ಮರದಿಂದ ಬಿದ್ದು ಮೃತ್ಯು
ಕೋಟ : ಹಲಸಿನ ಹಣ್ಣು ಕೊಯ್ಯಲು ಮರ ಹತ್ತಿದ್ದ ವ್ಯಕ್ತಿಯೊಬ್ಬರು ಆಕಸ್ಮಿಕವಾಗಿ ಕೆಳಗೆ ಬಿದ್ದು ಮೃತಪಟ್ಟಿರುವ ಘಟನೆ ಮೇ 28ರಂದು ಮಧ್ಯಾಹ್ನ ವೇಳೆ ನಡೆದಿದೆ.
ಮೃತರನ್ನು ನಂಚಾರು ಗ್ರಾಮದ ಅಂಡಾರುಕಟ್ಟೆ ನಿವಾಸಿ ಮಂಜುನಾಥ ಶೆಟ್ಟಿ (೫೦) ಎಂದು ಗುರುತಿಸಲಾಗಿದೆ. ಇವರು ಮನೆಯ ಎದುರು ಇರುವ ಮರಕ್ಕೆ ಹಲಸಿನ ಹಣ್ಣು ಕೊಯ್ಯಲು ಹತ್ತಿದ್ದು, ಈ ವೇಳೆ ಅವರು ಆಕಸ್ಮಿಕವಾಗಿ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲಿಯೇ ಮೃತಪಟ್ಟರು.
ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story