Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಆಳ ಸಮುದ್ರ ಗಣಿಗಾರಿಕೆಗೆ ಕಟ್ಟುನಿಟ್ಟಿನ...

ಆಳ ಸಮುದ್ರ ಗಣಿಗಾರಿಕೆಗೆ ಕಟ್ಟುನಿಟ್ಟಿನ ಪರಿಸರ ನಿಯಮ: ಜಿ7 ದೇಶಗಳ ಸಹಮತ

ವಾರ್ತಾಭಾರತಿವಾರ್ತಾಭಾರತಿ28 May 2022 11:49 PM IST
share

ಬರ್ಲಿನ್, ಮೇ 28: ಆಳ ಸಮುದ್ರ ಗಣಿಗಾರಿಕೆಗೆ ಕಟ್ಟುನಿಟ್ಟಿನ ಪರಿಸರ ನಿಯಮ ರೂಪಿಸಲು ಮತ್ತು ಸಮುದ್ರ ಪರಿಸರಕ್ಕೆ ಗಂಭೀರ ಹಾನಿಯಾಗದಿದ್ದರೆ ಮಾತ್ರ ಇಂತಹ ಗಣಿಗಾರಿಕೆಗೆ ಅನುಮತಿ ನೀಡುವ ಬಗ್ಗೆ ಜಿ7 ದೇಶಗಳು ಶುಕ್ರವಾರ ಸಹಮತ ವ್ಯಕ್ತಪಡಿಸಿವೆ.

ಆಳ ಸಮುದ್ರ ಗಣಿಗಾರಿಕೆಯು ಅತ್ಯಂತ ಕಟ್ಟುನಿಟ್ಟಿನ ಪರಿಸರ ಮಾನದಂಡದ ಅಡಿಯಲ್ಲಿ ಮಾತ್ರ ನಡೆಯಬೇಕೆಂದು ನಾವು ನಿರ್ಧರಿಸಿದ್ದೇವೆ ಎಂದು ಬರ್ಲಿನ್ನಲ್ಲಿ ನಡೆದ ಜಿ7 ದೇಶಗಳ ಸಚಿವರ ಸಮಾವೇಶದ ಬಳಿಕ ಜರ್ಮನಿಯ ಪರಿಸರ ಸಚಿವೆ ಸ್ಟೆಫಿ ಲೆಮ್ಕೆ ಸುದ್ಧಿಗೋಷ್ಟಿಯಲ್ಲಿ ಹೇಳಿದರು.

ಯಾವುದೇ ರಾಷ್ಟ್ರೀಯ ಸಮುದ್ರವ್ಯಾಪ್ತಿಯ ಹೊರಗಿನ ಪ್ರದೇಶಗಳಲ್ಲಿ ಆಳ ಸಮುದ್ರ ತಳದ ಗಣಿಗಾರಿಕೆಯನ್ನು ನಿಯಂತ್ರಿಸುವ ನಿಯಮಗಳನ್ನು ವಿಶ್ವಸಂಸ್ಥೆಯ ಸಹಸಂಸ್ಥೆ ‘ಇಂಟರ್ನ್ಯಾಷನಲ್ ಸೀಬರ್ಡ್ ಅಥಾರಿಟಿ (ಐಎಸ್ಎ) ರೂಪಿಸುತ್ತಿದೆ. ಜಾಗತಿಕ ಕಾನೂನು ಅಸ್ತಿತ್ವಕ್ಕೆ ಬರುವವರೆಗೆ ಸಮುದ್ರ ತಳದ ಗಣಿಗಾರಿಕೆಗೆ ಅವಕಾಶವಿಲ್ಲ. ಭವಿಷ್ಯದಲ್ಲಿ ಸಂಭವನೀಯ ಆಳಸಮುದ್ರ ಗಣಿಗಾರಿಕೆಗೆ ಸಂಬಂಧಿಸಿದಂತೆ, ಸಮುದ್ರ ಪರಿಸರಕ್ಕೆ ಹಾನಿಯನ್ನು ತಡೆಗಟ್ಟುವ ಸಲುವಾಗಿ ಮಾನವ ಚಟುವಟಿಕೆಯನ್ನು ನಿಯಂತ್ರಿಸುವ ಅನನ್ಯ ಅವಕಾಶವನ್ನು ನಾವು ಸ್ಪಷ್ಟಪಡಿಸಿದ್ದೇವೆ ಎಂದು ಸಮಾವೇಶದ ಅಂತ್ಯದಲ್ಲಿ ಹೊರಡಿಸಿದ ಹೇಳಿಕೆಯಲ್ಲಿ ಉಲ್ಲೇಖಿಸಲಾಗಿದೆ. ಆಳ ಸಮುದ್ರ ಪರಿಸರಕ್ಕೆ ಯಾವುದೇ ಗಂಭೀರ ಹಾನಿಯಾಗುವುದಿಲ್ಲ ಎಂಬುದನ್ನು ಸ್ಪಷ್ಟಪಡಿಸಿದರೆ ಮಾತ್ರ ಭವಿಷ್ಯದಲ್ಲಿ ಆಳ ಸಮುದ್ರ ಗಣಿಗಾರಿಕೆಗೆ ಐಎಸ್ಎ ಸಮಿತಿ ಅನುಮತಿ ಒದಗಿಸಲಿದೆ ಎಂದು ಹೇಳಿಕೆ ತಿಳಿಸಿದೆ. 

ಆಳ ಸಮುದ್ರ ಗಣಿಗಾರಿಕೆಯಲ್ಲಿ ಪೆಸಿಫಿಕ್ ಸಾಗರದ ಸುಮಾರು 6 ಕಿ.ಮೀ ಆಳದ ತಳದಲ್ಲಿರುವ ಬಟಾಟೆ ಗಾತ್ರದ ಕಲ್ಲುಗಳಲ್ಲಿರುವ ಕೋಬಾಲ್ಟ್, ನಿಕೆಲ್ ಹಾಗೂ ಇತರ ಬ್ಯಾಟರಿ ಲೋಹಗಳನ್ನು ಹೀರಿ ತೆಗೆಯಲಾಗುತ್ತದೆ. ಆಳ ಸಮುದ್ರ ಗಣಿಗಾರಿಕೆಯಿಂದ ಸಮುದ್ರದ ತಳದಲ್ಲಿ ನೆಲೆ ಕಂಡುಕೊಂಡಿರುವ ಕೆಲವು ಜೀವಿಗಳಿಗೆ ತೊಂದರೆಯಾಗುವುದರಿಂದ ಅದನ್ನು ನಿಷೇಧಿಸಬೇಕು ಎಂದು ಹಲವು ವಿಜ್ಞಾನಿಗಳು ಹಾಗೂ ಪರಿಸರವಾದಿಗಳು ಆಗ್ರಹಿಸಿದ್ದಾರೆ. ನಿಷೇಧ ಅವಧಿ ರೂಪಿಸುವ ವಿಶ್ವ ವನ್ಯಜೀವಿ ನಿಧಿಯ ಕರೆಗೆ ಕಾರು ಉತ್ಪಾದಕ ಸಂಸ್ಥೆ ಬಿಎಂಡಬ್ಲ್ಯೂ, ಗೂಗಲ್ ಮುಂತಾದ ಪ್ರಮುಖ ಸಂಸ್ಥೆಗಳು ಧ್ವನಿಗೂಡಿಸಿವೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X