Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಆಧಾರ್‌ ಫೋಟೋಕಾಪಿ ʼದುರ್ಬಳಕೆʼ ಬಗ್ಗೆ...

ಆಧಾರ್‌ ಫೋಟೋಕಾಪಿ ʼದುರ್ಬಳಕೆʼ ಬಗ್ಗೆ ನೀಡಿದ್ದ ಎಚ್ಚರಿಕೆಯನ್ನು ಹಿಂಪಡೆದ ಕೇಂದ್ರ.!

ವಾರ್ತಾಭಾರತಿವಾರ್ತಾಭಾರತಿ29 May 2022 6:37 PM IST
share
ಆಧಾರ್‌ ಫೋಟೋಕಾಪಿ ʼದುರ್ಬಳಕೆʼ ಬಗ್ಗೆ ನೀಡಿದ್ದ ಎಚ್ಚರಿಕೆಯನ್ನು ಹಿಂಪಡೆದ ಕೇಂದ್ರ.!

ಹೊಸದಿಲ್ಲಿ,ಮೇ 29: ಪರವಾನಿಗೆ ಹೊಂದಿರದ ಖಾಸಗಿ ಸಂಸ್ಥೆಗಳೊಂದಿಗೆ ತಮ್ಮ ಆಧಾರ್ ಕಾರ್ಡ್ಗಳ ಫೋಟೊಪ್ರತಿಗಳನ್ನು ಹಂಚಿಕೊಳ್ಳದಂತೆ ತನ್ನ ಕಚೇರಿಯೊಂದು ಶುಕ್ರವಾರ ಸಾರ್ವಜನಿಕರಿಗೆ ನೀಡಿದ್ದ ಸೂಚನೆಯನ್ನು ಮಾಹಿತಿ ತಂತ್ರಜ್ಞಾನ ಸಚಿವಾಲಯವು ರವಿವಾರ ಹಿಂದೆಗೆದುಕೊಂಡಿದೆ. ಭಾರತೀಯ ವಿಶಿಷ್ಟ ಗುರುತುಚೀಟಿ ಪ್ರಾಧಿಕಾರ (ಯುಐಡಿಎಐ)ದ ಬೆಂಗಳೂರು ವಲಯ ಕಚೇರಿಯು ಆಧಾರ್ ಕಾರ್ಡ್ಗಳ ಫೋಟೊಪ್ರತಿಗಳು ದುರ್ಬಳಕೆಯಾಗಬಹುದು ಎಂಬ ಎಚ್ಚರಿಕೆಯೊಂದಿಗೆ ಪತ್ರಿಕಾ ಹೇಳಿಕೆಯನ್ನು ಶುಕ್ರವಾರ ಹೊರಡಿಸಿತ್ತು.

ಸಾರ್ವಜನಿಕರು ವಿಶಿಷ್ಟ ಗುರುತು ಸಂಖ್ಯೆಯ ಕೊನೆಯ ನಾಲ್ಕು ಅಂಕಿಗಳನ್ನು ಮಾತ್ರ ತೋರಿಸುವ ಮಾಸ್ಕ್ ಮಾಡಿದ ಆಧಾರ್ ಕಾರ್ಡ್ಗಳನ್ನು ಬಳಸಬೇಕು ಎಂದು ಹೇಳಿಕೆಯಲ್ಲಿ ತಿಳಿಸಲಾಗಿತ್ತು. ಮಾಸ್ಕ್ ಮಾಡಲಾದ ಆಧಾರ್ ಕಾರ್ಡ್ಗಳನ್ನು ಯುಐಡಿಎಐ ವೆಬ್ಸೈಟ್ನಿಂದ ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ.
ಆದಾಗ್ಯೂ ಪತ್ರಿಕಾ ಹೇಳಿಕೆಯ ತಪ್ಪು ವ್ಯಾಖ್ಯಾನದ ಸಾಧ್ಯತೆಯ ಹಿನ್ನೆಲೆಯಲ್ಲಿ ಮಾಹಿತಿ ತಂತ್ರಜ್ಞಾನ ಸಚಿವಾಲಯವು ರವಿವಾರ ತನ್ನ ಸಲಹೆಯನ್ನು ಹಿಂಪಡೆದುಕೊಂಡಿದೆ. ಆಧಾರ್ನ ದುರುಪಯೋಗದ ಕುರಿತು ಖಾಸಗಿತನ ಹಕ್ಕುಗಳ ಕಾರ್ಯಕರ್ತರು ವ್ಯಕ್ತಪಡಿಸಿದ್ದ ಕಳವಳಗಳನ್ನು ಸರಕಾರವು ಪದೇಪದೇ ತಿರಸ್ಕರಿಸಿತ್ತು ಎಂದು ಸಾಮಾಜಿಕ ಮಾಧ್ಯಮ ಬಳಕೆದಾರರು ಬೆಟ್ಟು ಮಾಡಿದ ಬಳಿಕ ಸಚಿವಾಲಯವು ಈ ನಿರ್ಧಾರವನ್ನು ಕೈಗೊಂಡಿದೆ.

ಹೋಟೆಲ್ಗಳು ಮತ್ತು ಚಲನಚಿತ್ರ ಮಂದಿರಗಳಂತಹ ಖಾಸಗಿ ಸಂಸ್ಥೆಗಳು ಆಧಾರ್ ಕಾರ್ಡ್ಗಳ ಪ್ರತಿಗಳನ್ನು ಸಂಗ್ರಹಿಸುವುದು ಆಧಾರ್ ಕಾಯ್ದೆ 2016ರಡಿ ಅಪರಾಧವಾಗುತ್ತದೆ. ತನ್ನಿಂದ ಬಳಕೆದಾರ ಪರವಾನಿಗೆಯನ್ನು ಪಡೆದಿರುವ ಸಂಸ್ಥೆಗಳು ಮಾತ್ರ ವ್ಯಕ್ತಿಯ ಗುರುತಿನ ಪುರಾವೆಗಾಗಿ ಆಧಾರ್ ಅನ್ನು ಬಳಸಬಹುದು ಎಂದು ಯುಐಡಿಎಐ ಶುಕ್ರವಾರ ಹೇಳಿತ್ತು. ಡಿಜಿಟಲ್ ಆವೃತ್ತಿಯಾದ ಇ-ಆಧಾರ್ಗಾಗಿ ಇಂಟರ್ನೆಟ್ ಕೆಫೆಗಳು ಅಥವಾ ಕಿಯೋಸ್ಕ್ಗಳಲ್ಲಿಯ ಸಾರ್ವಜನಿಕ ಕಂಪ್ಯೂಟರ್ಗಳನ್ನು ಬಳಸದಂತೆಯೂ ಹೇಳಿಕೆಯಲ್ಲಿ ಸಲಹೆ ನೀಡಲಾಗಿತ್ತು.

ಆಧಾರ್ ವಿವರಗಳನ್ನು ಬಳಸುವಾಗ ಮತ್ತು ಹಂಚಿಕೊಳ್ಳುವಾಗ ಸಾಮಾನ್ಯ ವಿವೇಚನೆಯನ್ನು ಬಳಸುವಂತೆ ಮಾತ್ರ ಸಾರ್ವಜನಿಕರಿಗೆ ಸಲಹೆ ನೀಡಲಾಗಿದೆ ಎಂದು ಕೇಂದ್ರವು ರವಿವಾರ ತಿಳಿಸಿದೆ. ಫೋಟೊಶಾಪ್ ಮಾಡಲಾಗಿದ್ದ ಆಧಾರ್ ಕಾರ್ಡ್ನ ದುರುಪಯೋಗ ಪ್ರಯತ್ನದ ಸಂದರ್ಭದಲ್ಲಿ ಶುಕ್ರವಾರದ ಸಲಹೆಯನ್ನು ಹೊರಡಿಸಲಾಗಿತ್ತು ಎಂದು ಅದು ಹೇಳಿದೆ.

48 hours after issuing advisory on NOT sharing Aadhar photocopy, GOI WITHDRAWS it!! Now says just exercise ‘normal prudence’! Wow! First create panic in system,then claim it’s misinterpreted, now withdraw it! Classic yes minister: Does left hand even know what right is doing?

— Rajdeep Sardesai (@sardesairajdeep) May 29, 2022

Clarification dated May 29,2022 by UIDAI in "panic" reiterates the content of the press release of UIDAI dated May 27,2022. The "withdrawal" of the latter is inconsequential.

Rajdeep protected nilekani from questions of journalists in 2010. #inquisitionhttps://t.co/r3P9InaxN0 pic.twitter.com/AYktsDqpOi

— GKrishna (@krishna1715) May 29, 2022

When activists warned about the potential misuse of Aadhar, they were mocked at. Today, GOI issues the warning itself. Much good has come from Aadhar in improving delivery systems, but no tech is infallible. https://t.co/cMuHqGHmqy

— Rajdeep Sardesai (@sardesairajdeep) May 29, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X