ ಮತ್ತು ತರಬೇತಿ ನೀಡುವಂತೆ ಕರೆ ನೀಡಿರುವ ಎನ್ಜಿಒಗಳು,ಈ ನಿಟ್ಟಿನಲ್ಲಿ ಸಾಕಷ್ಟು ಮುಂಗಡ ಪತ್ರ ಹಂಚಿಕೆಯನ್ನು ಮಾಡುವಂತೆ ಸರಕಾರವನ್ನು ಆಗ್ರಹಿಸಿವೆ.
 
ರಾಷ್ಟ್ರೀಯ ಅಪರಾಧ ದಾಖಲೆಗಳ ಘಟಕದ ಇತ್ತೀಚಿನ ಅಂಕಿಅಂಶಗಳಂತೆ 2020ರಲ್ಲಿ ಭಾರತದಲ್ಲಿ 59,262 ಮಕ್ಕಳು ನಾಪತ್ತೆಯಾಗಿದ್ದರು. ಅದಕ್ಕೂ ಹಿಂದಿನ ವರ್ಷಗಳಲ್ಲಿ 48,972 ಮಕ್ಕಳನ್ನು ಪತ್ತೆ ಹಚ್ಚಲು ಸಾಧ್ಯವಾಗಿರಲಿಲ್ಲ. ಇದರೊಂದಿಗೆ ನಾಪತ್ತೆಯಾಗಿರುವ ಮಕ್ಕಳ ಒಟ್ಟು ಸಂಖ್ಯೆ 1,08,234ಕ್ಕೇರಿದೆ. 2008 ಮತ್ತು 2020ರ ನಡುವೆ ವಾರ್ಷಿಕವಾಗಿ ಮಕ್ಕಳ ನಾಪತ್ತೆ ಪ್ರಕರಣಗಳು ಹೆಚ್ಚುಕಡಿಮೆ 13 ಪಟ್ಟು ಹೆಚ್ಚಾಗಿವೆ. 2008ರಲ್ಲಿ 7,650 ಮಕ್ಕಳು ನಾಪತ್ತೆಯಾಗಿದ್ದರು.

ಕಳೆದೆರಡು ವರ್ಷಗಳಲ್ಲಿ ಕೈಲಾಶ್ ಸತ್ಯಾರ್ಥಿ ಪ್ರತಿಷ್ಠಾನದ ಸೋದರಿ ಸಂಸ್ಥೆಯಾಗಿರುವ ಬಚಪನ್ ಬಚಾವೋ ಆಂದೋಲನ್ ದೇಶಾದ್ಯಂತ ಸುಮಾರು 12,000 ಮಕ್ಕಳನ್ನು ರಕ್ಷಿಸಿದೆ. ಸಾಂಕ್ರಾಮಿಕದ ಬಳಿಕ ಮಕ್ಕಳ ಕಳ್ಳ ಸಾಗಾಣಿಕೆ ತೀವ್ರವಾಗಿ ಹೆಚ್ಚಿದೆ ಎನ್ನುವುದನ್ನು ಇದು ತೋರಿಸುತ್ತಿದೆ ಎಂದು ಸಂಘಟನೆಯ ಕಾರ್ಯಕಾರಿ ನಿರ್ದೇಶಕ ಧನಂಜಯ ಟಿಂಗಳ್ ತಿಳಿಸಿದರು.
ಮಕ್ಕಳು ನಾಪತ್ತೆಯಾಗುತ್ತಿರುವುದಕ್ಕೆ ಅಥವಾ ಕಳ್ಳ ಸಾಗಾಣಿಕೆಯ ಬಲಿಪಶುಗಳಾಗುತ್ತಿರುವುದಕ್ಕೆ ಹೆಚ್ಚುತ್ತಿರುವ ಬಡತನವು ಪ್ರಮುಖ ಕಾರಣವಾಗಿದೆ ಎಂದು ಚೈಲ್ಡ್ ಪ್ರೊಟೆಕ್ಷನ್ನ ಪ್ರಭಾತ್ ಕುಮಾರ್ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X